Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಜಿಲ್ಲಾ ವಾರ್ತಾ ಕಚೇರಿಗೆ ಆಯುಕ್ತ ಡಾ. ಪಿ. ಎಸ್ ಹರ್ಷ ಭೇಟಿ
    ಉಡುಪಿ ಜಿಲ್ಲೆ

    ಉಡುಪಿ: ಜಿಲ್ಲಾ ವಾರ್ತಾ ಕಚೇರಿಗೆ ಆಯುಕ್ತ ಡಾ. ಪಿ. ಎಸ್ ಹರ್ಷ ಭೇಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ. ಪಿ. ಎಸ್ ಹರ್ಷ ಉಡುಪಿಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಕರ ಕಚೇರಿಗೆ ಭೇಟಿ ನೀಡಿ, ಕಡತಗಳ ಪರಿಶೀಲನೆ ನಡೆಸಿದರು.

    Click Here

    Call us

    Click Here

    ವಾರ್ತಾ ಇಲಾಖೆಯು ಹಿಂದೆ ಸರ್ಕಾರದ ಕಾರ್ಯಕ್ರಮಗಳು ಮತ್ತು ಯೋಜನೆಗಳ ಬಗ್ಗೆ ಪ್ರಚಾರ ಪಡಿಸುತ್ತಿದ್ದು, ಆದರೆ ಪ್ರಸ್ತುತ ದಿನಗಳಲ್ಲಿ ಸರ್ಕಾರ ಮತ್ತು ಸಾರ್ವಜನಿಕರ ಕೊಂಡಿಯಾಗಿಯೂ ಕಾರ್ಯ ನಿರ್ವಹಿಸಬೇಕಾಗಿದ್ದು, ಅತ್ಯಂತ ಜವಾಬ್ದಾರಿಯುತವಾಗಿ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಕಚೇರಿ ಸಮಯದ ಹೊರತಾಗಿಯೂ ಕಾರ್ಯ ನಿರ್ವಹಿಸಬೇಕೆಂದು, ಕಚೇರಿಯ ಎಲ್ಲಾ ಸಿಬ್ಬಂದಿಗಳು ತಮ್ಮ ದೈನಂದಿನ ಕರ್ತವ್ಯದ ಜೊತೆಗೆ ಕಚೇರಿಯ ಇನ್ನಿತರ ಕಾರ್ಯಗಳನ್ನೂ ಸಹ ತಮ್ಮ ಕರ್ತವ್ಯ ಎಂದು ಭಾವಿಸಿ ತಪ್ಪದೇ ಮಾಡಬೇಕು. ಪ್ರಸ್ತುತ ದಿನಗಳಲ್ಲಿ ಜನಸಾಮಾನ್ಯರು ಆಧುನಿಕ ಡಿಜಿಟಲ್ ಮಾಧ್ಯಮಗಳಿಗೆ ಮಾರು ಹೋಗುತ್ತಿರುವ ಹಿನ್ನಲೆಯಲ್ಲಿ , ನಮ್ಮ ಇಲಾಖೆಯ ಸಾಂಪ್ರದಾಯಿಕ ಸುದ್ದಿ ಹಾಗೂ ಸರ್ಕಾರದ ಕಾರ್ಯಕ್ರಮಗಳ ಪ್ರಚಾರದ ಜೊತೆಗೆ ಸಾಮಾಜಿಕ ಮಾಧ್ಯಮಗಳ ಮೂಲಕವೂ ಪ್ರಚಾರ ಪಡಿಸಬೇಕು ಕಚೇರಿಯಲ್ಲಿ ಯಾವುದೇ ರೀತಿಯ ಕಾರ್ಯಗಳನ್ನು ನಿರ್ವಹಿಸುವಾಗ ನಿಖರ ಮಾಹಿತಿಯನ್ನು ತಪ್ಪದೇ ನಮೂದು ಮಾಡಬೇಕು ತಪ್ಪಿದಲ್ಲಿ ಅವು ಮುಂದಿನ ದಿನಗಳಲ್ಲಿ ಸಮಸ್ಯೆಯೊಡ್ಡುವ ಸಾಧ್ಯತೆಗಳಿದ್ದು, ಇದಕ್ಕೇ ಆಸ್ಪದ ನೀಡಬಾರದು.

    ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರಿಗೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನೀಡುತ್ತಿರುವ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ಗಳನ್ನು ವಿತರಿಸಿ ಅವರೊಂದಿಗೆ ಮಾತನಾಡಿ, ಅವರುಗಳ ಸಮಸ್ಯೆ ಸೇರಿದಂತೆ ಮತ್ತಿತರ ಸಲಹೆಗಳನ್ನು ಆಲಿಸಿ ಮಾತನಾಡಿ, ಸರ್ಕಾರ ಪತ್ರಕರ್ತರ ಕಲ್ಯಾಣಾಭಿವೃಧ್ದಿಗೆ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ ಇವುಗಳನ್ನು ಅರ್ಹ ಪತ್ರಕರ್ತರಿಗೆ ತಲುಪಿಸುವ ಜವಾಬ್ದಾರಿಯನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು ತಪ್ಪದೇ ಅನುಷ್ಠಾನಗೊಳಿಸಬೇಕು.

    ಮಾಧ್ಯಮ ಮಾನ್ಯತೆ ಕಾರ್ಡ್ ಸೇರಿದಂತೆ ಆರೋಗ್ಯ ಕಾರ್ಡ್ ಸಹ ಎಲ್ಲಾ ಪತ್ರಕರ್ತರಿಗೂ ಲಭ್ಯವಾಗಬೇಕು ಎಂಬ ಮನವಿಗೆ ಸ್ಪಂದಿಸಿದ ಅವರು, ಪತ್ರಿಕೆಯ ಮಾಲೀಕರು ತಮ್ಮ ಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪತ್ರಕರ್ತರ ಬಗ್ಗೆ ಸೂಕ್ತ ದಾಖಲೆಗಳನ್ನು ನೀಡಿದಲ್ಲಿ ನಿಯಮಾನುಸಾರ ಅವರುಗಳಿಗೆ ಮಾಧ್ಯಮ ಮಾನ್ಯತೆ ಕಾರ್ಡ್ ಮತ್ತಿತರ ಸೌಲಭ್ಯ ನೀಡಲು ಸಾಧ್ಯವಾಗುತ್ತದೆ ಎಂದರು.

    ಪತ್ರಿಕಾ ಭವನಕ್ಕೆ ಭೇಟಿ ನೀಡಿದ ಆಯುಕ್ತರು, ಭವನದ ಪರಿಶೀಲನೆ ನಡೆಸಿದರು. ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಹಾಗೂ ಪತ್ರಕರ್ತರು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    1 × two =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.