ಉದ್ಯಮಶೀಲತೆ ಅಭಿವೃದ್ಧಿ ಪಡಿಸುವ ವಿಧಾನ, ಸರಕಾರದ ಯೋಜನೆಗಳು ಮಾಹಿತಿ: ವೆಬಿನಾರ್

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಐಕ್ಯಾಎಸಿ ’ಆಶ್ರಯದಲ್ಲಿ ವೃತ್ತಿಯಾಗಿ ಉದ್ಯಮಶೀಲತೆ’ ಎಂಬ ವಿಷಯದ ಕುರಿತು ರಾಷ್ಟ್ರೀಯ ವೆಬಿನಾರ್ ನಡೆಯಿತು.

Call us

Click Here

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಮಂಗಳೂರಿನ ಎಂ. ಎಸ್. ಎಮ್. ಇ ಸಂಸ್ಥೆಯ ಸುಂದರ ಶೇರಿಗಾರ್ ಮಾತನಾಡಿ ಉದ್ಯಮ ಶೀಲತೆಯನ್ನು ಅಭಿವೃದ್ಧಿ ಪಡಿಸುವ ವಿಧಾನಗಳು, ಪ್ರಸ್ತುತ ಪ್ರವೃತ್ತಿಗಳು ಅದಕ್ಕೆ ಪೂರಕವಾಗಿ ಇರುವಂತಹ ಸರಕಾರದ ಯೋಜನೆಗಳು ಮತ್ತು ಸವಲತ್ತುಗಳ ಕುರಿತು ತಿಳಿಸಿದರು.

ಅಲ್ಲದೇ ಉದ್ಯಮ ಶೀಲತೆಯನ್ನು ಕೈಗೊಳ್ಳುವಲ್ಲಿ ಉತ್ತೇಜನಕಾರಿ ಯೋಜನೆಗಳು ಮತ್ತು ಆಲೋಚನೆಗಳು ಮತ್ತು ವ್ಯಕ್ತಿಯ ಪಾಲ್ಗೊಳ್ಳುವಿಕೆಯ ಪ್ರಾಮುಖ್ಯತೆ  ಮತ್ತು ಅವನು ಸವಾಲುಗಳನ್ನು ಸುಲಭಾಗಿ ಎದುರಿಸುವಲ್ಲಿ ಹಲವು ಸಲಹೆಗಳನ್ನು ನೀಡಿದರು.

ಕಾರ್ಯಕ್ರಮದಲ್ಲಿ ಡಾ. ಎನ್. ಪಿ ನಾರಾಯಣ ಶೆಟ್ಟಿ ಮಾತನಾಡಿದರು.

ಕಾರ್ಯಕ್ರಮ ಸಂಯೋಜಕರಾದ ಉಪನ್ಯಾಸಕ ಪ್ರಶಾಂತ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿದರು. ಉಪನ್ಯಾಸಕ ಅಂಜನ್ ‌ಕುಮಾರ್ ವಂದಿಸಿದರು. ವಿಭಾಗ ಮುಖ್ಯಸ್ಥೆ ಅರ್ಚನಾ ಅರವಿಂದ್ ಉಪಸ್ಥಿತರಿದ್ದರು.

Click here

Click here

Click here

Click Here

Call us

Call us

ಕಾಲೇಜಿನ ಐಟಿ ತಂಡದ ಸದಸ್ಯರಾದ ಅಮರ್ ಸಿಕ್ವೆರಾ, ಶಂಕರನಾರಾಯಣ, ವಿಕ್ರಮ್ ಮತ್ತು ಗುರುದಾಸ ಪ್ರಭು ತಾಂತ್ರಿಕ ಸಲಹೆಗಾರರಾಗಿ ಕಾರ್ಯ ನಿರ್ವಹಿಸಿದರು.

Leave a Reply