Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಿರಂತರವಾಗಿ ಸುರಿದ ಮಳೆ: ಹೊಳೆಯಂತಾದ ಹೆದ್ದಾರಿ. ಭತ್ತದ ಘಸಲು ಹಾನಿಯ ಚಿಂತೆ
    ಊರ್ಮನೆ ಸಮಾಚಾರ

    ನಿರಂತರವಾಗಿ ಸುರಿದ ಮಳೆ: ಹೊಳೆಯಂತಾದ ಹೆದ್ದಾರಿ. ಭತ್ತದ ಘಸಲು ಹಾನಿಯ ಚಿಂತೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ವರದಿ.
    ಕುಂದಾಪುರ: ಕುಂದಾಪುರ ಹಾಗೂ ಬೈಂದೂರು ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದ್ದು ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದರೆ, ಹಳ್ಳಗಳು ತುಂಬಿ ಹರಿಯುತ್ತಿವೆ. ಭತ್ತದ ಗದ್ದೆಗಳಲ್ಲೂ ನೀರು ಭರ್ತಿಯಾಗಿದ್ದು, ಬೀಳುವ ಮಳೆ ಒಣಗುವ ಹಂತ ತಲಪಿದ್ದ ಫಸಲಿಗೆ ಹಾನಿ ಮಾಡುತ್ತಿದೆ.

    Click Here

    Call us

    Click Here

    ಸೋಮವಾರ ರಾತ್ರಿಯಿಂದಲೇ ಗಾಳಿ ಸಹಿತ ಭಾರೀ ಮಳೆಯಾಗಿದೆ. ಮಂಗಳವಾರ ಬೆಳಗ್ಗಿನಿಂದ ಮತ್ತೆ ಆರಂಭಗೊಂಡ ಮಳೆ ಮಧ್ಯಾಹ್ನದವರೆಗೂ ಆ ಬಳಿಕವೂ ಭಾರೀ ಮಳೆಯಾಗಿದೆ. ಬುಧವಾರವೂ ರಾತ್ರಿ ಹಾಗೂ ಬೆಳಿಗ್ಗೆ ಮಳೆಯಾಗಿದ್ದು, ದಿನವಿಡಿ ಮೋಡ ಕವಿದ ವಾತಾವರಣವಿತ್ತು.

    ಉಭಯ ತಾಲೂಕುಗಳ ತೆಕ್ಕಟ್ಟೆ, ಕುಂಭಾಶಿ, ಕೋಟೇಶ್ವರ, ಬಿದ್ಕಲ್ಕಟ್ಟೆ, ಹಾಲಾಡಿ, ಗೋಳಿಯಂಗಡಿ, ಬೆಳ್ವೆ, ಮಡಾಮಕ್ಕಿ, ಅಮಾಸೆಬೈಲು, ಶಂಕರನಾರಾಯಣ, ಸಿದ್ದಾಪುರ, ಹೊಸಂಗಡಿ, ಅಂಪಾರು, ಕಂಡೂರು, ನೇರಳಕಟ್ಟೆ, ಆಜ್ರಿ, ಕೊಲ್ಲೂರು, ವಂಡ್ಸೆ, ಕುಂದಾಪುರ, ತಲ್ಲೂರು, ಹೆಮ್ಮಾಡಿ, ತ್ರಾಸಿ, ಗಂಗೊಳ್ಳಿ, ಮರವಂತೆ, ಹಕ್ಲಾಡಿ, ನಾವುಂದ, ಉಪ್ಪುಂದ, ಬೈಂದೂರು, ಶಿರೂರು ಸೇರಿದಂತೆ ಎಲ್ಲ ಕಡೆಗಳಲ್ಲಿ ನಿರಂತರ ಮಳೆಯಾಗಿದೆ.

    ಕುಂದಾಪುರ ಬೈಂದೂರು ಭಾಗದಲ್ಲಿ ಹಿಂದಿಗಿಂತ ಹೆಚ್ಚು ಪ್ರದೇಶಗಳಲ್ಲಿ ಭತ್ತದ ಕೃಷಿ ಮಾಡಲಾಗಿದ್ದು, ಆದರೆ ಈಗ ಭತ್ತದ ತೆನೆಗಳು ಫಸಲು ಬಿಟ್ಟು, ಬೆಳೆಯುವ ಸಮಯವಾಗಿದ್ದು, ಈ ಸಂದರ್ಭ ಮಳೆ ಬಂದರೆ ಸಂಪುರ್ಣ ಫಸಲೇ ನಾಶವಾಗುವ ಭೀತಿ ರೈತರದ್ದಾಗಿದೆ. ಈಗಾಗಲೇ ಜೂನ್, ಆಗಸ್ಟ್, ಸೆಪ್ಟಂಬರ್ನಲ್ಲಿ ಬಂದ ನೆರೆಗೆ ನಾವುಂದ ಗ್ರಾಮದ ಸಾಲ್ಬುಡ, ಕಂಡಿಕೇರಿ, ಸಸಿಹಿತ್ಲ ಭಾಗ, ಹಕ್ಲಾಡಿ, ತೋಪ್ಲು, ಕೋಡಿ ಮತ್ತಿತರ ಭಾಗಗಳಲ್ಲಿ ಭತ್ತದ ಪೈರು ಕೊಳೆತು ಹಾನಿಯಾಗಿತ್ತು. ಈಗ ಮತ್ತೆ ಫಸಲು ಬಿಡುವ ಸಮಯದಲ್ಲಿ ಹೀಗೆ ಮಳೆ ಬೀಳುತ್ತಿದ್ದು, ಕಟಾವಿಗೆ ಬಂದಿದ್ದ ಫಸಲಿಗೆ ಹಾನಿಯಾಗಲಿದೆ.

    Click here

    Click here

    Click here

    Click Here

    Call us

    Call us

    ಕೋಡಿ, ಗಂಗೊಳ್ಳಿ, ತ್ರಾಸಿ, ಕಂಚುಗೋಡು, ಮರವಂತೆ, ಕೊಡೇರಿ, ಮಡಿಕಲ್, ಶಿರೂರು ಸೇರಿದಂತೆ ಎಲ್ಲೆಡೆಯೂ ಕಡಲು ಬಿರುಸಾಗಿದ್ದು, 3 ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಇದರಿಂದಾಗಿ ಮೀನುಗಾರರು ಕಡಲಿಗಿಳಿದಿರಲಿಲ್ಲ.

    ಕುಂದಾಪುರ ರಾಷ್ಟ್ರೀಯ ಹೆದ್ದಾರಿ ಕೆಸರಿನ ಹೊಂಡವಾಗಿ ಮಾರ್ಪಾಡಾಗಿದೆ. ಸರ್ವೀಸ್ ರಸ್ತೆಯೇ ಹೆದ್ದಾರಿಯಾಗಿ ಪ್ರತಿದಿನ ಸಾವಿರಾರು ವಾಹನಗಳು ಓಡಾಟಕ್ಕೆ ಇದನ್ನೇ ಅನಿವಾರ್ಯವಾಗಿ ಬಳಸುತ್ತಿವೆ. ಇನ್ನು ಕೆಲವೆಡೆ ಹೆದ್ದಾರಿ ಬದಿಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿ ವಾಹನ ಮತ್ತು ಜನಸಂಚಾರಕ್ಕೆ ತೊಡಕಾಗುತ್ತಿದೆ. ಹೆದ್ದಾರಿಯ ಕೆಲವೆಡೆ ಗುತ್ತಿಗೆದಾರರು ಈಗ ಚರಂಡಿ ನಿರ್ಮಾಣ ಮಾಡುತ್ತಿದ್ದಾರೆ. ಮಳೆಯ ಕಾರಣ ಅದನ್ನು ನಿಲ್ಲಿಸಲಾಗಿದೆ. ಹೆದ್ದಾರಿಗೆ ಊರಿನ ರಸ್ತೆಗಳು ಬಂದು ಸೇರುವ ಸ್ಥಳಗಳಲ್ಲಿ ಚರಂಡಿ ಸೌಲಭ್ಯವಿಲ್ಲದ ಕಾರಣ ಧಾರಾಕಾರ ಮಳೆಗೆ ಕಾಲು ಮುಳುಗುವಷ್ಟು ನೀರು ನಿಂತಿದೆ. ಹೆದ್ದಾರಿಗಿಂತ ತಗ್ಗಿನಲ್ಲಿರುವ ರಸ್ತೆಗಳಲ್ಲಿ, ವಾಹನ ನಿಲುಗಡೆ ಪ್ರದೇಶಗಳಲ್ಲಿ, ಅಂಗಡಿಗಳ ಮುಂದೆ ಕೃತಕ ಕೆರೆ ಉಂಟಾಗಿ ಜನರ ಕಷ್ಟಪಟ್ಟು ಓಡಾಡಬೇಕಾಗಿದೆ. ಹೆದ್ದಾರಿ ಇಲಾಖೆಗೆ, ಗುತ್ತಿಗೆದಾರರಿಗೆ, ಸ್ಥಳೀಯಾಡಳಿತಕ್ಕೆ ಶಾಪ ಹಾಕುತ್ತಿದ್ದಾರೆ.

     

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    5 × 1 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.