Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾಲಕ್ಕೆ ತಕ್ಕಂತೆ ಉಪನ್ಯಾಸಕರಲ್ಲೂ ಬದಲಾವಣೆ ಅಗತ್ಯ: ಡಾ. ಶಶಿಧರ್ ಭಟ್
    alvas nudisiri

    ಕಾಲಕ್ಕೆ ತಕ್ಕಂತೆ ಉಪನ್ಯಾಸಕರಲ್ಲೂ ಬದಲಾವಣೆ ಅಗತ್ಯ: ಡಾ. ಶಶಿಧರ್ ಭಟ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಪಿ. ಜಿ. ಕಂಪ್ಯೂಟರ್ ಸೈನ್ಸ್ ಲ್ಯಾಬ್ ನಲ್ಲಿ ವೃತ್ತಿಪರ ವಾಣಿಜ್ಯ ವಿಭಾಗ ಆಯೋಜಿಸಿದ್ದ ಒಂದು ದಿನದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ ನಡೆಯಿತು

    Click Here

    Call us

    Click Here

    ಸಂಪನ್ಮೂಲ ವ್ಯಕ್ತಿಯಾಗಿ ಆಳ್ವಾಸ್ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಸಂಯೋಜಕ ಡಾ. ಶಶಿಧರ ಭಟ್ ಮಾತನಾಡಿ, ಇಂದಿನ ಶಿಕ್ಷಣ ವ್ಯವಸ್ಥೆ ಹೊಸ ಆಧುನಿಕ ತಂತ್ರಜ್ಞಾನವನ್ನು ಹೆಚ್ಚು ಅವಲಂಬಿಸಿದ್ದು, ಶಿಕ್ಷಕರು ಈ ಕಾಲದ ಅಗತ್ಯಕ್ಕೆ ತಕ್ಕಂತೆ ತಮ್ಮಲ್ಲಿ ಕೌಶಲ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ’ಇ – ಕಂಟೆಂಟ್ ಡೆವೆಲೆಪ್‌ಮೆಂಟ್’ ವಿಷಯದ ಕುರಿತು ಮಾತನಾಡಿದರು.

    ಪ್ರತಿಭಾವಂತ ವಿದ್ಯಾರ್ಥಿಗಳು ಮಾತ್ರ ವೃತ್ತಿಪರ ವಾಣಿಜ್ಯ ಕೋರ್ಸ್ ಗಳನ್ನು ಆಯ್ಕೆ ಮಾಡುತ್ತಾರೆ. ಸಿ. ಎ, ಸಿ.ಎಸ್, ಅಥವಾ ಅಂತಾರಾಷ್ಟ್ರೀಯ ಕೋರ್ಸ್‌ಗಳಾದ ಎ. ಸಿ. ಸಿ. ಎ; ಸಿ. ಎಮ್. ಎ. ಕೋರ್ಸ್‌ಗಳು ಬಹು ಸ್ಪರ್ಧಾತ್ಮಕ ಕೋರ್ಸ್‌ಗಳಾಗಿದ್ದು, ಇದಕ್ಕೆ ಸಾಮಾನ್ಯ ತರಗತಿಗಳಿಗಿಂತ ಬೇರೆ ರೀತಿಯ ತಯಾರಿ ಬೇಕಾಗುತ್ತದೆ. ಹಳೆಕಾಲದ ನೋಟ್ಸ್ ಮಾದರಿ ಸಾಧ್ಯವೇ ಇಲ್ಲ. ವಿದ್ಯಾರ್ಥಿಗಳ ಅಗತ್ಯತೆಯನ್ನು ಅರಿತು ಕೆಲಸ ಮಾಡುವ ಹಂತದಲ್ಲಿ ನಾವಿದ್ದೇವೆ. ಈ ನಿಟ್ಟಿನಲ್ಲಿ ಉಪನ್ಯಾಸಕರಿಗೆ ತರಬೇತಿ ಕಾರ್ಯಕ್ರಮಗಳು ನಡೆಯಬೇಕಿದೆ ಎಂದರು.

    ಕಾರ‍್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಕಾಲೇಜಿನ ಮ್ಯಾನೇಜ್‌ಮೆಂಟ್ ಮತ್ತು ಬಿ. ಎಚ್. ಆರ್. ಡಿ. ವಿಭಾಗದ ಡೀನ್ ಸುರೇಖಾ, ಕೆಲಸದ ಒತ್ತಡದ ನಡುವೆ ನಮ್ಮ ಮನಸ್ಥಿತಿ, ವಿಚಾರದ ಗುರಿ ಬದಲಾಗಬಹುದು, ಹೆಚ್ಚಿನ ಜವಾಬ್ದಾರಿಯನ್ನು ತೆಗೆದುಕೊಳ್ಳುವ ಪರಿಸ್ಥಿತಿಯೂ ಬರಬಹುದು. ಇ – ಕಂಟೆಂಟ್, ಆನ್ಲೈನ್ ಮಾದರಿ ಇನ್ನು ಸರ್ವೇ ಸಾಮಾನ್ಯವಾಗಿ ಬಿಡಬಹುದು. ಹಾಗಾಗಿ ಉಪನ್ಯಾಸಕರೂ ಹೊಸತನ್ನು ಕಲಿಯಲು ತರಬೇತಿ ಕಾರ್ಯಕ್ರಮಗಳ ಅಗತ್ಯವಿದೆ ಎಂದರು.

    ಪ್ರಾಸ್ತಾವಿಕ ಮಾತುಗಳನ್ನಾಡಿದ ವೃತ್ತಿಪರ ವಾಣಿಜ್ಯ ವಿಭಾಗದ ಮುಖ್ಯಸ್ಥ ಅಶೋಕ್. ಕೆ. ಜಿ., ತರಬೇತಿ ಕಾರ್ಯಕ್ರಮಗಳು ಒಬ್ಬರಿಗೆ ಮಾತ್ರ ಸೀಮಿತವಾಗಿರದೆ ಅದು ಅನೇಕ ಹೊಸ ನಾಯಕರನ್ನು ಹುಟ್ಟು ಹಾಕುವಲ್ಲಿ ಪ್ರೇರೇಪಿಸುತ್ತದೆ. ಪ್ರತಿಯೊಬ್ಬ ಉಪನ್ಯಾಸಕನೂ ಒಬ್ಬ ನಾಯಕನಾಗಿ, ತರಬೇತುದಾರನಾಗಿ ಕೆಲಸ ಮಾಡುವ ಅನಿವಾರ್ಯತೆಯಿದೆ ಎಂದು ತಿಳಿಸಿದರು.

    Click here

    Click here

    Click here

    Click Here

    Call us

    Call us

    ಒಂದು ದಿನದ ತರಬೇತಿಯಲ್ಲಿ ಜೂಮ್ ಬಳಸಿಕೊಂಡು ತರಗತಿಗಳನ್ನು ಚಿತ್ರೀಕರಿಸುವುದು, ಗೂಗಲ್‌ಮೀಟ್‌ನಲ್ಲಿ ಚಿತ್ರೀಕರಿಸಿದ ವೀಡಿಯೋ ಹಾಕಿ ವಿದ್ಯಾರ್ಥಿಗಳಿಗೆ ತಲುಪಿಸುವುದು, ಗೂಗಲ್ ಫಾರ್ಮ್ ತಯಾರಿಸುವುದು, ಇ -ಸರ್ಟಿಫಿಕೇಟ್ ತಯಾರಿ, ಪಠ್ಯಪುಸ್ತಕಗಳನ್ನು ಸ್ಕ್ಯಾನ್ ಮಾಡಿ ಇ – ಗ್ರಂಥಾಲಯ ಮಾಡುವುದನ್ನು ಹೇಳಿಕೊಡಲಾಯಿತು.

    ಉಪನ್ಯಾಸಕಿ ಪೂರ್ಣಿಮಾ ಕಾರ್ಯಕ್ರಮವನ್ನು ನಿರೂಪಿಸಿ, ಉಪನ್ಯಾಸಕಿ ಪ್ರತಿಷ್ಟಾ ಜೈನ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣ

    30/04/2026
    Leave A Reply Cancel Reply

    two + fourteen =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.