ಹಾಪ್‌ಕಾಮ್ಸ್ ನೂತನ ಅಧ್ಯಕ್ಷರಾಗಿ ಸೀತಾರಾಮ ಗಾಣಿಗ ಹಾಲಾಡಿ ಆಯ್ಕೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ತೋಟಗಾರಿಕಾ ಉತ್ಪನ್ನ ಬೆಳೆಗಾರರ ಸಹಕಾರ ಮಾರಾಟ ಮತ್ತು ಸಂಸ್ಕರಣಾ ಸಂಘದ(ಹಾಪ್‌ಕಾಮ್ಸ್) ನೂತನ ಅಧ್ಯಕ್ಷರಾಗಿ ಜಿಲ್ಲಾ ಭಾರತೀಯ ಕಿಸಾನ್ ಸಂಘ ಬೆಂಬಲಿತ ನಿರ್ದೇಶಕ ಸೀತಾರಾಮ ಗಾಣಿಗ ಹಾಲಾಡಿ ಹಾಗೂ ಉಪಾಧ್ಯಕ್ಷರಾಗಿ ವಿನಯಾ ರಾನಡೆ ಮಾಳ ಆಯ್ಕೆಯಾಗಿದ್ದಾರೆ.

Call us

Click Here

ಸೀತಾರಾಮ ಗಾಣಿಗ ಅವರು ಭಾರತೀಯ ಕಿಸಾನ್ ಸಂಘದ ಕುಂದಾಪುರ ತಾಲ್ಲೂಕು ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ, ರೈತಪರ ಹೋರಾಟಗಳ ಮೂಲಕ ಹಾಪ್ಕಾಘಮ್ಸ್ ನಿರ್ದೇಶಕರಾದರು. ಹಾಪ್‌ಕಾಮ್ಸ್ ಮೂಲಕ ಜಿಲ್ಲೆಯ ರೈತರು ಬೆಳೆದ ತರಕಾರಿ, ಹಣ್ಣುಗಳು ಹಾಗೂ ತೋಟಗಾರಿಕಾ ಬೆಳೆಗಳಿಗೆ ಉತ್ತಮ ಮೌಲ್ಯ ಕೊಡಿಸುವ ನಿಟ್ಟಿನಲ್ಲಿ ಭಾರತೀಯ ಕಿಸಾನ್ ಸಂಘದ ರೈತ ಪ್ರತಿನಿಧಿಗಳು ಗೆಲುವು ಸಾಧಿಸಿದ್ದಾರೆ ಎಂದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply