Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಡಳಿತದಿಂದ ಕಣ್ಣೊರೆಸುವ ತಂತ್ರ ನಡೆದಿದೆ ಹೊರತು ದಲಿತರಿಗೆ ಭೂಮಿ ದೊರೆತಿಲ್ಲ: ಮಂಜುನಾಥ ಗಿಳಿಯಾರು
    ಊರ್ಮನೆ ಸಮಾಚಾರ

    ಆಡಳಿತದಿಂದ ಕಣ್ಣೊರೆಸುವ ತಂತ್ರ ನಡೆದಿದೆ ಹೊರತು ದಲಿತರಿಗೆ ಭೂಮಿ ದೊರೆತಿಲ್ಲ: ಮಂಜುನಾಥ ಗಿಳಿಯಾರು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 74 ವರ್ಷಗಳ ಬಳಿಕವೂ ದಲಿತರು ತಮ್ಮ ಹಕ್ಕುಗಳನ್ನು ಪಡೆಯಲು ಹೋರಾಟದ ಮಾರ್ಗ ಹಿಡಿಯಬೇಕಾಗಿರುವುದು ಅವರ ದುರ್ದೈವ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ, ವಕೀಲ ಮಂಜುನಾಥ ಗಿಳಿಯಾರು ವಿಷಾದಿಸಿದರು.

    Click Here

    Call us

    Click Here

    ದಲಿತ ಸಂಘರ್ಷ ಸಮಿತಿಯ ಬೈಂದೂರು ತಾಲ್ಲೂಕು ಘಟಕ, ತಾಲ್ಲೂಕು ಮಹಿಳಾ ಒಕ್ಕೂಟ ಮತ್ತು ಅಂಬೇಡ್ಕರ್ ಮಹಿಳಾ ಸಂಘ ಸೋಮವಾರ ಇಲ್ಲಿನ ತಾಲ್ಲೂಕು ಕಚೇರಿ ಎದುರು ನಮ್ಮ ಭೂಮಿ ನಮ್ಮ ಹಕ್ಕು ಹೋರಾಟದ ಅಂಗವಾಗಿ ನಡೆಸಿದ ಧರಣಿಯಲ್ಲಿ ಮಾತನಾಡಿದರು.

    ಸರ್ಕಾರಿ ದಾಖಲೆಯಂತೆ ಉಡುಪಿ ಜಿಲ್ಲೆಯಲ್ಲಿ 1108 ಎಕ್ರೆ ದಲಿತ ಮೀಸಲು ಭೂಮಿ ಇದೆ. ದಾಖಲೆಗೆ ಸೇರದ ಇನ್ನೂ 300 ಎಕ್ರೆ ಇದೆ ಎಂದು ಅಂದಾಜಿಸಲಾಗಿದೆ. ಅದರಲ್ಲಿ ಬಹುಭಾಗವನ್ನು ನಿಯಮ ಉಲ್ಲಂಘಿಸಿ ವಿವಿಧ ಯೋಜನೆಗಳ ಹೆಸರಿನಲ್ಲಿ ಬಲಾಢ್ಯರಿಗೆ ಹಂಚಲಾಗಿದೆ. ಅದರ ವಿರುದ್ಧ ಮತ್ತು ದಲಿತರ ಹಕ್ಕಿನ ಭೂಮಿಯನ್ನು ಅವರಿಗೆ ನೀಡಿ ಎಂದು ಸಂಘಟನೆ ಆರು ವರ್ಷಗಳಿಂದ ಹೋರಾಡುತ್ತಿದೆ. ಆ ನಿಟ್ಟಿನಲ್ಲಿ ಆಡಳಿತದಿಂದ ಆಗಾಗ ಕಣ್ಣೊರಸುವ ತಂತ್ರ ನಡೆಯುತ್ತಿದೆಯೇ ಹೊರತು ದಲಿತರಿಗೆ ಭೂಮಿ ವಿತರಿಸಿಲ್ಲ. ಕಂದಾಯ ಕಚೇರಿಯಲ್ಲಿ ಭೂದಾಖಲೆ ಪ್ರತಿ ನೀಡುತ್ತಿಲ್ಲ. ಅಲ್ಲಿ ಹಣ ಕೊಟ್ಟವರ ಕೆಲಸ ಆಗುತ್ತಿದೆ. ಗ್ರಾಮ ಪಂಚಾಯಿತಿಗಳಿಂದ ಅನುದಾನ ವಂಚನೆ ನಡೆಯುತ್ತಿದೆ. ಉನ್ನತ ಅಧಿಕಾರಿಗಳು, ಜನಪ್ರತಿನಿಧಿಗಳು ದಲಿತರ ಅಳಲಿಗೆ ಸ್ಪಂದಿಸುತ್ತಿಲ್ಲ. ಈ ಪ್ರವೃತ್ತಿ ಶೀಘ್ರ ಕೊನೆಯಾಗದಿದ್ದರೆ ಮುಂದೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಅಹರ್ನಿಶಿ ಧರಣಿ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.

    ದಲಿತ ಮೀಸಲು ಭೂಮಿ ಹಂಚಿಕೆ, ಆ ಭೂಮಿಯಲ್ಲಿ ಆಗಿರುವ ಆಕ್ರಮಣ ತೆರವು, ಉಪ್ಪುಂದದಲ್ಲಿ ಡಾ. ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮೀಸಲಾದ ನಿವೇಶನದ ಆಕ್ರಮಣ ತೆರವುಗೊಳಿಸಿ ಅಲ್ಲಿ ಭವನ ನಿರ್ಮಾಣ, ಬೈಂದೂರು ಭವನದ ನವೀಕರಣ, ತಾಲ್ಲೂಕು ಕಚೇರಿ ಎದುರು ಡಾ. ಅಂಬೇಡ್ಕರ್ ಪ್ರತಿಮೆ ಸ್ಥಾಪನೆ, ಗುತ್ತಿಗೆ ನೌಕರ ನೇಮಕಾತಿಯಲ್ಲೂ ಮೀಸಲಾತಿ ಪಾಲನೆ, ಕೊರಗ ಸಮುದಾಯ ನೆಲಸಿರುವ ಸ್ಥಳವನ್ನು ಅವರಿಗೆ ವರ್ಗಾವಣೆ, ಹಳ್ಳಿಹೊಳೆ ದಲಿತ ಮೀಸಲು ರುದ್ರಭೂಮಿಯಲ್ಲಿ ಆಗಿರುವ ಅತಿಕ್ರಮಣ ತೆರವು ಆಗ್ರಹಿಸಿ ತಹಶೀಲ್ದಾರರಿಗೆ ಮನವಿ ನೀಡಲಾಯಿತು.

    Click here

    Click here

    Click here

    Click Here

    Call us

    Call us

    ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಜನಾರ್ದನ ಮರವಂತೆ ಧರಣಿಯನ್ನು ಉದ್ಘಾಟಿಸಿದರು. ಮುಖಂಡರಾದ ಮಂಜುನಾಥ ನಾಗೂರು, ಕೆ. ಸಿ. ರಾಜು ಬೆಟ್ಟಿನಮನೆ, ಗೀತಾ ಸುರೇಶ್‌ಕುಮಾರ್, ವಾಸುದೇವ ಮುದೂರು, ನಾಗರಾಜ ಉಪ್ಪುಂದ, ರಮೇಶ ಮರವಂತೆ, ಬಿ. ಶಿವರಾಮ, ಕೆ. ಕರುಣಾಕರ, ಶಿವರಾಜ ಬೈಂದೂರು, ಲಕ್ಷ್ಮಣ ಬೈಂದೂರು, ಕೆ. ಭಾಸ್ಕರ ಕೆರ್ಗಾಲು ಇದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    fourteen + three =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.