Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್‌ನ ಎಂಟು ಮಂದಿಗೆ ಏಕಲವ್ಯ, ಕ್ರೀಡಾರತ್ನ ಪ್ರಶಸ್ತಿ
    alvas nudisiri

    ಆಳ್ವಾಸ್‌ನ ಎಂಟು ಮಂದಿಗೆ ಏಕಲವ್ಯ, ಕ್ರೀಡಾರತ್ನ ಪ್ರಶಸ್ತಿ

    Updated:03/11/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ: ರಾಜ್ಯ ಸರ್ಕಾರವು ಕ್ರೀಡಾ ಸಾಧಕರಿಗೆ ನೀಡಿದ ಏಕಲವ್ಯ ಹಾಗೂ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಒಟ್ಟು ಎಂಟು ಕ್ರೀಡಾ ವಿದ್ಯಾರ್ಥಿಗಳು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಇವರೆಲ್ಲರೂ ಆಳ್ವಾಸ್‌ನ ದತ್ತು ಸ್ವೀಕಾರ ಯೋಜನೆಯಡಿ ತರಬೇತಿ ಪಡೆದು ಸಾಧನೆಗೈದ ಕ್ರೀಡಾಪಟುಗಳಾಗಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

    Click Here

    Call us

    Click Here

    ಅಭಿನಯ ಶೆಟ್ಟಿ, ಬಾಂಧವ್ಯ, ಅಭಿಷೇಕ್‌ಶೆಟ್ಟಿಯವರು ಏಕಲವ್ಯ ಪ್ರಶಸ್ತಿ ಹಾಗೂ ಜಯಲಕ್ಷ್ಮೀ ಜೆ ,ಲಾವಣ್ಯ ಬಿ. ಡಿ, ರಕ್ಷಿತ್ ಎಸ್, ಪಲ್ಲವಿ ಎಸ್ ಕೆ, ಮತ್ತು ಅನುಶ್ರೀ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    ಏಕಲವ್ಯ ಪ್ರಶಸ್ತಿ ಪುರಸ್ಕೃತರಾದ ಅಭಿಷೇಕ್ ಶೆಟ್ಟಿ ಅಥ್ಲೆಟಿಕ್‌ನಲ್ಲಿ2009ರ ಸಾಲಿನ ಪ್ರಶಸ್ತಿ ಗಳಿಸಿದ್ದಾರೆ. ಅಂತರಾಷ್ಟ್ರೀಯ ಕ್ರೀಡಾಪಟುವಾಗಿದ್ದು ಪ್ರಸ್ತುತ ಪಶ್ಚಿಮ ರೈಲ್ವೆಯಲ್ಲಿ ಉದ್ಯೋಗಿಯಾಗಿದ್ದಾರೆ.

    ಬಾಂಧವ್ಯ ಬಾಸ್ಕೆಟ್‌ಬಾಲ್‌ನಲ್ಲಿ 2008ರ ಏಕಲವ್ಯ ಪ್ರಶಸ್ತಿ ಗಳಿಸಿದ್ದು ಅಂತರಾಷ್ರ್ಟೀಯ ಬಾಸ್ಕೆಟ್ ಬಾಲ್ ಆಟಗಾರ್ತಿಯಾಗಿದ್ದಾರೆ. ಪ್ರಸುತ್ತ ದಕ್ಷಿಣ ಪಶ್ಚಿಮ ರೈಲ್ವೆ ಉದ್ಯೋಗಿ.

    ಅಂತರಾಷ್ಟ್ರೀಯ ಕ್ರೀಡಾಪಟು ಅಭಿನಯ ಶೆಟ್ಟಿ ಅಥ್ಲೆಟಿಕ್ಸ್‌ನಲ್ಲಿ2019ರ ಏಕಲವ್ಯ ಪ್ರಶಸ್ತಿ ವಿಜೇತರಾಗಿದ್ದು ಪ್ರಸ್ತುತ ಪಶ್ಚಿಮ ರೈಲ್ವೆ ಉದ್ಯೋಗಿಯಾಗಿದ್ದಾರೆ.ಸ್ಟಾರ್ ಆಫ್ ಇಂಡಿಯಾ ಪ್ರಶಸ್ತಿ ವಿಜೇತ ಬಾಲ್ ಬ್ಯಾಡ್ಮಿಂಟನ್ ಆಟಗಾರ್ತಿ ಜಯಲಕ್ಷ್ಮೀ  ಜೆ. 2017ರ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ವಿಜೇತೆಯಾಗಿದ್ದು ಪ್ರಸುತ್ತ ಆಳ್ವಾಸ್ ಸಂಸ್ಥೆಯಲ್ಲಿ ತರಬೇತುದಾರರಾಗಿದ್ದಾರೆ. ಲಾವಣ್ಯ ಬಿ.ಡಿ ಬಾಲ್‌ಬ್ಯಾಡ್ಮಿಂಟನ್‌ನಲ್ಲಿ 2018ರ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಪಡೆದಿದ್ದು, ರಾಷ್ಟ್ರೀಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಆಟಗಾರ್ತಿಯಾಗಿದ್ದಾರೆ. ರಾಷ್ಟ್ರೀಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಆಟಗಾರ್ತಿ ಪಲ್ಲವಿ ಎಸ್.ಕೆ ಬಾಲ್ ಬ್ಯಾಡ್ಮಿಂಟನ್‌ನಲ್ಲಿ2019ರ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಗಳಿಸಿದ್ದಾರೆ.

    Click here

    Click here

    Click here

    Click Here

    Call us

    Call us

    ಏಷ್ಯನ್ ಜೂನಿಯರ್ ಚಾಂಪಿಯನ್ ಶಿಪ್‌ನಲ್ಲಿ ಸ್ವರ್ಣ ಪದಕ ವಿಜೇತ ಹಾಗೂ ಪ್ರೊ ಕಬಡ್ಡಿ ಆಟಗಾರ ರಕ್ಷಿತ್ ಎಸ್. ಕಬಡ್ಡಿಯಲ್ಲಿ2019ರ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಗಳಿಸಿದ್ದಾರೆ. ಅಖಿಲ ಭಾರತ ಹಿಂದ್ ಕೇಸರಿ ಪ್ರಶಸ್ತಿ ವಿಜೇತೆ ಅನುಶ್ರೀ ಕುಸ್ತಿಯಲ್ಲಿ 2017ರ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ವಿಜೇತೆಯಾಗಿದ್ದಾರೆ

    ಬಾಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಆಳ್ವಾಸ್ ಸಂಸ್ಥೆಯ ವಿದ್ಯಾರ್ಥಿಗಳು ನಿರಂತರವಾಗಿ ಏಳನೇ ಬಾರಿಗೆ ಕ್ರೀಡಾರತ್ನ ಪ್ರಶಸ್ತಿ ಗಳಿಸಿದ್ದಾರೆ. ಎರಡು ವರ್ಷಗಳ ಹಿಂದೆ ಆಳ್ವಾಸ್ ಶಿಕ್ಷಣ ಸಂಸ್ಥೆ ಕ್ರೀಡೆಯಲಿ ತೋರಿದ ಗಣನೀಯ ಸಾಧನೆಗಾಗಿ ಕ್ರೀಡಾ ಪೋಷಕ್ ಪ್ರಶಸ್ತಿಯನ್ನು ಗಳಿಸಿತ್ತು ಎಂದು ಮೋಹನ ಆಳ್ವ ಮಾಹಿತಿ ನೀಡಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣ

    30/04/2026
    Leave A Reply Cancel Reply

    ten + eleven =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.