Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರಿನಲ್ಲಿಯೇ ಉನ್ನತ ಶಿಕ್ಷಣದ ಚಿಂತನೆ: ಸೊರಕೆ
    ಊರ್ಮನೆ ಸಮಾಚಾರ

    ಬೈಂದೂರಿನಲ್ಲಿಯೇ ಉನ್ನತ ಶಿಕ್ಷಣದ ಚಿಂತನೆ: ಸೊರಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಬೈಂದೂರು: ಇಲ್ಲಿನ ಪ್ರಥಮದರ್ಜೆ ಕಾಲೇಜಿನಲ್ಲಿ ನೂತನ ಹೆಚ್ಚುವರಿ ಕಟ್ಟಡ ಉದ್ಘಾಟನೆ ಹಾಗೂ ಹೆಚ್ಚುವರಿ ಹೊಸ ಕಟ್ಟಡದ ಶಂಕುಸ್ಥಾಪನೆ ಇಂದು ನೆರವೇರಿತು. ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ ಸೊರಕೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯ ಮಾಡಿದ ಬಳಿಕ ಮಾತನಾಡಿ ಎಲ್ಲಾ ರೀತಿಯ ಮೂಲಸೌಕರ್ಯ ಹೊಂದಿರುವ ಬೈಂದೂರಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಗ್ರಾಮೀಣ ಭಾಗದ ಸುಮಾರು 700ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ, ಮುಂದಿನ ದಿನಗಳಲ್ಲಿ ಆ ವಿದ್ಯಾರ್ಥಿಗಳಿಗೆ  ಅನುಕೂಲವಾಗುವಂತೆ ಇಲ್ಲಿಯೇ ಸ್ನಾತಕೋತರ ಪದವಿ ಶಿಕ್ಷಣ ಆರಂಭಿಸುವಂತೆ, ವಿಶ್ವವಿದ್ಯಾಲಯಕ್ಕೆ ಹಾಗೂ ಸಂಬಂಧಿತ ಇಲಾಖೆಗೆ ಶಿಫಾರಸ್ಸು ಮಾಡಲಾಗುವುದು ಎಂದು  ಹೇಳಿದರು.

    Click Here

    Call us

    Click Here

    ರಾಜ್ಯದಲ್ಲಿ ಬಹಳಷ್ಟು ವರ್ಷಗಳಿಂದ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ನಡೆಯದ ಕಾರಣ ಬಹುತೇಕ ಸರ್ಕಾರಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದೆ, ಈಗ ಅದರ ಅಂತರ ಹೆಚ್ಚಾಗಿದೆ. ಪ್ರಸ್ತುತ ಉನ್ನತ ಶಿಕ್ಷಣ ಇಲಾಖೆ ಪ್ರಗತಿಪರ ಹೆಜ್ಜೆಯಿರಿಸಿದ್ದು, ಉಪನ್ಯಾಸಕರ ನೇಮಕಾತಿ ಶೀಘ್ರದಲ್ಲಿ ಆಗಲಿದೆ. ಅಲ್ಲದೇ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗುವಂತೆ ಇತ್ತೀಚೆಗೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಕಾರಿಗಳು ಸಾರಿಗೆ ಇಲಾಖಾಧಿಕಾರಿಗಳ ಸಭೆ ನಡೆಸಿದ್ದು, ಗ್ರಾಮೀಣ ಭಾಗದ ಬೇಡಿಕೆಯನುಗುಣವಾಗಿ 100ಕ್ಕೂ ಅಧಿಕ ಬಸ್ಸ್‌ಗಳಿಗೆ ಫರ್ಮಿಟ್ ನೀಡಲಾಗಿದೆ ಎಂದರು.

    ಶಾಸಕ ಕೆ. ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೈಂದೂರಿನಲ್ಲಿ ತಲಾ 100 ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಸ್‌ಟಿ ಹಾಸ್ಟೆಲ್ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿನಿಯರ ಹಾಸ್ಟೆಲ್ ಮಂಜೂರಾತಿ ಮಾಡಲಾಗಿದ್ದು ಶೀಘ್ರವೇ ಅನುಷ್ಠಾನಗೊಳ್ಳಲಿದೆ ಎಂದರು.

    ಜಿಲ್ಲ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಗೌರಿ ದೇವಾಡಿಗ, ತಾ.ಪಂ. ಅಧ್ಯಕ್ಷ ಭಾಸ್ಕರ ಬಿಲ್ಲವ, ತಾ.ಪಂ. ಸದಸ್ಯ ರಾಮ ಕೆ., ಗ್ರಾ.ಪಂ ಅಧ್ಯಕ್ಷ ಜನಾರ್ದನ್, ಕಾರ್ಯನಿರ್ವಹಕ ಇಂಜಿನಿಯರ್ ಚಂದ್ರಶೇಖರ, ಉನ್ನತ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಶಿವಮೂರ್ತಿ ಗೌಡ, ನಿವೃತ ಪ್ರಿನ್ಸಿಪಾಲ್ ರಘುರಾಮ ಶೆಟ್ಟಿ, ನಿವೃತ ಐಎಫ್‌ಎಸ್ ಜಗನ್ನಾಥ ಶೆಟ್ಟಿ, ಕಾಲೇಜಿನ ಪ್ರಿನ್ಸಿಪಾಲ್ ಬಿ.ಎ. ಮೇಳಿ ಉಪಸ್ಥಿತರಿದ್ದರು.

    ಪ್ರಥಮದರ್ಜೆ ಕಾಲೇಜಿನಲ್ಲಿ ನೂತನ ಹೆಚ್ಚುವರಿ ಕಟ್ಟಡವನ್ನು 75ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿತ್ತು ಹಾಗೂ  52ಲಕ್ಷ ರೂ. ವೆಚ್ಚದ ಹೊಸ ಕಟ್ಟಡದ ಶಂಕುಸ್ಥಾಪನೆಯನ್ನು ಮಾಡಲಾಯಿತು

    Click here

    Click here

    Click here

    Click Here

    Call us

    Call us

    ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ರಾಜು ಪೂಜಾರಿ ಸ್ವಾಗತಿಸಿದರು, ಉಪನ್ಯಾಸಕ ಪಾಂಡುರಂಗ ನಿರೂಪಿಸಿ, ಮದನಕುಮಾರ ವಂದಿಸಿದರು.

    Byndoor
    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    10 − ten =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.