Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್‌ನಲ್ಲಿ ನ್ಯಾಷನಲ್ ನ್ಯಾಚುರೋಪಥಿ ದಿನ
    alvas nudisiri

    ಆಳ್ವಾಸ್‌ನಲ್ಲಿ ನ್ಯಾಷನಲ್ ನ್ಯಾಚುರೋಪಥಿ ದಿನ

    Updated:18/11/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದರೆ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೋಪಥಿ ಪುಣೆ ಮತ್ತು ಆಳ್ವಾಸ್ ಕಾಲೇಜ್ ಆಫ್ ನ್ಯಾಚುರೋಪಥಿ ಮತ್ತು ಯೋಗಿಕ್ ಸೈಸ್ಸ್ ಸಹಯೋಗದಲ್ಲಿ ”ಸಂಘಟಿತವಾಗಿ ಪ್ರಕೃತಿ ಚಿಕಿತ್ಸೆಯ ಮೂಲಕ ಚೈತನ್ಯವನ್ನು ವರ್ಧಿಸುವುದು” ಎಂಬ ವಿಷಯವನ್ನು ಆದರಿಸಿ ಮೂರನೇ ನ್ಯಾಷನಲ್ ನ್ಯಾಚುರೋಪಥಿ ದಿನವನ್ನು ಆಯೋಜಿಸಲಾಯಿತು.

    Click Here

    Call us

    Click Here

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉಡುಪಿಯ ಬೀಚ್ ಹೀಲಿಂಗ್ ಹೋಮ್ ಸಮಗ್ರ ಸ್ವಾಸ್ಥ್ಯ ಕೇಂದ್ರದ ನಿರ್ದೇಶಕ ಡಾ. ಮಹಮ್ಮದ್ ರಫೀಕ್ ಮಾತನಾಡಿ, ಪ್ರಕೃತಿ ಚಿಕಿತ್ಸೆಗೆ ನಮ್ಮ ದೇಶ ದೊಡ್ಡ ಕೊಡುಗೆ ನೀಡಿರುವುದು ಹೆಮ್ಮೆಯ ವಿಷಯ. ಆದರೆ ಮಧುಮೇಹ, ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಕ್ಯಾನ್ಸರ್ ಕಾಯಿಲೆಗಳಲ್ಲಿ ನಮ್ಮ ದೇಶವೇ ದಾಪುಗಾಲು ಇಡುತ್ತಿರುವುದು ಬೇಸರದ ಸಂಗತಿ ಎಂದರು. ಹುರುಪು ಜೀವನಶಕ್ತಿ ಹಣಕೊಟ್ಟು ,ಮಾತ್ರೆ ತಿಂದು ಬರಲು ಸಾಧ್ಯವಿಲ್ಲ, ಅವು ಕೇವಲ ನಮ್ಮ ಜೀವನ ಶೈಲಿಯಿಂದ ಮಾತ್ರ ಕಾಪಡಿಕೊಳ್ಳಲು ಸಾಧ್ಯ. ನಾವು ಯಾವಾಗ ಸಂತೋಷವಾಗಿರುತ್ತೇವೆಯೋ ಆಗ ನಮ್ಮ ಚೈತನ್ಯ ಉತ್ಸಾಹ ಹೆಚ್ಚಾಗುತ್ತದೆ. ಮಾತ್ರವಲ್ಲದೇ ಯೋಗ ಧ್ಯಾನ ಮಾಡುವ ಮೂಲಕ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು. ಅಲ್ಲದೇ ಈ ಕಾರ್ಯಕ್ರಮ ಸರಿಯಾದ ಸಮಯದಲ್ಲಿ ನಡೆಯುತ್ತಿದ್ದು, ತಡೆಗಟ್ಟುವಿಕೆ ಗುಣಪಡಿಸುವುದರಿಂದ ಉತ್ತಮ ಮನುಷ್ಯನಲ್ಲಿ ಆಸೆ ಹೆಚ್ಚಾದಷ್ಟು ಒತ್ತಡ ಹೆಚ್ಚಾಗುತ್ತದೆ, ಇದು ಆರೋಗ್ಯದ ಮೇಲೆ ದುಷ್ಪರಿಣಾಮ ಬಿರುತ್ತದೆ ಎಂದು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆಳ್ವಾಸ್ ಕಾಲೇಜಿನ ಮ್ಯಾನೆಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ ಯಾವಗಾಲೂ ನಾವು ಇನ್ನೊಬ್ಬರನ್ನು ನಮ್ಮ ಉತ್ತಮ ಜೀವನ ಶೈಲಿಯಿಂದ ಆಕರ್ಷಿಸಬೇಕು ಎಂದರು. ಕೊರೊನಾ ನೇರವಾಗಿ ನಮ್ಮನ್ನು ಬದಲಾಯಿಸಲಿಲ್ಲ, ಆದರೆ ಅದು ಪ್ರತಿಯೊಬ್ಬರ ಜೀವನ ಶೈಲಿಯನ್ನೇ ಬದಲಾಯಿಸಿದೆ ಎಂದರು.

    ಕಾರ್ಯಕ್ರಮದಲ್ಲಿ ಆರೋಗ್ಯ ವಿಜ್ಞಾನಗಳ ವೈದ್ಯ ಲೇಖಕಿಯಾಗಿ ಕನ್ನಡ ಸಾಹಿತ್ಯ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಆಳ್ವಾಸ್ ನ್ಯಾಚುರೋಪಥಿ ಹಾಗೂ ಯೋಗಿಕ್ ಸೈನ್ಸ್ ಕಾಲೇಜಿನ ಪ್ರಾಧ್ಯಾಪಕಿ ಡಾ.ವೃಂದಾ ಬೇಡೆಕರ್ ಅವರನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಿಗಳ ವಿಶ್ವವಿದ್ಯಾನಿಲಯಗಳ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನಿಸಲಾಗಿತ್ತು. ಆ ಹಿನ್ನಲೆಯಲ್ಲಿ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

    ಕಾರ್ಯಕ್ರಮದಲ್ಲಿ ನ್ಯಾಚುರೋಪಥಿ ಮತ್ತು ಯೋಗಿಕ್ ಸೈನ್ಸನ ಪ್ರಾಂಶುಪಾಲೆ ಡಾ.ವನಿತಾ ಎಸ್ ಶೆಟ್ಟಿ ಮತ್ತು ಉಪಪ್ರಾಂಶುಪಾಲ ರೋಶನ್ ಪಿಂಟೋ ಉಪಸ್ಥಿತರಿದ್ದರು. ಪ್ರಾಧ್ಯಾಪಕ ನಿತೇಶ್ ಗೌಡ ನ್ಯಾಚುರೋಪಥಿ ದಿನದ ಸಲುವಾಗಿ ಮೂರು ದಿನ ನಡೆದ ವಿವಿಧ ಕಾರ್ಯಕ್ರಮಗಳ ಕುರಿತು ವರದಿ ನೀಡಿದರು.

    Click here

    Click here

    Click here

    Call us

    Call us

    ಕಾರ್ಯಕ್ರಮವನ್ನು ವಿದ್ಯಾರ್ಥಿನಿ ದೀಕ್ಷ ನಿರೂಪಿಸಿ, ಪ್ರಾಧ್ಯಾಪಕಿ ಡಾ. ಅರ್ಚನಾ ಪದ್ಮನಾಭ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ 80ನೇ ಸ್ವಾತಂತ್ರ‍್ಯ ದಿನಾಚರಣೆ

    15/08/2026

    ಕರ್ನಾಟಕ ರಾಜ್ಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ಗೆ 04 ಕೂಟ ದಾಖಲೆಯೊಂದಿಗೆ 33 ಪದಕಗಳು

    15/08/2026

    ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    11/08/2026
    Leave A Reply Cancel Reply

    two × three =

    Call us

    Click Here

    Call us

    Call us

    Call us
    Highest Viewed Recently
    • ಮೈ ಭಾರತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ
    • ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳ ಕಮಾಲ್
    • ಯೋಧರಿಗೆ ಗೌರವಾರ್ಪಣೆ – ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿಶೇಷ ಸನ್ಮಾನ
    • ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಫ್ರೀಡಂ ಪ್ರೆನ್ಯೂರ್‌ ಏಕಪಾತ್ರಾಭಿನಯ ಸ್ಪರ್ಧೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.