Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು: ಕೈಗಾದಲ್ಲಿ ಉದ್ಯೋಗ ಕೊಡಿಸುವ ಭರವಸೆ ನೀಡಿ ಲಕ್ಷಾಂತರ ರೂ. ವಂಚನೆ. ಆರೋಪಿ ಬಂಧನ
    ಅಪಘಾತ-ಅಪರಾಧ ಸುದ್ದಿ

    ಬೈಂದೂರು: ಕೈಗಾದಲ್ಲಿ ಉದ್ಯೋಗ ಕೊಡಿಸುವ ಭರವಸೆ ನೀಡಿ ಲಕ್ಷಾಂತರ ರೂ. ವಂಚನೆ. ಆರೋಪಿ ಬಂಧನ

    Updated:20/11/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಕಾರವಾರದ ಕೈಗಾ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 20ಕ್ಕೂ ಹೆಚ್ಚು ಯುವಕರಿಗೆ ವಂಚಿಸಿರುವ ಘಟನೆ ನಡೆದಿದ್ದು, ಪ್ರಮುಖ ಆರೋಪಿ ಎನ್ನಲಾಗಿರುವ ರಿತೇಶ್ ಪಟ್ವಾಲ್ ಎಂಬಾತನನ್ನು ಶುಕ್ರವಾರ ಬೈಂದೂರು ಪೊಲೀಸರು ಶೃಂಗೇರಿಯಲ್ಲಿ ಬಂಧಿಸಿದ್ದಾರೆ.

    Click Here

    Call us

    Click Here

    ಕೆಲ ದಿನಗಳ ಹಿಂದೆ ರಿತೇಶ್ ಎಂಬಾತ ಒಂದಿಷ್ಟು ಯುವಕರನ್ನು ಸಂಪರ್ಕಿಸಿ ಕೈಗಾದಲ್ಲಿ ಉತ್ತಮ ಕೆಲಸ ಕೊಡಿಸುವ ಆಮಿಷವೊಡ್ಡಿದ್ದ. ತಾನು ಕೂಡ ಕೈಗಾ ಅಣುವಿದ್ಯುತ್ ಸ್ಥಾವರದಲ್ಲಿಯೇ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದು, ಉದ್ಯೋಗಾಕಾಂಕ್ಷಿಗಳಿಗೆ ತನ್ನ ಗುರುತಿನ ಚೀಟಿ ತೋರಿಸಿ ನಂಬಿಸಿದ್ದಲ್ಲದೇ, ಆಗಾಗ್ಗೆ ಕಾರವಾರ ಹೋಗಿ ಬರುವ ನಾಟಕವಾಡುತ್ತಿದ್ದ. ಸಂಸ್ಥೆಯಲ್ಲಿ ಕಂಪ್ಯೂಟರ್ ಆಧಾರಿತ ಹುದ್ದೆ ಖಾಲಿ ಇರುವುದಾಗಿ ಹೇಳಿಕೊಂಡು, ಉದ್ಯೋಗಾಕಾಂಕ್ಷಿಗಳಿಂದ ರೆಜ್ಯೂಮ್ ಪಡೆದುಕೊಂಡಿದ್ದ. ನಕಲಿ ನೇಮಕಾತಿ ಪತ್ರವನ್ನು ತಯಾರಿಸಿ ಉದ್ಯೋಗಾಕಾಂಕ್ಷಿಗಳಿಂದ ತಲಾ ರೂ.20,000ಕ್ಕೂ ಹೆಚ್ಚು ಹಣ ಪಡೆದಿದ್ದಲ್ಲದೆ ಅವರೆಲ್ಲರನ್ನೂ ಕೈಗಾಕ್ಕೆ ತೆರಳುವಂತೆಯೂ ಸೂಚಿಸಿದ್ದ. ಆದರೆ ಕೈಗಾದಲ್ಲಿ ಉದ್ಯೋಗಾಕಾಂಕ್ಷಿಗಳನ್ನು ಒಳಕ್ಕೆ ಬಿಡದೆ, ಅವರ ದಾಖಲಾತಿ ಪರಿಶೀಲಿಸಿದ ಬಳಿಕ ತಾವು ನಕಲಿ ದಾಖಲೆಯಿಂದ ಮೋಸ ಹೋಗಿರುವುದು ತಿಳಿದುಬಂದಿದೆ. ಅಷ್ಟರಲ್ಲೇ ಹಣ ಪಡೆದಿದ್ದ ರಿತೀಶ್ ಪರಾರಿಯಾಗಿದ್ದ. ಈ ಬಗ್ಗೆ ಯಳಜಿತ ಸತೀಶ್ ಎಂಬಾತ ದೂರು ನೀಡಿದ್ದು, ಅದರಂತೆ ಬೈಂದೂರು ಪೊಲೀಸರು ಆಪಾದಿತನನ್ನು ಬಂಧಿಸಿದ್ದಾರೆ. ಪೊಲೀಸರು ಆಪಾದಿತನ್ನು ಠಾಣೆಗೆ ಕರೆತರುತ್ತಿದ್ದಂತೆ ಆತನ ತಾಯಿ ಹಾಗೂ ಸಹೋದರಿ ಆತನಿಗೆ ಚಪ್ಪಲಿಯಿಂದ ಹೊಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಯಿಯ ಬಳಿಯೂ ತನಗೆ ಕೈಗಾದಲ್ಲಿ ಕೆಲಸವಾಗಿದೆ. ಅದಕ್ಕೆ 15 ಲಕ್ಷದ ಅವಶ್ಯಕತೆ ಇದೆ ಎಂದು ನಂಬಿಸಿ ಹಣ ಪಡೆದಿದ್ದ ಎನ್ನಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    50ಕ್ಕೂ ಹೆಚ್ಚು ಜನರಿಗೆ ವಂಚನೆ ಆರೋಪ:
    ಆಪಾದಿತ ರಿತೇಶ್ ಉದ್ಯೋಗ ಕೊಡಿಸುವುದಾಗಿ 50ಕ್ಕೂ ಹೆಚ್ಚು ಯುವಕ-ಯುವತಿಯರಿಂದ 18ಲಕ್ಷಕ್ಕೂ ಅಧಿಕ ಹಣ ಪಡೆದು ವಂಚಿಸಿರುವ ಬಗ್ಗೆ ಜನರು ಮಾತನಾಡಿಕೊಳ್ಳುತ್ತಿದ್ದು, ಪೊಲೀಸ್ ವಿಚಾರಣೆಯ ಬಳಿಕವಷ್ಟೇ ಸತ್ಯ ಹೊರಬರಲಿದೆ. ಭಟ್ಕಳ, ಶಿರಾಲಿ, ಬೈಂದೂರು, ಯಡ್ತರೆ, ಯಳಜಿತ, ಕುಂದಾಪುರ, ಶಂಕರನಾರಾಯಣ ಭಾಗದ ಯುವಕ ಯುವತಿಯರು ಉದ್ಯೋಗದ ಆಸೆಗೆ ಈತನಿಗೆ ಹಣ ನೀಡಿ ಮೋಸ ಹೋಗಿದ್ದಾರೆ ಎನ್ನಲಾಗುತ್ತಿದೆ. ರಿತೇಶನ ಜೊತೆಗೆ ಇನ್ನೂ ಕೆಲವರು ಶಾಮೀಲಾಗಿರುವ ಶಂಕೆ ಇದ್ದು, ಮೊಸದ ಜಾಲದಲ್ಲಿ ಭಾಗಿಯಾದವರು ಹಾಗೂ ಪಡೆದುಕೊಂಡಿರುವ ಹಣದ ಬಗ್ಗೆ ತನಿಕೆಯಿಂದ ತಿಳಿದುಬರಬೇಕಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಶೃಂಗೇರಿಯಲ್ಲಿ ಬಂಧನ:
    ಉದ್ಯೋಗ ಕೊಡಿಸುವುದಾಗಿ ವಂಚಿಸಿ ಕಾಲ್ಕಿತ್ತಿದ್ದ ರಿತೇಶನ್ನು ಶೃಂಗೇರಿಯಲ್ಲಿ ಬಂಧಿಸಿ ಕರೆತರಲಾಗಿದೆ. ಈತನ ಪೊಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಶೃಂಗೇರಿಯಲ್ಲಿ ಈತನ ಚಲನವಲನ ಗುರುತಿಸಿದ ಸ್ಥಳೀಯರು ಅಲ್ಲಿನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಬೈಂದೂರು ಪೊಲೀಸರು ಆತನನ್ನು ಬಂಧಿಸಿ ಕರೆತಂದು ವಿಚಾರಣೆ ನಡೆಸುತ್ತಿದ್ದು, ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಕಾರಿನಲ್ಲಿ ಇರಿಸಿದ್ದ ಹಣವನ್ನು ಹಾಡಹಗಲೇ ಲಪಟಾಯಿಸಿದ ಖದೀಮರು

    06/11/2025

    ರಿಕ್ಷಾಕ್ಕೆ ಪಿಕಪ್ ವಾಹನ ಡಿಕ್ಕಿಯಾಗಿ ರಿಕ್ಷಾ ಚಾಲಕನ ಸಾವು

    18/10/2025

    ಕೊಡೇರಿ: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು, ಓರ್ವ ಪ್ರಾಣಾಪಾಯದಿಂದ ಪಾರು

    14/10/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d