Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರವೀಣ ಶೆಟ್ಟಿ ಅವರ ‘ತುಂಬಿ ತುಳುಕಿದ ಸಾಲು’ ಕವನ ಸಂಕಲನ ಬಿಡುಗಡೆ
    ಊರ್ಮನೆ ಸಮಾಚಾರ

    ಪ್ರವೀಣ ಶೆಟ್ಟಿ ಅವರ ‘ತುಂಬಿ ತುಳುಕಿದ ಸಾಲು’ ಕವನ ಸಂಕಲನ ಬಿಡುಗಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಕಂಬದಕೋಣೆಯ ಸಂವೇದನಾ ವಿಜ್ಞಾನ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಸಾಪ ತಾಲೂಕು ಘಟಕ ಮತ್ತು ಗೆಳೆಯರ ಬಳಗ ಬೈಂದೂರು ಇವರ ಆಶ್ರಯದಲ್ಲಿ ಬಿ. ಪ್ರವೀಣ ಶೆಟ್ಟಿ ಅವರ ‘ತುಂಬಿ ತುಳುಕಿದ ಸಾಲು’ ಕವನ ಸಂಕಲನ ಬಿಡುಗಡೆಗೊಳಿಸಲಾಯಿತು.

    Click Here

    Call us

    Click Here

    ಕುಂದಾಪುರ ತಾಲೂಕು ಕಸಾಪ ಅಧ್ಯಕ್ಷ ಡಾ. ಕಿಶೋರ ಕುಮಾರ ಶೆಟ್ಟಿ ಮಾತನಾಡಿ, ತನ್ನ ಸಮಾಜದ ಕುರಿತು ಚಿಂತಿಸುವ, ಬಡವರ ಕಷ್ಟಕ್ಕೆ ಮಿಡಿಯುವ ಸಾಹಿತ್ಯದಿಂದ ಸಾಮಾಜಿಕ ಸುಧಾರಣೆಗೆ ಹೊಸ ಸಾಧ್ಯತೆಗಳು ತೆರೆಯಲ್ಪಡುತ್ತದೆ. ಮನಸ್ಸಿನ ಯೋಚನೆ, ಹೃದಯದ ಭಾವನೆ ಆರೋಗ್ಯಕರವಾಗಿ ಬೆರೆತಾಗ ಸೃಜನಶೀಲ ಕವನ ಮೂಡಿಬರುತ್ತದೆ. ಆಧುನಿಕತೆಯ ಭರಾಟೆಯಲ್ಲಿ ನಮ್ಮನ್ನು ಕಳೆದುಕೊಳ್ಳುವ ಆತಂಕದಲ್ಲಿರುವ ನಾವು ಕಲೆ, ಸಾಹಿತ್ಯ, ಸಂಗೀತ ಮೊದಲಾದ ಪ್ರಕಾರಗಳಿಂದ ನೆಮ್ಮದಿ, ಸಂತೋಷವನ್ನು ಹುಡುಕಿಕೊಳ್ಳಬೇಕಾಗಿದೆ ಇಂಜಿನಿಯರ್ ಆಗಿದ್ದರು ಸಹ ತಾವು ಹೊರ ಪ್ರಪಂಚದಲ್ಲಿ ಕಂಡು, ಕೇಳಿದ ವಿಚಾರಗಳನ್ನು ಆಂತರಂಗಿಕವಾಗಿ ವಿಮರ್ಶಿಸಿ ಕವನ ರೂಪದಲ್ಲಿ ಹೊರಹಾಕಿದ್ದಾರೆ. ಇಂದಿನ ಯುವ ಬರಹಗಾರರಿಗೆ ಇವರ ಕವಿತೆಗಳು ಹೊಸ ಆಯಾಮವನ್ನು ತೋರಿಸುತ್ತದೆ. ವಿಭಿನ್ನ ಕ್ಷೇತ್ರದಲ್ಲಿರುವವರು ಸಾಹಿತ್ಯರಚನೆಗೆ ಮುಂದಾದಾಗ ಓದುಗರಿಗೆ ವಿವಿಧ ರಂಗಗಳ ಒಳಸುಳಿವು, ಕಷ್ಟ, ನಷ್ಟಗಳ ಪರಿಚಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

    ಜೀವ ವಿಮಾ ಅಭಿವೃದ್ಧಿ ಅಧಿಕಾರಿ ಹಾಗೂ ಸಾಹಿತಿ ಡಾ. ಎಸ್. ಶ್ರೀನಿವಾಸ ಶೆಟ್ಟಿ ಮಾತನಾಡಿದರು. ನಿವೃತ್ತ ಶಿಕ್ಷಕರಾದ ಪಿ.ಶೇಷಪ್ಪಯ್ಯ ಹೆಬ್ಬಾರ್, ಸೀತಾಲಕ್ಷ್ಮೀ, ರೋಮನ್ ಲೋಬೋ, ಬಿ. ಸುಶೀಲರವರನ್ನು ಗೌರವಿಸಲಾಯಿತು.

    ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಕಸಾಪದ ಗೌರವ ಕಾರ್ಯದರ್ಶಿ ಡಾ. ಸುಬ್ರಹ್ಮಣ್ಯ ಭಟ್, ಉದ್ಯಮಿ ಜಗನ್ನಾಥ ಶೆಟ್ಟಿ ನಾಕಟ್ಟೆ, ಕನಕ ಗ್ರೂಪ್‌ಆಫ್ ಹೊಟೇಲ್‌ನ ಮಾಲಕ ಜಗದೀಶ ಶೆಟ್ಟಿ, ಹಿರಿಯ ನಾಗರೀಕ ವೇದಿಕೆ ಅಧ್ಯಕ್ಷ ಗೋವಿಂದ ಎಂ., ಪುಂಡಲೀಕ್ ನಾಯಕ್, ಲಾವಣ್ಯ  ಬೈಂದೂರು ಅಧ್ಯಕ್ಷ ಉದಯ ಆಚಾರ್ ಉಪಸ್ಥಿತರಿದ್ದರು. ಬಿ.ಪ್ರವೀಣ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವಿಕ ಮಾತನಾಡಿದರು. ಡಾ. ಪ್ರತಿಭಾ ರೈ ಕಾರ್ಯಕ್ರಮ ನಿರೂಪಿಸಿ, ಬಾಡಾ ಭಾಸ್ಕರ ಶೆಟ್ಟಿ ಧನ್ಯವಾದ ಸಮರ್ಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.