Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯಕ್ಷ ಸೌರಭದ ಯಕ್ಷ ದಶಮಿ ಸಮಾರೋಪ
    ಕುಂದಾಪ್ರದ್ ಸುದ್ಧಿ

    ಯಕ್ಷ ಸೌರಭದ ಯಕ್ಷ ದಶಮಿ ಸಮಾರೋಪ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ: ಯಕ್ಷ ಸೌರಭ ಪ್ರವಾಸಿ ಮೇಳದ ಯಕ್ಷದಶಮಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಕುಂದಾಪುರ ಬಿ. ಆರ್. ಹಿಂದೂ ರಾಯರ ಶಾಲೆಯ ಸಭಾಂಗಣದಲ್ಲಿ ಚಿನ್ಮಯಿ ಆಸ್ಪತ್ರೆಯ ಡಾ| ಉಮೇಶ್ ಪುತ್ರನ್ ಅವರ ಅಧ್ಯಕ್ಷತೆಯಲ್ಲಿ ಜರಗಿತು.

    Click Here

    Call us

    Click Here

    ಕರಾವಳಿಯ ಹೆಮ್ಮೆಯ ಜಾನಪದ ಕಲೆಯಾದ ಯಕ್ಷಗಾನವನ್ನು ಬೆಳೆಸುವಲ್ಲಿ ಕಲಾಪೋಷಕರ ಪಾತ್ರ ಪ್ರಧಾನವಾದದ್ದು, ಯಾವುದೇ ಕಾರಣಕ್ಕೂ ಯಕ್ಷಗಾನಕ್ಕೆ ಅಳಿವಿಲ್ಲ, ಯಕ್ಷಗಾನವು ಅಳಿಯದೆ ಉಳಿಯುತ್ತದೆ ಎಂಬುದಕ್ಕೆ ಕುಂದಾಪುರ ಯಕ್ಷೋತ್ಸವದಲ್ಲಿ ಪ್ರತಿ ನಿತ್ಯವು ಉಪಸ್ಥಿತರಿದ್ದ ಪ್ರಜ್ಞಾವಂತ ಪ್ರೇಕ್ಷಕರೇ ಸಾಕ್ಷಿಯಾಗಿದ್ದಾರೆಂದು ಡಾ| ಉಮೇಶ್ ಪುತ್ರನ್‌ರವರು ಹೇಳಿದರು.

    ಕಾರ್ಯಕ್ರಮದ ಪ್ರಾಯೋಜಕರಾದ ಮುಂಬಯಿಯ ಉದ್ಯಮಿ ವಂಡ್ಸೆ ರಾಜು ಮೆಂಡನ್‌ರವರು ಯಕ್ಷ ದಶಮಿಯ ಸನ್ಮಾನವನ್ನು ಸ್ವೀಕರಿಸಿ ಮಾತನಾಡುತ್ತಾ ಮುಂದಿನ ಯಕ್ಷದಶಮಿಗೆ ವಿಶಾಲವಾದ ಸಭಾಂಗಣದ ಬಾಡಿಗೆ ವೆಚ್ಚ ಹಾಗೂ ಸಮಾರೋಪ ಸಮಾರಂಭದಲ್ಲಿ ತೆಂಕು ಹಾಗೂ ಬಡಗುತಿಟ್ಟಿನ ಕೂಡಾಟದ ಪ್ರಾಯೋಜಕತ್ವವನ್ನು ನಾನು ವಯಿಸಿಕೊಳ್ಳುತ್ತೇನೆಂದು ಹೇಳಿದರು.

    ಹತ್ತು ದಿನ ನಡೆದ ಯಕ್ಷಗಾನ ಪ್ರಸಂಗಗಳ ಸೂಕ್ಷ್ಮಾವಲೋಕನವನ್ನು ಮಾಡಿದ ಪ್ರಸಂಗಕರ್ತ ಬಸವರಾಜ್ ಶೆಟ್ಟಿಗಾರ್‌ರವರು ವಿಮರ್ಶೆಯನ್ನು ಯಕ್ಷಸಾಹಿತ್ಯದ ಪದ್ಯದೊಂದಿಗೆ ರಚಿಸಿರುವುದನ್ನು ಪ್ರಧಾನ ಭಾಗವತರಾದ ಹೆರಂಜಾಲು ಗೋಪಾಲಗಾಣಿಗರು ಹಾಡಿದಾಗ ಪ್ರೇಕ್ಷಕರು ಹರ್ಷೋದ್ಗಾರದೊಂದಿಗೆ ಸಂತೋಷ ವ್ಯಕ್ತಪಡಿಸಿದರು.

    ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ನ್ಯಾಯವಾದಿ ಎ.ಎಸ್.ಎನ್.ಹೆಬ್ಬಾರ್, ವಿದ್ಯುತ್ ಗುತ್ತಿಗೆದಾರರಾದ ಕೆ.ಆರ್.ನಾಯ್ಕ್, ಸರ್ಜನ್ ನರ್ಸಿಂಗ್‌ಹೋಮ್‌ನ ಡಾ| ವಿಶ್ವೇಶ್ವರಯ್ಯ, ಗ್ರಾಮಲೆಕ್ಕಿಗರಾದ ಶಂಕರ ಶೆಟ್ಟಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಪ್ರವಾಸಿ ಮೇಳದ ಸಂಚಾಲಕರಾದ ಕಲಾವಿದ ಮಹಮದ್ ಗೌಸ್‌ರನ್ನು ಪ್ರಕಾಶ್‌ರಾವ್ ಸನ್ಮಾನಿಸಿ ಗೌರವಿಸಿದರು.

    Click here

    Click here

    Click here

    Click Here

    Call us

    Call us

    ಹವ್ಯಾಸಿ ಕಲಾವಿದ ದಿವಾಕರ ಶೆಟ್ಟಿಯವರು ಸ್ವಾಗತಿಸದರು, ಹೇರಿಕುದ್ರು ಮಹಾಗಣಪತಿ ಯಕ್ಷಗಾನ ಮಂಡಳಿಯ ಮಹಾಬಲರವರು ಕಾರ್ಯಕ್ರಮವನ್ನು ನಿರೂಪಿಸಿದರೆ, ಮಹಮ್ಮದ್ ಗೌಸ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025
    Leave A Reply Cancel Reply

    fourteen + 15 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.