Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಡಿತರದಲ್ಲಿ ಗುಣಮಟ್ಟದ ಕುಚ್ಚಿಗೆ ಅಕ್ಕಿ ನೀಡಿ: ದಿನಕರ ಬಾಬು
    ಉಡುಪಿ ಜಿಲ್ಲೆ

    ಪಡಿತರದಲ್ಲಿ ಗುಣಮಟ್ಟದ ಕುಚ್ಚಿಗೆ ಅಕ್ಕಿ ನೀಡಿ: ದಿನಕರ ಬಾಬು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಜಿಲ್ಲೆಯ ಪಡಿತರ ಅಂಗಡಿಗಳಲ್ಲಿ ವಿತರಿಸಲಾಗುತ್ತಿರುವ ಬಿಳಿ ಕುಚ್ಚಿಗೆ ಅಕ್ಕಿಯ ಗುಣಮಟ್ಟ ಕಡಿಮೆಯಿದ್ದು, ಉತ್ತಮ ಗುಣಮಟ್ಟದ ಕುಚ್ಚಿಗೆ ಅಕ್ಕಿಯನ್ನು ಪೂರೈಸುವ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಸೂಚಿಸಿದರು.

    Click Here

    Call us

    Click Here

    ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಪಡಿತರ ವ್ಯವಸ್ಥೆಯಲ್ಲಿ ಜಿಲ್ಲೆಗೆ ಕುಚ್ಚಿಗೆ ಅಕ್ಕಿ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಅದರಂತೆ ಜಿಲ್ಲೆಗೆ ಕುಚ್ಚಿಗೆ ಅಕ್ಕಿ ಸರಬರಾಜು ಆಗುತ್ತಿದೆ. ಆದರೆ ಈ ಅಕ್ಕಿಯ ಗುಣಮಟ್ಟ ಸರಿಯಿಲ್ಲವೆಂದು ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿದೆ. ಉತ್ತಮ ಗುಣಮಟ್ಟದ ಕೆಂಪು ಕುಚ್ಚಿಗೆ ಅಕ್ಕಿಯನ್ನು ಪಡಿತರ ಅಂಗಡಿಗಳಲ್ಲಿ ವಿತರಿಸಿ, ಈ ಬಗ್ಗೆ ಪಡಿತರ ಸರಬರಾಜು ಮಾಡುವ ಆಹಾರ ನಿಗಮಕ್ಕೆ ಪತ್ರ ಬರೆಯುವಂತೆ ಅಧ್ಯಕ್ಷರು ಸೂಚಿಸಿದರು.

    ಜಿಲ್ಲೆಗೆ ಪ್ರಸ್ತುತ ಸರಬರಾಜು ಆಗುತ್ತಿರುವ ಕುಚ್ಚಿಗೆ ಆಂಧ್ರ ಪ್ರದೇಶದಿಂದ ಸರಬರಾಜು ಆಗುತ್ತಿದ್ದು, ಜಿಲ್ಲೆಯಲ್ಲಿ ಬೆಳೆಯುವ ಸ್ಥಳೀಯ ಕುಚ್ಚಿಗೆ ಅಕ್ಕಿ ಅಗತ್ಯ ಪ್ರಮಾಣದಲ್ಲಿ ಪಡಿತರ ಸರಬರಾಜು ವ್ಯವಸ್ಥೆಗೆ ದೊರೆಯುತ್ತಿಲ್ಲ ಎಂದು ಆಹಾರ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.

    ಬೇರೆ ರಾಜ್ಯಗಳಲ್ಲಿ ಕೆಂಪು ಕುಚ್ಚಿಗೆ ಬೆಳೆಯುತ್ತಿದ್ದಲ್ಲಿ ಆ ಅಕ್ಕಿಯನ್ನು ಜಿಲ್ಲೆಗೆ ಸರಬರಾಜು ಮಾಡಲು ಆಹಾರ ನಿಗಮಕ್ಕೆ ಪತ್ರ ಬರೆಯುವಂತೆ ಅಧ್ಯಕ್ಷರು ಸೂಚಿಸಿದರು.

    Click here

    Click here

    Click here

    Click Here

    Call us

    Call us

    ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಕುರಿತಂತೆ ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ ಎಂದು ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ ತಿಳಿಸಿದರು, ಜಿಲ್ಲೆಗೆ ಸರಬರಾಜು ಆಗುವ ಪ್ಲಾಸ್ಟಿಕ್‌ನ್ನು ನಿಷೇಧಿಸಿದರೆ, ಸಮರ್ಪಕ ಅನುಷ್ಠಾನ ಸಾಧ್ಯವಾಗಲಿದೆ. ಆದ್ದರಿಂದ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಸರಬರಾಜು ಮಾಡುವ ಸಗಟು ವ್ಯಾಪಾರಿಗಳ ಬಳಿ ಇರುವ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವಂತೆ ನಗರಾಭಿವೃಧ್ದಿ ಕೋಶದ ಅಧಿಕಾರಿಗಳಿಗೆ ಸೂಚಿಸಿದ ಅಧ್ಯಕ್ಷರು, ಗ್ರಾಮೀಣ ಪ್ರದೇಶದಲ್ಲಿ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲಾ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.

    ಪ್ಲಾಸ್ಟಿಕ್ ಚೀಲಗಳ ದರ ಕಡಿಮೆಯಿರುವುದರಿಂದ ಅದಕ್ಕೆ ಪರ್ಯಾಯವಾಗಿ ಅದೇ ದರದಲ್ಲಿ ಬಟ್ಟೆಯ ಉತ್ಪನ್ನಗಳನ್ನು ಸರಬರಾಜು ಮಾಡಿದ್ದಲ್ಲಿ ಪ್ಲಾಸ್ಟಿಕ್ ನಿಷೇಧ ಸಾಧ್ಯವಾಗಲಿದೆ. ಈ ಬಗ್ಗೆ ಅಧಿಕಾರಿಗಳು ಯೋಜನೆ ರೂಪಿಸುವಂತೆ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗಡೆ ಮಾರಾಳಿ ತಿಳಿಸಿದರು.

    ಜಲ ಜೀವನ್ ಮಿಷನ್ ಯೋಜನೆಯಡಿ ನೀರಿನ ಸಂಪರ್ಕ ನೀಡುವಾಗ, ಶಾಲೆಗಳು ಮತ್ತು ಅಂಗನವಾಡಿಗಳಿಗೂ ಸಹ ಸಂಪರ್ಕ ನೀಡುವಂತೆ ತಿಳಿಸಿದ ಅಧ್ಯಕ್ಷರು, ವಿಕಲಚೇತನರಿಗೆ ಮೀಸಲಿಟ್ಟಿರುವ ಅನುದಾನದಲ್ಲಿ, ವಿಕಲಚೇತನರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿ, ಅನುದಾನದ ಸಂಪೂರ್ಣ ಸದ್ವಿನಿಯೋಗ ಮಾಡಬೇಕು, ಎಲ್ಲಾ ಇಲಾಖೆಗಳು ನಿಗಧಿತ ಅವಧಿಯೊಳಗೆ ಗುರಿ ಸಾಧಿಸಲು ಕಾಯೋನ್ಮುಖವಾಗುವಂತೆ ಸೂಚಿಸಿದರು.

    ಸಭೆಯಲ್ಲಿ ಜಿ.ಪಂ. ಸಿಇಓ ಡಾ. ನವೀನ್ ಭಟ್, ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಪುತ್ರನ್, ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    sixteen + 8 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.