ಗುಜ್ಜಾಡಿ ಗ್ರಾಮದ ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡರು ಬಿಜೆಪಿಗೆ ಸೇರ್ಪಡೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗುಜ್ಜಾಡಿ ಗ್ರಾಮದ ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡರಾದ ರಾಜೀವ ಶ್ರೀಯಾನ್ ಮತ್ತು ಮನೋಹರ ಡಿಸೋಜ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

Call us

Click Here

ಬಳಿಕ ಮಾತನಾಡಿದ ಶಾಸಕ ಸುಕುಮಾರ್ ಶೆಟ್ಟಿ, ಕೇಂದ್ರ ಮತ್ತು ರಾಜ್ಯ ಸರಕಾರದ ಜನಪರ ಕಾರ್ಯಕ್ರಮ ಹಾಗೂ ಯೋಜನೆಗಳನ್ನು ಮೆಚ್ಚಿ ಬೇರೆ ಬೇರೆ ಪಕ್ಷಗಳ ಮುಖಂಡರು, ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಗುಜ್ಜಾಡಿ ಗ್ರಾಮದಲ್ಲಿ ಇಬ್ಬರು ಪ್ರಭಾವಿ ಕಾಂಗ್ರೆಸ್ ಮುಖಂಡರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿರುವುದರಿಂದ ಪಕ್ಷ ಇನ್ನಷ್ಟು ಬಲಿಷ್ಠವಾಗಿದೆ ಎಂದು ಹೇಳಿದರು.

ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯ ನಾರಾಯಣ ಕೆ. ಗುಜ್ಜಾಡಿ, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ರವಿ ಗಾಣಿಗ ಕೆಂಚನೂರು, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಹರೀಶ ಮೇಸ್ತ, ಬಿಜೆಪಿ ಬೈಂದೂರು ಮಂಡಲ ಉಪಾಧ್ಯಕ್ಷ ವಿನೋದ ಭಂಡಾರಿ, ತ್ರಾಸಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರವಿ ಶೆಟ್ಟಿಗಾರ್, ಪಕ್ಷದ ಮುಖಂಡರಾದ ಉಮೇಶ ಮೇಸ್ತ, ಶೇಖರ ದೇವಾಡಿಗ, ಸೋಮನಾಥ ಮೇಸ್ತ, ರಾಮನಾಥ ಚಿತ್ತಾಲ್, ದೇವದಾಸ ಖಾರ್ವಿ, ತಿಮ್ಮಪ್ಪ ಸಾಂಗ್ಲಿಯಾನ, ರಾಘವೇಂದ್ರ ಗಾಣಿಗ, ದತ್ತಾತ್ರೇಯ ಖಾರ್ವಿ, ಪುಂಡಲೀಕ ಮಂಕಿ, ಗುಜ್ಜಾಡಿ ಗ್ರಾಮದ ಬಿಜೆಪಿ ಮುಖಂಡರು, ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.

Leave a Reply