ವಿಠಲ ರಕುಮಾಯಿ ದೇಗುಲ: ಕಾರ್ತಿಕ ದೀಪೋತ್ಸವ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಇಲ್ಲಿನ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಶ್ರೀ ದೇವರ ಕಾರ್ತಿಕ ದೀಪೋತ್ಸವ ಜರಗಿತು.

Call us

Click Here

ಬೆಳಿಗ್ಗೆ ಪ್ರಾರ್ಥನೆಯೊಂದಿಗೆ ದೀಪೋತ್ಸವದ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿತು. ಧಾತ್ರಿ ಹವನ, ವನಭೋಜನ, ದೀಪೋತ್ಸವ, ಮಹಾಪೂಜೆ ಮತ್ತಿತರ ಧಾರ್ಮಿಕ ಅನುಷ್ಠಾನಗಳು ದೇವಳದ ಪ್ರಧಾನ ಅರ್ಚಕ ಜಿ.ಮೋಹನದಾಸ ಭಟ್ ಮತ್ತು ಜಿ.ಪ್ರದೀಪ ಭಟ್ ನೇತೃತ್ವದಲ್ಲಿ ಜರಗಿತು. ದೇವಳದ ತಾಂತ್ರಿಕ ಜಿ.ರಾಘವೇಂದ್ರ ಆಚಾರ್ಯ, ದೇವಳದ ಮೊಕ್ತೇಸರ ಗುಜ್ಜಾಡಿ ನರಸಿಂಹ ನಾಯಕ್, ಆಡಳಿತ ಮಂಡಳಿ ಸದಸ್ಯರಾದ ಡಾ.ಕಾಶೀನಾಥ ಪೈ, ಸುದನೇಶ ಶ್ಯಾನುಭಾಗ್, ಸುರೇಶ ಪೈ, ಪುರೋಹಿತರಾದ ಜಿ.ವಸಂತ ಭಟ್, ಅಜಿತ್ ಭಟ್, ಆಡಳಿತ ಮಂಡಳಿ ಸದಸ್ಯರು, ಪುರೋಹಿತರು, ಭಜಕರು ಮತ್ತಿತರರು ಉಪಸ್ಥಿತರಿದ್ದರು.

Leave a Reply