Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯುವ ಶಕ್ತಿಯ ಸದ್ಬಳಕೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಜಿ. ಜಗದೀಶ್
    ಉಡುಪಿ ಜಿಲ್ಲೆ

    ಯುವ ಶಕ್ತಿಯ ಸದ್ಬಳಕೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಜಿ. ಜಗದೀಶ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಜಿಲ್ಲೆಯ ಯುವಕ ಸಂಘಗಳಲ್ಲಿನ ಯುವಕರಿಗೆ ವೈವಿಧ್ಯಮಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮತ್ತು ಅವರಿಗೆ ಅಗತ್ಯ ತರಬೇತಿಗಳನ್ನು ನೀಡುವ ಮೂಲಕ, ಅವರಲ್ಲಿರುವ ಯುವಶಕ್ತಿಯನ್ನು ಜಿಲ್ಲೆಯ ಅಭಿವೃಧ್ದಿ ಕಾರ್ಯಗಳಿಗೆ ಬಳಸಿಕೊಳ್ಳುವಂತಹ ಕಾರ್ಯಕ್ರಮಗಳನ್ನು ರೂಪಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

    Click Here

    Call us

    Click Here

    ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ನೆಹರು ಯುವಕೇಂದ್ರದ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ನೆಹರು ಯುವಕೇಂದ್ರಂದ ಮೂಲಕ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಯುವಕ ಸಂಘಗಳ ಸದಸ್ಯರಿಗೆ ಅವರಲ್ಲಿನ ಸಮಾಜಸೇವೆಯ ಗುಣ, ಕೌಶಲ್ಯ ಮತ್ತು ಸಾಹಸ ಪ್ರವೃತ್ತಿಯನ್ನು ಅಭಿವೃದ್ಧಿಗೊಳಿಸುವಂತೆ ಚಟುವಟಿಕೆಗಳನ್ನು ಏರ್ಪಡಿಸಿ. ಯುವಕ ಯುವತಿಯರಿಗೆ ವಿಕೋಪ ನಿರ್ವಹಣೆ ಸೇರಿದಂತೆ ಅತ್ಯಾವಶ್ಯಕ ಸಂದರ್ಭದಲ್ಲಿ ಜಿಲ್ಲಾಡಳಿತ ಮತ್ತು ಸಮಾಜದ ನೆರವಿಗೆ ಧಾವಿಸುವಂತಹ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿ, ತುರ್ತು ಸಂದರ್ಭದಲ್ಲಿ ಈ ರೀತಿಯ ತರಬೇತಿ ಪಡೆದ ಯುವಕರ ಸೇವೆಯನ್ನು ಜಿಲ್ಲಾಡಳಿತದ ನೆರವಿಗೆ ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

    ನೆಹರು ಯುವ ಕೇಂದ್ರದಿದ ಸಿದ್ಧಪಡಿಸುವ ವಾರ್ಷಿಕ ಕಾರ್ಯಕ್ರಮಗಳಲ್ಲಿ, ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಯುವಕರು ತೊಡಗುವಂತಹ ಕಾರ್ಯಕ್ರಮಗಳನ್ನು ರೂಪಿಸಿ, ಉತ್ತಮವಾಗಿ ಕಾರ್ಯನಿರ್ವಹಿಸುವ ಯುವ ತಂಡಗಳನ್ನು ಸೂಕ್ತ ರೀತಿಯಲ್ಲಿ ಪ್ರೋತ್ಸಾಹಿಸಿ, ಯುವಕರಲ್ಲಿ ಆತ್ಮ ವಿಶ್ವಾಸ ಮೂಡಿಸುವಂತಹ ತರಬೇತಿಗಳು, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅಗತ್ಯವಾದ ತರಬೇತಿ, ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುವಂತಹ ತರಬೇತಿಗಳು, ತಮ್ಮ ಗ್ರಾಮಗಳಲ್ಲಿ ಸ್ವಚ್ಚತಾ ಕಾರ್ಯಕ್ರಮ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಆ ಸೌಲಭ್ಯಗಳನ್ನು ಜನರಿಗೆ ದೊರಕಿಸುವ ಕಾರ್ಯಕ್ರಮ ಮತ್ತು ಯುವಕರ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಬೆಳವಣಿಗೆಗೆ ಪೂರಕವಾಗುವಂತ ಯೋಜನೆಗಳನ್ನು ರೂಪಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

    ಜಿಲ್ಲೆಯಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿರುವ ಯುವ ಸಂಘಗಳ ಮಾಹಿತಿಯನ್ನು ಸಿದ್ಧಪಡಿಸಿಟ್ಟುಕೊಂಡು, ತುರ್ತು ಸಂದರ್ಭದಲ್ಲಿ ಅವರ ನೆರವು ಪಡೆಯಬೇಕು. ಯುವ ಜನತೆ ಮೊಬೈಲ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯರ್ಥವಾಗಿ ಕಾಲ ಕಳೆಯದೇ, ಸಾಮಾಜಿಕ ಕಾರ್ಯಗಳಿಂದ ಸಮಾಜಕ್ಕೆ ಅಗತ್ಯ ನೆರವು ನೀಡಬೇಕು. ಯುವಕರು ಸದಾ ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಕೊಂಡು, ತಮ್ಮಲ್ಲಿನ ಯುವಶಕ್ತಿಯ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡಬೇಕು. ತುರ್ತು ಸಂದರ್ಭಗಳಲ್ಲಿ ಜಿಲ್ಲಾಡಳಿತ ನೀಡುವ ಕರೆಗೆ ತಕ್ಷಣ ಸ್ಪಂದಿಸಬೇಕು ಎಂದು ಡಿಸಿ ಜಿ.ಜಗದೀಶ್ ಹೇಳಿದರು.

    Click here

    Click here

    Click here

    Call us

    Call us

    ಜಿಲ್ಲಾ ನೆಹರು ಯುವ ಕೇಂದ್ರದ 2020-21 ನೇ ಸಾಲಿನಲ್ಲಿ ಏರ್ಪಡಿಸಲಾಗುವ ವಾರ್ಷಿಕ ಕಾರ್ಯಕ್ರಮಗಳ ಕ್ರಿಯಾ ಯೋಜನೆಗೆ ಜಿಲ್ಲಾಧಿಕಾರಿ ಅನುಮೋದನೆ ನೀಡಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ನೆಹರು ಯುವ ಕೇಂದ್ರದ ವಿಷ್ಣುಮೂರ್ತಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    ನೆಹರು ಯುವ ಕೇಂದ್ರದ ಜಿಲ್ಲಾ ಸಮನ್ವಯಾಧಿಕಾರಿ ವಿಲ್ಪೆಡ್ ಡಿಸೋಜಾ ಸ್ವಾಗತಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    13/01/2026

    ಕಲ್ಪವೃಕ್ಷಕ್ಕೆ ಹೊಸ ಕಾಯಕಲ್ಪ ದೊರೆತ ಜಿಲ್ಲೆಯು ದೇಶಕ್ಕೇ ಮಾದರಿಯಾಗಲಿದೆ: ಸಂಸದ ಕೋಟ

    13/01/2026

    ಉಡುಪಿ: ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

    10/01/2026
    Leave A Reply Cancel Reply

    one × 2 =

    Call us

    Click Here

    Call us

    Call us

    Call us
    Highest Viewed Recently
    • ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಂಐಟಿಕೆ ವಿದ್ಯಾರ್ಥಿನಿ ಗೀತಾಂಜಲಿ ಸಾಧನೆ
    • ಫುಲ್ ಮ್ಯಾರಥಾನ್ 42 ಕಿಲೋಮೀಟರ್ ಓಟ: ಎ.ಆರ್.ಎಸ್.ಐ ಶಂಕರ್ ಅವರಿಗೆ ಕಂಚು
    • ಪೆರಂಪಳ್ಳಿ ಸುಬ್ರಮಣ್ಯ ಹೆಬ್ಬಾರ್ ಅವರಿಗೆ ʼವಿಶ್ವೇಶ ಸೇವಾ ಪ್ರಶಸ್ತಿʼ
    • ಹಾಲಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ
    • ಸಾಲಿಗ್ರಾಮ ಹಬ್ಬ- 2026 ಸಿದ್ಧತಾ ಸಭೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.