ಗಂಗೊಳ್ಳಿಯ ಪೌರ ಕಾರ್ಮಿಕರಿಗೆ ಗೌರವ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಶ್ರೀ ವೆಂಕಟೇಶ ಕೃಪಾ ಟ್ರೇಡರ್ಸ್‍ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ದೀಪಾವಳಿ ಧಮಾಕಾ ಸಮಾರೋಪ ಸಮಾರಂಭದಲ್ಲಿ ಗಂಗೊಳ್ಳಿ ಗ್ರಾಮದ ಪೌರ ಕಾರ್ಮಿಕರು ಹಾಗೂ ಎಸ್‌ಎಲ್‌ಆರ್‌ಎಂ ಘಟಕದ ಸಿಬ್ಬಂದಿಗಳನ್ನು ಗೌರವಿಸಲಾಯಿತು.

Call us

Click Here

ಗಂಗೊಳ್ಳಿಯ ಉದ್ಯಮಿ ಜಿ.ರಾಧಾಕೃಷ್ಣ ನಾಯಕ್ ಮಾತನಾಡಿ ಸ್ವಚ್ಛತಾ ಅಭಿಯಾನದಲ್ಲಿ ಪೌರ ಕಾರ್ಮಿಕರ ಸಲ್ಲಿಸುತ್ತಿರುವ ಸೇವೆ ಅತ್ಯುತ್ತವಾದದ್ದು. ಇವರ ಸೇವೆಯನ್ನು ಗುರುತಿಸಿ ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ. ಈ ನಿಟ್ಟಿನಲ್ಲಿ ಗಂಗೊಳ್ಳಿ ಗ್ರಾಮದಲ್ಲಿ ಸ್ವಚ್ಛತೆ ಮೂಲಕ ಸಮಾಜ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರನ್ನು ಗೌರವಿಸುತ್ತಿರುವುದು ಸ್ತುತ್ಯಾರ್ಹವಾದುದು ಎಂದು ಹೇಳಿದರು.

ಸಂಸ್ಥೆಯ ಸಂಸ್ಥಾಪಕ ಜಿ.ಭಾಸ್ಕರ ವಿಠಲ ಶೆಣೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಸೈನಿಕ ರತ್ನಾಕರ ಬೈಂದೂರು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಸ್ಥೆಯ ಪಾಲುದಾರ ಜಿ.ವೆಂಕಟೇಶ ಶೆಣೈ, ಜಯಶ್ರೀ ಭಾಸ್ಕರ ಶೆಣೈ ಮತ್ತಿತರರು ಉಪಸ್ಥಿತರಿದ್ದರು. ಸಂಸ್ಥೆಯ ಪಾಲುದಾರ ಜಿ.ವಿಠಲ ಭಾಸ್ಕರ ಶೆಣೈ ಸ್ವಾಗತಿಸಿ ವಂದಿಸಿದರು.

Leave a Reply