Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಡುಕರೆ ಬೀಚ್ ನಲ್ಲಿ ಮರೀನಾ ನಿರ್ಮಾಣ: ಜಿಲ್ಲಾಧಿಕಾರಿ ಸೂಚನೆ
    ಉಡುಪಿ ಜಿಲ್ಲೆ

    ಪಡುಕರೆ ಬೀಚ್ ನಲ್ಲಿ ಮರೀನಾ ನಿರ್ಮಾಣ: ಜಿಲ್ಲಾಧಿಕಾರಿ ಸೂಚನೆ

    Updated:17/12/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಪಡುಕರೆ ಬೀಚ್ ನಲ್ಲಿ ಮರೀನಾ ನಿರ್ಮಾಣ ಕುರಿತಂತೆ ಕಾರ್ಯ ಸಾಧ್ಯತಾ ವರದಿ ( ಫಿಸಿಬಲಿಟಿ ರಿಪೋರ್ಟ್) ಪಡೆಯುವ ಕುರಿತಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅಧ್ಯಕ್ಷತೆಯಲ್ಲಿ , ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.

    Click Here

    Call us

    Click Here

    ಪಡುಕರೆ ತೀರದಲ್ಲಿ ನೈಸರ್ಗಿಕ ದ್ವೀಪಗಳಿದ್ದು, ಸುಮಾರು 1.66 ಕಿಮೀ ನಿಂದ 2 ಕಿಮೀ ವರೆಗೆ ಬ್ರೇಕ್ ವಾಟರ್ ನಿರ್ಮಿಸಿ, 3.69 ಕಿಮೀ ಜಾಗದಲ್ಲಿ ಮರೀನಾ ನಿರ್ಮಿಸಬಹುದಾಗಿದ್ದು, ಈ ಕುರಿತಂತೆ ಪುಣೆಯ ಸಿ.ಡಬ್ಲೂಯ.ಪಿ.ಆರ್.ಎಸ್ ನಿಂದ ಕಾರ್ಯ ಸಾಧ್ಯತಾ ವರದಿಯನ್ನು ಪಡೆದು, ನಂತರ ವಿಸ್ತೃತಾ ಯೋಜನಾ ವರದಿ ತಯಾರಿಸುವಂತೆ ತಿಳಿಸಿದ ಜಿಲ್ಲಾಧಿಕಾರಿ ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಮೂಲಕ ಈ ಕಾರ್ಯವನ್ನು ಕೈಗೊಳ್ಳುವಂತೆ ತಿಳಿಸಿದರು.

    ಇಡೀ ಭಾರತದಲ್ಲಿ ಪೂರ್ಣ ಪ್ರಮಾಣದ ಮರೀನಾ ಇಲ್ಲವಾಗಿದ್ದು, ಉಡುಪಿಯ ಪಡುಕರೆಯಲ್ಲಿ ಮರೀನಾ ನಿರ್ಮಾಣವಾದಲ್ಲಿ  ಜಾಗತಿಕ ಪ್ರವಾಸಿ ತಾಣದಲ್ಲಿ ಗುರುತಿಸಿಕೊಳ್ಳುವುದರ ಜೊತೆಗೆ, ವಿಫುಲ ಉದ್ಯೋಗವಕಾಶಗಳು ಮತ್ತು ರಾಜ್ಯದ ಪ್ರವಾಸೋಧ್ಯಮ ಬೆಳವಣಿಗೆಗೆ ಅತ್ಯಂತ ಪ್ರಮುಖ ಕೊಡುಗೆಯಾಗಲಿದೆ ಎಂದ ಜಿಲ್ಲಾಧಿಕಾರಿಗಳು, ಸ್ಥಳೀಯ ಪರಿಸರಕ್ಕೆ ಯಾವುದೇ ಹಾನಿಯಾದಗಂತೆ, ಸಿ,ಆರ್.ಝಡ್. ನಿಮಯಮಗಳ ಉಲ್ಲಂಘನೆಯಾಗದಂತೆ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದರು.

    ಮರಿನಾ ಯೋಜನೆಯಿಂದಾಗಿ ವಿವಿಧ ಮಾದರಿಯ ದೋಣಿಗಳು ವಿಹಾರ ನೌಕೆಗಳು ಮತ್ತು ಮನೋರಂಜನಾ ವಿಹಾರ ದೋಣಿಗಳು ತಂಗಲು ಸಾಧ್ಯವಾಗಲಿದ್ದು, ತೇಲುವ ಸೇತುವೆ ಹೋಟೆಲ್, ರೆಸ್ಟೋರೆಂಟ್ ಮನೆ ನಿರ್ಮಾಣ, ಹಾಗೂ ವಿವಿಧ ಮಳಿಗೆಗಳನ್ನು ಸ್ಥಾಪಿಸಿ ಆದಾಯ ಗಳಿಸಬಹುದು ಮರೀನಾ ಇದು ವಿಶಿಷ್ಠ ಯೋಜನೆಯಾಗಿದ್ದು, ಭಾರತದಲ್ಲಿ ಯಾವುದೇ ವಿಶ್ವ ವರ್ಗದ ಮರೀನಾ ಇಲ್ಲ, ಪ್ರಸ್ತುತ ಕೊಚ್ಚಿನ್ ಮಾತ್ರ ಮರೀನಾ ಹೊಂದಿದ್ದು, ಅದೂ ಕೂಡಾ ಅಂತಾರಾಷ್ಟ್ರೀಯ ಬೋಟ್ ಮತ್ತು ವಿಹಾರ ನೌಕೆಗಳನ್ನು ಉಳಿಸಿಕೊಳ್ಳುವ ಸೌಲಭ್ಯಗಳು ಇಲ್ಲ, ವಿವಿಧ ಕಾರಣಗಳಿಂದಾಗಿ ವಿದೇಶಿ ನೌಕೆಗಳು ಅರಬ್ಬೀ ಸಮುದ್ರ ಮಾರ್ಗವಾಗಿ ದಕ್ಷಿಣ ಏಷ್ಯಾ ದೇಶಗಳಿಗೆ ಸಾಗಿ ಅಲ್ಲಿಯೇ ಲಂಗರು ಹಾಕುತ್ತವೆ, ಒಂದು ವರ್ಷದಲ್ಲಿ ಸುಮಾರು 4000 ನೌಕೆಗಳು ಈ ಮಾರ್ಗದಲ್ಲಿ ಸಾಗಲಿದ್ದು, ಈ ಮಾರ್ಗದಲ್ಲಿ ಸೂಕ್ತ ಮರೀನಾ ದ ಕೊರೆತೆಯಿದೆ. ಪಡುಕೆರೆಯಲ್ಲಿ ನಿರ್ಮಾಣವಾಗುವ ಮರೀನಾ ಗೆ ಅಂದಾಜು 800 ಕೋಟಿ ವೆಚ್ಚವಾಗಲಿದೆ ಎಂದರು.

    ಕಾರ್ಯ ಸಾಧ್ಯತಾ ವರದಿ ಮತ್ತು ವಿಸ್ತೃತಾ ಯೋಜನಾ ವರದಿಯನ್ನು ಪೆಬ್ರವರಿ ಒಳಗೆ ನೀಡಿದಲ್ಲಿ,ಮುಂದಿನ ಬಜೆಟ್ ನಲ್ಲಿ ಮರೀನಾ ನಿರ್ಮಾಣ ಕುರಿತಂತೆ ಅಗತ್ಯ ಅನುಮತಿಯನ್ನು ಪಡೆಯಲು ಸಾಧ್ಯವಾಗಲಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು.

    Click here

    Click here

    Click here

    Click Here

    Call us

    Call us

    ಮರೀನಾ ಅನುಷ್ಠಾನ ಕುರಿತಂತೆ ಕಾರ್ಯ ಸಾಧ್ಯತಾ ವರದಿ ಮತ್ತು ವಿಸ್ತೃತಾ ಯೋಜನಾ ವರದಿಯನ್ನು ಶೀಘ್ರದಲ್ಲಿ ಪಡೆಯಲು ಪ್ರಯತ್ನಿಸಲಾಗುವುದು ಹಾಗೂ ಅಗತ್ಯವಿರುವ ಎಲ್ಲಾ ಸಹಕಾರವನ್ನು ನೀಡಲಾಗುವುದು ಎಂದು ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು.

    ಮರೀನಾ ಅನುಷ್ಠಾನ ಕುರಿತ ಪ್ರಾತ್ಯಕ್ಷಿಕೆ ವರದಿಯನ್ನು ಗೋವಾದ ಅಮೋಲ್ ಮರೈನ್ ಟೆಕ್ ನ ಮಿಲಿಂದ ಪ್ರಭು ವಿವರಿಸಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ್ ಬರ್ಯಪ್ಪ ಕಮರೂರಮನೆ , ಪ್ರವಾಸೋದ್ಯಮ ಸಮಾಲೋಚಕ ಅಮಿತ್, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ಪ್ರಮುಖ ಪ್ರವಾಸೋದ್ಯಮ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    19 + four =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.