Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜ.1ರಿಂದ ಎಸ್ಸೆಸ್ಸೆಲ್ಸಿಗೆ ಅರ್ಧದಿನ ಶಾಲೆ
    ಉಡುಪಿ ಜಿಲ್ಲೆ

    ಜ.1ರಿಂದ ಎಸ್ಸೆಸ್ಸೆಲ್ಸಿಗೆ ಅರ್ಧದಿನ ಶಾಲೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಕೊರೊನಾ ಹಿನ್ನೆಲೆಯಲ್ಲಿ ಶಾಲೆಗಳು ಪ್ರಾರಂಭವಾಗದಿರುವುದರಿಂದ ರಾಜ್ಯದಲ್ಲಿ ಬಾಲ ಕಾರ್ಮಿಕರ ಸಂಖ್ಯೆ ಹಾಗೂ ಬಾಲ್ಯ ವಿವಾಹ ಹೆಚ್ಚಾಗುವ ಸಂಭವವಿದ್ದು, ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಜ.1ರಿಂದ ಸುರಕ್ಷತೆ ಹಾಗೂ ಮುಂಜಾಗ್ರತೆಗಳೊಂದಿಗೆ ಶಾಲೆಗಳನ್ನು ಪ್ರಾರಂಭಿಸಲು ಸರ್ಕಾರ ಸೂಚಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ ಮುಖ್ಯಸ್ಥರಿಗೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ಡಿಡಿಪಿಐ ನಾಗೂರ ತಿಳಿಸಿದ್ದಾರೆ.

    Click Here

    Call us

    Click Here

    ಬೋರ್ಡ್ ಹೈಸ್ಕೂಲ್‌ನಲ್ಲಿ ನಡೆದ ಎಲ್ಲ ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯೋಪಾಧ್ಯಯರ ಸಭೆಯಲ್ಲಿ ಶಾಲೆಗಳ ಮುಖ್ಯಸ್ಥರು ಪಾಲಿಸಬೇಕಾದ ಸೂಚನೆಗಳನ್ನು ತಿಳಿಸಲಾಗಿದೆ ಎಂದು ಡಿಡಿಪಿಐ ತಿಳಿಸಿದ್ದಾರೆ.

    ಜ.1ರಿಂದ ಶಾಲಾ ಆವರಣದಲ್ಲಿ 6 ರಿಂದ 9ನೇ ತರಗತಿವರೆಗೆ ವಿದ್ಯಾಗಮ–2 ಕಾರ್ಯಕ್ರಮ ಆರಂಭಿಸಬೇಕು, 10ನೇ ತರಗತಿ ವಿದ್ಯಾರ್ಥಿಗಳಿಗೆ ಅರ್ಧದಿನ ತರಗತಿ ನಡೆಸಬೇಕು, ಒಂದು ತಂಡದಲ್ಲಿ 15 ವಿದ್ಯಾರ್ಥಿಗಳು ಮಾತ್ರ ಇರುವಂತೆ ನೋಡಿಕೊಳ್ಳಬೇಕು. ಇದಕ್ಕೂ ಮುನ್ನ ಶಾಲಾ ಆವರಣ ಹಾಗೂ ಕೊಠಡಿಗಳನ್ನು ಸ್ಥಳೀಯ ಸಂಸ್ಥೆಗಳ ಸಹಕಾರದಿಂದ ಸ್ವಚ್ಛಗೊಳಿಸಬೇಕು, ಶೌಚಾಲಯದಲ್ಲಿ ನಿರಂತರ ನೀರು ಸರಬರಾಜು ಇರಬೇಕು, ಪ್ರತಿ ಮಗು ಶೌಚಾಲಯ ಬಳಸಿದ ಬಳಿಕ ಸೋಡಿಯಂ ಹೈಪೊಕ್ಲೋರೈಡ್‌ನಿಂದ ಸ್ವಚ್ಛಗೊಳಿಸಬೇಕು ಎಂದು ಸೂಚನೆ ನೀಡಿದ್ದಾರೆ.

    ಡಿ.28ರೊಳಗೆ ಶಾಲೆಯನ್ನು ಸ್ವಚ್ಛಗೊಳಿಸಿರುವ ಬಗ್ಗೆ ಶಾಲಾ ಮುಖ್ಯಸ್ಥರು ಸಿಆರ್‌ಪಿಗೆ ವರದಿ ಸಲ್ಲಿಸಬೇಕು. ಮಕ್ಕಳು ಶಾಲೆಗೆ ಬಂದ ಬಳಿಕ ವಸ್ತುಗಳನ್ನು ಮುಟ್ಟದಂತೆ ತಿಳಿವಳಿಕೆ ನೀಡುವುದು, ವಿದ್ಯಾರ್ಥಿಗಳ ಆರೋಗ್ಯ ಕಾಳಜಿಗೆ ಪ್ರತಿ ಶಾಲೆಯಲ್ಲಿ ಶಿಕ್ಷಕರೊಬ್ಬರನ್ನು ಮೆಂಟರ್ ಆಗಿ ನೇಮಿಸುವುದು, ವಿದ್ಯಾರ್ಥಿಗಳು ಮನೆಯಿಂದಲೇ ಕುಡಿಯುವ ನೀರು ತರಲು ಸೂಚಿಸುವುದು, ತರದಿದ್ದರೆ ಬಿಸಿನೀರಿನ ವ್ಯವಸ್ಥೆ ಮಾಡುವುದು ಶಾಲಾ ಮುಖ್ಯಸ್ಥರ ಕರ್ತವ್ಯ ಎಂದು ಡಿಡಿಪಿಐ ನಿರ್ದೇಶನ ನೀಡಿದ್ದಾರೆ.

    ಮಕ್ಕಳು ಕೈತೊಳೆಯಲು ಸೋಪ್ ವ್ಯವಸ್ಥೆ ಮಾಡುವುದು, ಎಲ್ಲ ಶಿಕ್ಷಕರು ಶಾಲೆ ಪ್ರವೇಶಿಸುವ 72 ಗಂಟೆ ಮುನ್ನ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ನೆಗೆಟಿವ್ ಇದ್ದರೆ ಮಾತ್ರ ಶಾಲೆಗೆ ಹಾಜರಾಗಬೇಕು, ಪ್ರತಿ ಶಾಲೆಯಲ್ಲಿ ಒಂದು ಕೊಠಡಿಯನ್ನು ಐಸೊಲೇಷನ್ ಕೊಠಡಿಯಾಗಿ ಗುರುತಿಸಿ, ಶೀತ, ಕೆಮ್ಮು, ನೆಗಡಿ ಸೋಂಕು ಕಂಡುಬಂದ ಮಕ್ಕಳನ್ನು ಕೊಠಡಿಯಲ್ಲಿ ಪ್ರತ್ಯೇಕಿಸಬೇಕು ಎಂದು ಡಿಡಿಪಿಐ ಸೂಚನೆ ನೀಡಿದ್ದಾರೆ.

    Click here

    Click here

    Click here

    Call us

    Call us

    50 ವರ್ಷ ಮೇಲ್ಪಟ್ಟ ಶಿಕ್ಷಕರು ಕಡ್ಡಾಯವಾಗಿ ಮಾಸ್ಕ್ ಹಾಗೂ ಫೇಸ್ ಶೀಲ್ಡ್ ಬಳಸಬೇಕು, ವಿದ್ಯಾರ್ಥಿಗಳು ಮಾಸ್ಕ್ ಬಳಸುವಂತೆ ಕ್ರಮ ವಹಿಸಬೇಕು, ಶಾಲಾ ದಾಖಲಾತಿ ಕಡ್ಡಾಯ ಆದರೆ, ಹಾಜರಾಗಿ ಕಡ್ಡಾಯವಲ್ಲ, ಮಕ್ಕಳಿಗೆ ಶೀತ, ನೆಗಡಿ, ಜ್ವರ ಇಲ್ಲದ ಬಗ್ಗೆ ಪೋಷಕರಿಂದ ದೃಢೀಕರಣ ಪತ್ರ ಪಡೆಯಬೇಕು, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಆರ್ಟಿಪಿಸಿಆರ್ ಪರೀಕ್ಷೆ ನಡೆಸಿ ನೆಗೆಟಿವ್ ಬಂದರೆ ಮಾತ್ರ ದಾಖಲಾತಿ ಮಾಡಿಕೊಳ್ಳಬೇಕು, ಎಲ್ಲ ಶಾಲೆಗಳ ಮುಖ್ಯಸ್ಥರು ಎಸ್ಡಿಎಂಸಿ ಹಾಗೂ ದಾನಿಗಳ ನೆರವಿನಿಂದ ಥರ್ಮಲ್ ಸ್ಕ್ಯಾನರ್ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಡಿಡಿಪಿಐ ನಾಗೂರ ನಿರ್ದೇಶನ ನೀಡಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    17/12/2025

    ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ

    17/12/2025

    ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.