Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಯೋಧ್ಯೆ ಶ್ರೀರಾಮನಿಗೆ ಕೋಟೇಶ್ವರದ ರಥ!
    ವಿಶೇಷ ವರದಿ

    ಅಯೋಧ್ಯೆ ಶ್ರೀರಾಮನಿಗೆ ಕೋಟೇಶ್ವರದ ರಥ!

    Updated:29/12/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ವರದಿ.
    ಕುಂದಾಪುರ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ರಾಮ ಮಂದಿರಕ್ಕೆ ಕುಂದಾಪುರ ತಾಲೂಕಿನ ಕೋಟೇಶ್ವರ ಪ್ರಸಿದ್ಧ ಶಿಲ್ಪಕಲಾ ಶಾಲೆಯಲ್ಲಿ ರಥ ನಿರ್ಮಿಸುವ ಸಿದ್ಧತೆಗಳು ಸದ್ದಿಲ್ಲದೆ ನಡೆಯುತ್ತಿದೆ.

    Click Here

    Call us

    Click Here

    ಕಳೆದ ಕೆಲ ತಿಂಗಳುಗಳ ಹಿಂದೆ ಅಯೋಧ್ಯೆ ಶ್ರೀ ರಾಮ ಮಂದಿರದ ರಥ ನಿರ್ಮಾಣದ ಮಾತುಕತೆ ನಡೆದಿದ್ದು, ಕೋಟೇಶ್ವರದ ರಥಶಿಲ್ಪಿ, ಜಕಣಾಚಾರಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀನಾರಾಯಣ ಆಚಾರ್ಯ ಅವರ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಶಾಲೆಯಲ್ಲಿಯೇ ಅಯೋಧ್ಯೆ ರಥ ನಿರ್ಮಾಣವಾಗುವುದು ಬಹುತೇಕ ಖಚಿತವಾಗಿದೆ. ಕುಂದಾಪ್ರ ಡಾಟ್ ಕಾಂ.

    ಅಯೋಧ್ಯೆ ರಾಮ ಮಂದಿರದ ರಥ ನಿರ್ಮಾಣದ ಕುರಿತು ಚರ್ಚೆ ಬಂದಾಗ ಲಕ್ಷ್ಮೀನಾರಾಯಣ ಆಚಾರ್ಯ ಅವರ ಹೆಸರು ಕೇಳಿಬಂದಿದ್ದು, ಇದಕ್ಕೆ ಪೂರಕವೆಂಬಂತೆ ವಿನ್ಯಾಸ ಸಮಿತಿಯಲ್ಲಿ ಪ್ರಮುಖರಾಗಿರುವ ಲೇಖಕಿ ಹಾಗೂ ಅಂಕಣಕಾರ್ತಿ ಶೇಫಾಲಿ ವೈದ್ಯ ಅವರು ಕೋಟೇಶ್ವರ ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯರ ಮನೆಗೆ ಭೇಟಿ ನೀಡಿ ಹಲವು ದೇವಾಲಯಗಳಿಗೆ ಸುಂದರ ರಥ ನಿರ್ಮಿಸಿರುವುದನ್ನು ತಿಳಿದು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆ ಬಳಿಕ ಉತ್ತರ ಭಾರತದ ಶೈಲಿ ಹಾಗೂ ದಕ್ಷಿಣ ಭಾರತದ ಶೈಲಿ ರಥಗಳ ಬಗ್ಗೆ ಚರ್ಚಿಸಿ ಸಮಿತಿಯಿಂದ ಉತ್ತರಾಯಣದಲ್ಲಿ ಅಂತಿಮ ನಿರ್ಧಾರ ತಿಳಿಸುವುದಾಗಿಯೂ ಹೇಳಿದ್ದರು. ಕುಂದಾಪ್ರ ಡಾಟ್ ಕಾಂ ವರದಿ.

    ಈ ಬಗ್ಗೆ ಟ್ವಿಟರ್‌ನಲ್ಲಿ ಹೇಳಿಕೊಂಡಿರುವ ಲೇಖಕಿ ಶೆಫಾಲಿ ವೈದ್ಯ, ಕೋಟೇಶ್ವರದ ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಅವರಿಗೆ ಅಯೋಧ್ಯ ರಾಮ ಮಂದಿರದ ರಥ ನಿರ್ಮಾಣದ ಜವಾಬ್ದಾರಿ ನೀಡಲಾಗಿದೆ ಎಂದಿದ್ದಾರೆ.

    Click here

    Click here

    Click here

    Call us

    Call us

    ಪ್ರಸಿದ್ಧ ದೇಗುಲಗಳಿಗೆ ಇಲ್ಲಿಯದೇ ರಥ:
    ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಶಾಲೆಯಿಂದ ಧರ್ಮಸ್ಥಳ, ಸುಬ್ರಹ್ಮಣ್ಯ ದೇವಸ್ಥಾನಗಳು ಸೇರಿದಂತೆ ಪ್ರಸಿದ್ಧ ದೇಗುಲಗಳಿಗೆ ರಥ ನಿರ್ಮಿಸಲಾಗಿದೆ. ಈವರೆಗೆ 27ಕ್ಕೂ ಅಧಿಕ ಬ್ರಹ್ಮರಥ, 1 ಇಂದ್ರರಥ, 1 ಚಂದ್ರರಥ, 2 ಚಿನ್ನದ ರಥ, 8 ಬೆಳ್ಳಿರಥ, 63 ಪುಪ್ಪರಥಗಳನ್ನು ನಿರ್ಮಿಸಲಾಗಿದೆ. 1960ರಲ್ಲಿ ಶ್ರೀ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಶಾಲೆ ಎನ್ನುವ ಕಾರ್ಯಾಗಾರ ನಿರ್ಮಿಸಿಕೊಂಡು ರಥಗಳನ್ನು ಹಾಗು ಶಿಲ್ಪಕಲೆಗೆ ಸಂಬಂಧಪಟ್ಟ ಕೆಲಸಗಳನ್ನು ಇಲ್ಲಿಯೇ ತಯಾರಿಸಲಾಗುತ್ತದೆ. ಶಿಲ್ಪಕಲಾ ಶಾಲೆಯಲ್ಲಿ ಒಂದೇ ಬಾರಿಗೆ 3-4 ರಥಗಳನ್ನು ತಯಾರು ಮಾಡುವ ಅನುಕೂಲತೆ ಹೊಂದಿದೆ. ಒಟ್ಟಿನಲ್ಲಿ ಅಯೋಧ್ಯೆ ರಾಮ ಮಂದಿರಕ್ಕೆ ಕುಂದಾಪುರ ತಾಲೂಕಿನ ಕೋಟೇಶ್ವರದ ರಥ ನಿರ್ಮಾಣವಾಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಕುಂದಾಪ್ರ ಡಾಟ್ ಕಾಂ ವರದಿ.

    ಅಯೋಧ್ಯೆ ರಾಮ ಮಂದಿರಕ್ಕೆ ರಥ ನಿರ್ಮಾಣದ ಮಾಡಿಕೊಡುವ ಪ್ರಸ್ತಾಪ ಬಂದಿರುವುದು ನಿಜ. ಶೆಫಾಲಿ ವೈದ್ಯ ಅವರು ನಮ್ಮ ಶಿಲ್ಪಕಲಾ ಶಾಲೆಗೆ ಭೇಟಿ ನೀಡಿ ರಥ ನಿರ್ಮಾಣದ ಮಾಹಿತಿ ಪಡೆದಿದ್ದರು. ಈ ಬಗ್ಗೆ ರಾಮಮಂದಿರ ಸಮಿತಿಯಿಂದ ಅಧಿಕೃತ ಸೂಚನೆ ಈವರೆಗೆ ಬಂದಿಲ್ಲ ಎಂದು ರಾಜಗೋಪಾಲ ಆಚಾರ್ಯ ಅವರು ಕುಂದಾಪ್ರ ಡಾಟ್ ಕಾಂಗೆ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.