Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪ್ರ ಡಾಟ್ ಕಾಂ ಅರ್ಪಿಸುವ ಬೈಂದೂರು ಡೈರೆಕ್ಟರಿ ಬಿಡುಗಡೆ
    ನಮ್ದೇ ಸಮಾಚಾರ

    ಕುಂದಾಪ್ರ ಡಾಟ್ ಕಾಂ ಅರ್ಪಿಸುವ ಬೈಂದೂರು ಡೈರೆಕ್ಟರಿ ಬಿಡುಗಡೆ

    Updated:18/11/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಹಿರಿಯ ಸಾಹಿತಿ ನಾ. ಡಿಸೋಜ ಬೈಂದೂರು ಡೈರೆಕ್ಟರಿ ಬಿಡುಗಡೆಗೊಳಿಸಿ ಮಾತನಾಡಿದರು.

    Click Here

    Call us

    Click Here

    ಬೈಂದೂರು: ಬೈಂದೂರಿಗೆ ಸಾಕಷ್ಟು ಪ್ರಾಚೀನತೆ ಇದೆ. ಇಲ್ಲಿ ಹಲವಾರು ಪುರಾತನ ಶ್ರದ್ಧಾಕೇಂದ್ರಗಳು, ಪ್ರೇಕ್ಷಣೀಯ ಸ್ಥಳಗಳಿದ್ದರೂ ಗುರುತಿಸುವಂತಹ ಸ್ಥಾನಮಾನ ಇನ್ನೂ ಸಿಕ್ಕಿಲ್ಲ. ಬೈಂದೂರನ್ನು ಶೀಘ್ರದಲ್ಲಿಯೇ ತಾಲೂಕಾಗಿ ಘೋಷಣೆ ಮಾಡುವ ಮೂಲಕ ಬೈಂದೂರಿನ ಪ್ರಾಚಿನತೆಗೆ, ಐತಿಹಾಸಿಕ ಶ್ರೀಮಂತಿಕೆಗೆ ನ್ಯಾಯಸಮ್ಮತ ಸ್ಥಾನವನ್ನು ನೀಡಿದಂತಾಗಬಹುದೆಂದು ಪ್ರಸಿದ್ಧ ಸಾಹಿತಿ, ೮೦ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ನಾ. ಡಿಸೋಜ ಹೇಳಿದರು.

    ‘ಕುಂದಾಪ್ರ ಡಾಟ್ ಕಾಂ’ ನ ವಿನೂತನ ಪರಿಕಲ್ಪನೆಯಂತೆ ಮೂಡಿಬಂದ ಬೈಂದೂರಿನ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಪ್ರಕಟಿಸಿದ ’ಬೈಂದೂರು ಡೈರೆಕ್ಟರಿ’ ಪುಸ್ತಕವನ್ನು ಇಲ್ಲಿನ ಶಾರದಾ ವೇದಿಕೆಯಲ್ಲಿ ಸೆ.21 ರ ಸಂಜೆ ಜರುಗಿದ ಸಮಾರಂಭದಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

    ಒಂದು ದೇಶದ ಇತಿಹಾಸವನ್ನು ಎಲ್ಲಿಯ ವರೆಗೆ ನಮ್ಮದಾಗಿಸಿಕೊಳ್ಳುವುದಿಲ್ಲವೋ ಅಲ್ಲಿಯ ತನಕ ಒಂದು ಊರನ್ನು ಮುಂದಿನ ಪೀಳಿಗೆಗೆ ಕಟ್ಟಿಕೊಡಲು ಸಾಧ್ಯವಾಗದು. ಇತಿಹಾಸ, ಪರಂಪರೆಯ ಅರಿವು, ಪ್ರಜ್ಞೆ ಪ್ರತಿಯೊಬ್ಬರಿಗೂ ಅಗತ್ಯವಾಗಿದ್ದು ಇದರಿಂದ ಒಂದು ನಾಡನ್ನು, ಒಂದು ಊರನ್ನು ಮುಂದಿನ ದಿನಗಳಲ್ಲಿ ಕಟ್ಟಲು ಬೇಕಾದ ಸ್ಫೂರ್ತಿಯು ದೊರಕುತ್ತದೆ ಎಂದು ಅಭಿಪ್ರಾಯ ಪಟ್ಟ ನಾಡಿ, ಬೈಂದೂರನ್ನು ಪರಿಪೂರ್ಣವಾಗಿ ಅರ್ಥಮಾಡಿಕೊಡುವ ಹಾಗೂ ಬೈಂದೂರಿಗರಿಗೆ ಅದನ್ನು ತಮ್ಮದಾಗಿ ಮಾಡಿಕೊಳ್ಳಲು ಅತ್ಯುಪಯುಕ್ತವಾಗುವ ನಿಟ್ಟಿನಲ್ಲಿ ಪ್ರಕಟಗೊಂಡ ಬೈಂದೂರು ಡೈರೆಕ್ಟರಿ ಒಂದು ಮಹತ್ವಪೂರ್ಣವಾದ ಪುಸ್ತಕ ಎಂದು ಶ್ಲಾಘಿಸಿದರು.

    ಇಂದು ಜ್ಞಾನ ಸಂಪಾದನೆ ಕಷ್ಟಕರವಲ್ಲ ಆದರೆ ಜ್ಞಾನವನ್ನು ಆಮದು ಮಾಡಿಕೊಳ್ಳುವ ಸ್ಥಿತಿಗೆ ತಲುಪಿದ್ದೇವೆ. ಇದರಿಂದಾಗಿ ನಮ್ಮ ಸ್ಥಳೀಯ ಜ್ಞಾನ ನಿರ್ಲಕ್ಷಕ್ಕೊಳಗಾಗಿದೆ. ಸ್ಥಳೀಯ ಮಾಹಿತಿಗಳನ್ನು ಡೈರೆಕ್ಟರಿ ರೂಪದಲ್ಲಿ ಪ್ರಕಟಿಸಿದ್ದರಿಂದ ಸ್ಥಳೀಯ ಜ್ಞಾನಕ್ಕೆ ಪ್ರಾಮುಖ್ಯ ಲಭಿಸುತ್ತದೆ, ಪ್ರವಾಸಿಗರಿಗೂ ಇದು ಹೆಚ್ಚು ಅನುಕೂಲಕಾರಿ ಎಂದು ಹೇಳಿದರು.

    Click here

    Click here

    Click here

    Call us

    Call us

    ಉಡುಪಿ ಜಿಲ್ಲಾ ಕ.ಸಾ.ಪ. ಪೂರ್ವಾಧ್ಯಕ್ಷ, ಸಾಹಿತಿ ಯು. ಚಂದ್ರಶೇಖರ ಹೊಳ್ಳ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಕುಂದಾಪುರದ ಹಿರಿಯ ನ್ಯಾಯವಾದಿ ಎ.ಎಸ್.ಎನ್. ಹೆಬ್ಬಾರ್, ಪತ್ರಕರ್ತರ ವೇದಿಕೆ ಬೆಂಗಳೂರು ಇದರ ಉಡುಪಿ ಜಿಲ್ಲಾಧ್ಯಕ್ಷ ಶೇಖರ ಅಜೆಕಾರು, ಬೈಂದೂರು ಯುಸ್ಕೋರ್ಡ್ ಟ್ರಸ್ಟ್ ನ ನಾಗರಾಜ ಪಿ. ಯಡ್ತರೆ ಅವರು ಶುಭಶಂಸನೆಗೈದು ಬೈಂದೂರು ಡೈರೆಕ್ಟರಿಯನ್ನು ಅರ್ಥಪೂರ್ಣ ಹೊತ್ತಗೆಯಾಗಿ ಹೊರತಂದ ತಂಡದ ಪ್ರಯತ್ನ ಪ್ರಶಂಸಾರ್ಹ ಎಂದರು.

    ಬೈಂದೂರಿಗೆ ಮೊದಲ ಬಾರಿಗೆ ಆಗಮಿಸಿದ್ದ ಸಾಹಿತಿ ನಾ. ಡಿಸೋಜ ದಂಪತಿಯನ್ನು ಕುಂದಾಪ್ರ ಡಾಟ್ ಕಾಂ ವತಿಯಿಂದ ಸಮ್ಮಾನಿಸಿ, ಚಿತ್ರ ಕಲಾವಿದ ದಿನೇಶ್ ಸಿ. ಹೊಳ್ಳ ಅವರು ರಚಿಸಿದ ನಾ. ಡಿಸೋಜ ಅವರ ರೇಖಾಚಿತ್ರ ಕಲಾಕೃತಿಯನ್ನು ಸಮರ್ಪಿಸಲಾಯಿತು.

    ಗೀತ ರಚನೆಕಾರ ರವೀಂದ್ರ ಪಿ. ಅವರ ನೂತನ ಧ್ವನಿ ಸುರುಳಿಯನ್ನು ಈ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು.

    ಬೈಂದೂರು ಡೈರೆಕ್ಟರಿಯ ಲೇಖಕ ಸುನಿಲ್ ಹೆಚ್. ಜಿ. ಬೈಂದೂರು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರವೀಣ ಟಿ. ಬೈಂದೂರು ಧನ್ಯವಾದಗೈದರು. ಸುಧಾಕರ ಪಿ. ಕಾರ್ಯಕ್ರಮ ನಿರೂಪಿಸಿದರು.

    ಸಭಾ ಕಾರ್ಯಕ್ರಮದ ಬಳಿಕ ಅಕಾಶವಾಣಿ ಕಲಾವಿದ ಚಂದ್ರ ಕೆ. ಹೆಮ್ಮಾಡಿ ಮತ್ತು ಬಳಗದವರಿಂದ ಸಂಗೀತ ರಸಸಂಜೆ ಕಾರ್ಯಕ್ರಮ ನಡೆಯಿತು.

    DSC_0428DSC_0442DSC_0446DSC_0452DSC_0458DSC_0473DSC_0483DSC_0484DSC_0488DSC_0500DSC_0503DSC_0508DSC_0545DSC_0554DSC_0583DSC_0584DSC_0590DSC_0629

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಗಂಭೀರ ವಿಷಯವನ್ನೂ ತಿಳಿಯಾಗಿ ಹೇಳುವ ಶಕ್ತಿ ಕಾರ್ಟೂನಿಗಿದೆ: ಹೊಂಬಾಳೆ ಫಿಲ್ಮ್ಸ್ ಕಾರ್ತಿಕ್ ಗೌಡ

    23/11/2022

    ಡಿ.3-5 ಕುಂದಾಪುರದಲ್ಲಿ ಕಾರ್ಟೂನು ಹಬ್ಬದ ಕಲರವ

    10/11/2021

    ಕುಂದಾಪುರ: ಕಾರ್ಟೂನ್ ಹಬ್ಬಕ್ಕೆ ಚಾಲನೆ ನೀಡಿದ ಬಾಲಿವುಡ್ ನಟ ಸೋನು ಸೂದ್

    12/12/2020

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d