Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಎನ್‌ಸಿಸಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯಿಂದ ತರಬೇತಿ
    alvas nudisiri

    ಆಳ್ವಾಸ್ ಎನ್‌ಸಿಸಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯಿಂದ ತರಬೇತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ: ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಹಾಗೂ ಅಳ್ವಾಸ್‌ನ ಎನ್‌ಸಿಸಿ ಘಟಕದ ಸಹಯೋಗದೊಂದಿಗೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ರಿಜಿನಲ್ ರೆಸ್ಪಾನ್ಸ್ ಸೆಂಟರ್, ಬೆಂಗಳೂರು ಇವರ ವತಿಯಿಂದ ಮೂರು ದಿನಗಳ ವಿಪತ್ತು ನಿರ್ವಹಣಾ ತರಬೇತಿ ಕಾರ್ಯಗಾರ ನಡೆಯಿತು.

    Click Here

    Call us

    Click Here

    ಮುಖ್ಯ ಅತಿಥಿಯಾಗಿ ಮುಲ್ಕಿ-ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ಜನರು ಎನ್ಸಿಸಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಶಿಸ್ತು ಹಾಗೂ ನೇರನುಡಿಯನ್ನು ಕಲಿಯಲು ಸಾಧ್ಯ ಎಂದು., ದೇಶಸೇವೆ ಹಾಗೂ ಜನರ ರಕ್ಷಣೆ ಮಾಡಲು ಸೇನೆಯಲ್ಲಿ ವಿಪುಲ ಅವಕಾಶಗಳಿವೆ. ಇಂದಿನ ಯುವಜನರು ಸೈನ್ಯ ಸೇರುವ ಮನೋಸ್ಥೈರ್ಯ ಬೆಳೆಸಿಕೊಳ್ಳಬೇಕೆಂದರು.

    ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಅಪಘಾತ ಸಂಭವಿಸಿದಾಗ ತಕ್ಷಣದ ಸಹಾಯ ಮಾಡದೆ, ಹೆಚ್ಚಿನ ಜನರು ಪರಿಸ್ಥಿತಿಯ ತೀವ್ರತೆಯನ್ನು ನೋಡುಗರಾಗಿಯೇ ಉಳಿದುಬಿಡುತ್ತಾರೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯಿಂದ ನೀಡುವ ತರಬೇತಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ತುರ್ತು ಸಂದರ್ಭಗಳಲ್ಲಿ ನೆರವಾಗಬೇಕೆಂದು ಹೇಳಿದರು.

    ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯಿಂದ ಸಬ್ ಇನ್ಸ್ಪೆಕ್ಟರ್ ಪ್ರವೀಣ್ ಕುಮಾರ್ ಉಪಾಧ್ಯ, ಹೆಡ್ ಕಾನ್ಸೇಟಬಲ್ ಬಾಳಪ್ಪ ಎಂ. ಜಿ, ಹೆಡ್ ಕಾನ್ಸೇಟಬಲ್ ಜಿ ಎಲ್ ಆಕಾಶ್, ಕಾನ್ಸೇಟಬಲ್ ಜವೇದ್ ಖಾಸಿ, ಕಾನ್ಸೇಟಬಲ್ ಜಿ ಡಿ ಕಣ್ಣನ್ ಕೆ. ಎಸ್, ಕಾನ್ಸೇಟಬಲ್ ಎಸ್ ಸಿ ಹೂಗಾರ್ ತರಬೇತುದಾರರಾಗಿ ಆಗಮಿಸಿದ್ದರು. ತರಬೇತಿಯಲ್ಲಿ ವಿವಿಧ ತುರ್ತು ಸಂದರ್ಭಗಳಾದ ಬೆಂಕಿ ಅವಘಡ, ರಸ್ತೆ ಅಪಘಾತ, ಜಲ ವಿಪತ್ತು, ತುರ್ತು ವೈದ್ಯಕೀಯ ಸಹಾಯದಂತಹ ನಿರ್ವಹಣೆಯನ್ನು ಪ್ರಾತ್ಯಕ್ಷಿಕೆ ಹಾಗೂ ಮಾದರಿಗಳ ಮೂಲಕ ತಿಳಿಸಲಾಯಿತು. ಆಳ್ವಾಸ್ ಎನ್ಸಿಸಿ ಘಟಕದ 210 ವಿದ್ಯಾರ್ಥಿಗಳು ಹಾಗೂ ಸೃಷ್ಟಿ ಕ್ಲಬ್ ನ 7 ವಿದ್ಯಾರ್ಥಿಗಳು ಭಾಗವಹಿಸಿದ್ದರು.

    ಕಾರ್ಯಗಾರದಲ್ಲಿ ಪ್ರಾಂಶುಪಾಲ ಡಾ. ಪೀಟರ್ ಫೆರ್ನಾಂಡೀಸ್, ಫ್ಲೆಯಿಂಗ್ ಆಫಿಸರ್ ಪರ್ವೇಝ್ ಶರೀಫ್ ಬಿ ಜಿ, ಸೇನಾ ವಿಭಾಗದ ಅಸೋಸಿಯೇಟ್ ಎನ್ಸಿಸಿ ಆಫೀಸರ್ ಕ್ಯಾಪ್ಟನ್ ಡಾ ರಾಜೇಶ್, ನೌಕಾ ವಿಭಾಗದ ಅಸೋಸಿಯೇಟ್ ಎನ್ಸಿಸಿ ಆಫಿಸರ್ ಸಬ್ ಲೆಫ್ಟಿನೆಂಟ್ ನಾಗರಾಜ್ ಉಪಸ್ಥಿತರಿದ್ದರು. ಕೆಡೆಟ್ ಹರ್ಷಿತಾ ಸ್ವಾಗತಿಸಿದರು, ಕೆಡೆಟ್ ಅಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ

    18/12/2025

    ಖೋ-ಖೋ ಟೂರ್ನಮೆಂಟ್: ಆಳ್ವಾಸ್ ಅವಳಿ ವಿಭಾಗಗಳಲ್ಲಿ ಸಮಗ್ರ ಚಾಂಪಿಯನ್ಸ್

    13/12/2025

    ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್: ಆಳ್ವಾಸ್ ಮಹಿಳಾ ತಂಡಕ್ಕೆ ಸಮಗ್ರ ಪ್ರಶಸ್ತಿ

    08/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.