ಕೊಲ್ಲೂರು: ವಿವೇಕಾನಂದ ಜನ್ಮದಿನಾಚರಣೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿನ ನವಶಕ್ತಿ ಮಹಿಳಾ ವೇದಿಕೆ ಕೊಲ್ಲೂರು ಇವರ ವತಿಯಿಂದ ವಿವೇಕಾನಂದ ಜಯಂತಿ ಕಾರ್ಯಕ್ರಮವನ್ನು ರತ್ನ ಪೂಜಾರಿ ಉದ್ಘಾಟಿಸಿದರು.

Call us

Click Here

ನವಶಕ್ತಿ ಮಹಿಳಾ ವೇದಿಕೆ ಅಧ್ಯಕ್ಷೆ ಗ್ರೀಷ್ಮಾಗಿರಿಧರ ಭಿಡೆ ಮಾತನಾಡಿ, ಸ್ವಾಮಿ ವಿವೇಕಾನಂದರು ಭಾರತದ ಅತ್ಯಂತ ಶ್ರೇಷ್ಠ ಆದ್ಯಾತ್ಮಿಕ ನಾಯಕರು ತಮ್ಮ ತತ್ವ ಶಾಸ್ತ್ರದ ವೈಭವವನ್ನು ಇಡೀ ಜಗತ್ತಿಗೆ ಸಾರಿದ ಕೀರ್ತಿ ಹೊಂದಿರುವ ಮಹಾನ್ ವ್ಯಕ್ತಿ. ಯುವ ಜನತೆಗೆ ಸ್ಫೂರ್ತಿಯ ಚಿಲುಮೆಯಂತಿದ್ದ ಇವರ ಚಿಂತನೆಗಳು ಸಂದೇಶಗಳು ಎಂದಿಗೂ ಪ್ರಸ್ತುತ. ಸ್ವಾಮಿ ವಿವೇಕಾನಂದರ ಜೀವನ ಸಂದೇಶಗಳು ಯುವಜನತೆಯ ಮೇಲೆ ಪ್ರಭಾವ ಬೀರುವ ಬಾಳು ಬೆಳಗುವ ಅಂಶಗಳು ಇದೆ ಕಾರಣಕ್ಕೆ ಇವರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ವಿವೇಕಾನಂದರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ದರು.

ಕಾರ್ಯಕ್ರಮವನ್ನು ಸದಸ್ಯರಾದ ಜ್ಯೋತಿ ರಾಘವೇಂದ್ರ ಸ್ವಾಗತಿಸಿ ನಿರೂಪಿಸಿದರು. ಉಷಾ ವಂದಿಸಿದರು. ನವಶಕ್ತಿ ಮಹಿಳಾ ವೇದಿಕೆಯ ಕಾರ್ಯದರ್ಶಿ ಸುಜಾತ ಆಚಾರಿ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

Leave a Reply