ಕುಂದಾಪುರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿವೇಕಾನಂದರ ಜಯಂತಿ ಕೇವಲ ಜಯಂತಿಗಷ್ಟೇ ಸೀಮಿತವಾಗದೆ ವಿದ್ಯಾರ್ಥಿಗಳು ವಿವೇಕಾನಂದರ ತತ್ವ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತಾಗಬೇಕು ಆ ಮೂಲಕ ರಾಷ್ಟ್ರೀಯ ಯುವದಿನಾಚರಣೆಗೆ ಅರ್ಥಬರುವಂತಾಗಬೇಕು ಎಂದು ಕೆನರಾ ಕಿಡ್ಸ್ನ ಸಂಚಾಲಕರಾದ ಸುಬ್ರಹ್ಮಣ್ಯ ಶೆಟ್ಟಿ ಹೇಳಿದರು.
ಅವರು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಯುವ ದಿನಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಯಾದ ಶಿವರಾಜ್ ಸಿ. ನಾವುಂದ ವಂದಿಸಿದರು. ವಾಣಿಜ್ಯ ಉಪನ್ಯಾಸಕರಾದ ಯೋಗೀಶ್ ಶ್ಯಾನುಭೋಗ್ ನಿರೂಪಿಸಿದರು.