Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಕ್ಕಳ ನಾಟಕಗಳ ಗುಚ್ಚ ‘ಅಮೃತ ಸಂಜೀವಿನಿ’ ಪುಸ್ತಕ ಬಿಡುಗಡೆ
    ಊರ್ಮನೆ ಸಮಾಚಾರ

    ಮಕ್ಕಳ ನಾಟಕಗಳ ಗುಚ್ಚ ‘ಅಮೃತ ಸಂಜೀವಿನಿ’ ಪುಸ್ತಕ ಬಿಡುಗಡೆ

    Updated:18/01/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ನಾಟಕಕಾರ, ಸಾಹಿತಿ, ಶಿಕ್ಷಕ ಕೇಶವ ಶ್ಯಾನುಭಾಗ್ ಅವರು ಬರೆದ ಮಕ್ಕಳ ನಾಟಕಗಳ ಗುಚ್ಚ ‘ಅಮೃತ ಸಂಜೀವಿನಿ’ ಪುಸ್ತಕದ ಬಿಡುಗಡೆ ಕಾರ್ಯಕ್ರಮ ಮಾರಣಕಟ್ಟೆಯ ವಾಸುಕಿ ಸಭಾಭವನದಲ್ಲಿ ಜರುಗಿತು.

    Click Here

    Call us

    Click Here

    ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಗೌರವ ಕಾರ್ಯದರ್ಶಿ ಡಾ. ಸುಬ್ರಹ್ಮಣ್ಯ ಭಟ್ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿ, ಮಕ್ಕಳ ಭಾವನೆಗಳನ್ನು ಅರಳಿಸಿ, ಅವರನ್ನು ಸೃಜನಶೀಲರನ್ನಾಗಿಸಲು ನಾಟಕಗಳು ಸಹಕಾರಿಯಾಗಿವೆ. ಒತ್ತಡದೊಂದಿಗೆ ಕೇವಲ ವಿಷಯಗಳ ಅಧ್ಯಯನಕ್ಕಷ್ಟೇ  ಸೀಮಿತಗೊಳ್ಳುತ್ತಿರುವ ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳನ್ನು ಪಠ್ಯೇತರ ಚಟುವಟಿಕೆಗಳಲ್ಲೂ ಹೆಚ್ಚೆಚ್ಚು ತೊಡಗಿಸಿಕೊಳ್ಳುವಂತೆ ಮಾಡಬೇಕಿದೆ. ವಿವಿಧ ಕಥಾವಸ್ತುಗಳನ್ನು ಒಳಗೊಂಡಿರುವ ಕಿರುನಾಟಕಗಳನ್ನು ಸೇರಿಸಿ, ಪುಸ್ತಕ ರೂಪದಲ್ಲಿ ಪ್ರಕಟಿಸುತ್ತಿರುವ ಕೃತಿಕಾರರ ಶ್ರಮ ನಿಜವಾಗಲೂ ಶ್ಲಾಘನೀಯ. ಮಕ್ಕಳ ಸಾಹಿತ್ಯವನ್ನು ಮಕ್ಕಳ ಮನಸ್ಸಿನ ಭಾವನೆ ಹಾಗೂ ಪರಿಧಿಯ ಅರಿವಿನಲ್ಲಿ ಬರೆದಾಗ, ಅದು ಅವರಲ್ಲಿ ಹೊಸಚಿಂತನೆ ಬೆಳೆಯಲು ಪ್ರೇರಪಣೆ ನೀಡುತ್ತದೆ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ತಾಲೂಕು ಕಸಾಪ ಘಟಕದ ಅಧ್ಯಕ್ಷ ಡಾ. ಕಿಶೋರ ಕುಮಾರ ಶೆಟ್ಟಿ ವಹಿಸಿದ್ದರು. ಖ್ಯಾತರಂಗ ಕರ್ಮಿ ಗಣೇಶ ಕಾರಂತರು ಪುಸ್ತಕ ಪರಿಚಯವನ್ನು ಮಾಡಿದರು.

    ಮುಖ್ಯ ಅತಿಥಿಗಳಾಗಿ ಹವ್ಯಾಸಿ ಬರಹಗಾರ ನಿ.ರಾಮ ಭಟ್, ನಾಟಕಕಾರ ರಾಮ ಎಲ್ಲಂಗಳ ವಾಮಂಜೂರು, ಬೈಂದೂರು ಕಸಾಪ ಘಟಕದ ಅಧ್ಯಕ್ಷ ರವೀಂದ್ರ ಎಚ್, ಬಾರಂದಾಡಿ ಶಾಲಾ ಮುಖ್ಯ ಶಿಕ್ಷಕಿ ಮಿತಾ ಬಿ, ಪುಷ್ಪ ಎಲ್ಲಂಗಳ, ಸಭಾಭವನದ ಮಾಲಕ ನಾರಾಯಣ ಭಟ್ ಮೊದಲಾದವರು ಉಪಸ್ಥಿತರಿದ್ದರು.

    ಇದೇ ಸಮಯದಲ್ಲಿ ಕೃತಿಕಾರ ಕೇಶವ ಶ್ಯಾನುಭಾಗ್ ಎಲ್ಲಂಗಳ ಅವರನ್ನು ಕಸಾಪ ವತಿಯಿಂದ ಸನ್ಮಾನಿಸಲಾಯಿತು. ರವಿರಾಜ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕ ರಾಜೀವ ಸ್ವಾಗತಿಸಿ, ಜಯರಾಮ ಪಟಗಾರ ವಂದಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    4 × 5 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.