ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕು ವ್ಯಾಪ್ತಿಯ 15 ಗ್ರಾಮ ಪಂಚಾಯತ್ಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪ್ರಕ್ರಿಯೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರ ಅಧ್ಯಕ್ಷತೆಯಲ್ಲಿ ಇಂದು ಬೈಂದೂರು ಯಡ್ತರೆಯ ಜೆಎನ್ಆರ್ ಕಲಾಮಂದಿರದಲ್ಲಿ ನಡೆಯಿತು.
ತಾಲೂಕು ವ್ಯಾಪ್ತಿಯ ಎಲ್ಲಾ ಪಂಚಾಯತ್ ಗಳ ನೂತನ ಸದಸ್ಯರು ಆಯ್ಕೆ ಪ್ರಕ್ರಿಯೆ ಸಂದರ್ಭ ಭಾಗವಹಿಸಿದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಬೈಂದೂರು ತಹಶೀಲ್ದಾರ್ ಕಿರಣ್ ಗೋರಯ್ಯ ಹಾಗೂ ಜಿಲ್ಲಾ ತಂತ್ರಜ್ಞಾನ ಇಲಾಖೆಯ ತಾಂತ್ರಿಕ ನಿರ್ದೇಶಕ ಮಂಜುನಾಥ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೈಂದೂರು ತಾಲೂಕಿನ 15 ಪಂಚಾಯತಿಗಳಿಗೆ ಆಯ್ಕೆಯಾದವರ ವಿವರ ಈ ಕೆಳಗಿನಂತಿದೆ