Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಒಳಚರಂಡಿ ಅಭಿವೃದ್ಧಿ ಸಭೆಗೆ ವಿರೋಧ ಪಕ್ಷದ ಕಡಗಣನೆ: ಪುರಸಭೆ ಸಾಮಾನ್ಯ ಸಭೆಯಲ್ಲಿ ಆಕ್ರೋಶ
    ಊರ್ಮನೆ ಸಮಾಚಾರ

    ಒಳಚರಂಡಿ ಅಭಿವೃದ್ಧಿ ಸಭೆಗೆ ವಿರೋಧ ಪಕ್ಷದ ಕಡಗಣನೆ: ಪುರಸಭೆ ಸಾಮಾನ್ಯ ಸಭೆಯಲ್ಲಿ ಆಕ್ರೋಶ

    Updated:30/01/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಪುರಸಭೆ ವಿರೋಧ ಪಕ್ಷದ ಸದಸ್ಯರನ್ನು ಆಹ್ವಾನಿಸದೆ ಒಳಚರಂಡಿ ಮಂಡಳಿ ನಿರ್ದೇಶಕರ ಜತೆ ಸಭೆ ನಡೆದಿದ್ದು, ಈ ಕುರಿತು ತಪ್ಪೊಪ್ಪಿಕೊಳ್ಳಬೇಕು ಎಂದು ವಿರೋಧ ಪಕ್ಷದವರ ಆಗ್ರಹಿಸಿದರು. ತಪ್ಪೊಪ್ಪಿಕೊಳ್ಳುವ ಪ್ರಸಂಗವೇ ನಡೆದಿಲ್ಲ ಎಂದು ಆಡಳಿತ ಪಕ್ಷದವರು ಸಮರ್ಥನೆ ಮಾಡಿದ ಘಟನೆ ಇಲ್ಲಿನ ಪುರಸಭೆಯ ಸಾಮಾನ್ಯ ಸಭೆಯಲ್ಲಿ ನಡೆಯಿತು.

    Click Here

    Call us

    Click Here

    ಈಚೆಗೆ ಒಳಚರಂಡಿ ಅಭಿವೃದ್ಧಿ ಮಂಡಳಿ ನಿರ್ದೇಶಕ‌ರು ಕುಂದಾಪುರಕ್ಕೆ ಬಂದಿದ್ದ ವೇಳೆ ಅಧ್ಯಕ್ಷರು ಮತ್ತು ಆಡಳಿತ ಪಕ್ಷದ ಸದಸ್ಯರು ಅವರೊಂದಿಗೆ ನಡೆಸಿದ ಸಭೆಯಲ್ಲಿ ಬಿಜೆಪಿ ಮುಖಂಡರೂ ಪಾಲ್ಗೊಂಡಿದ್ದರು. ಆದರೆ ವಿರೋಧ ಪಕ್ಷದ ಸದಸ್ಯರಿಗೂ ಮಾಹಿತಿ ನೀಡದೆ ಕಡೆಗಣಿಸಲಾಗಿದೆ. ಈ ಬಗ್ಗೆ ತಪ್ಪೊಪ್ಪಿಕೊಳ್ಳಬೇಕು, ಇಲ್ಲದಿದ್ದರೆ ಸಭೆಯನ್ನು ಬಹಿಷ್ಕರಿಸುವುದಾಗಿ ವಿರೋಧ ಪಕ್ಷದ ನಾಯಕ ಚಂದ್ರಶೇಖರ ಖಾರ್ವಿ ಹೇಳಿದರು. ಶ್ರೀಧರ ಶೇರೆಗಾರ್, ದೇವಕಿ ಸಣ್ಣಯ್ಯ, ಕೆ. ಜಿ. ನಿತ್ಯಾನಂದ ಬೆಂಬಲಿಸಿದರು. ಹಿರಿಯ ಸದಸ್ಯ ಮೋಹನದಾಸ್ ಶೆಣೈ ಈ ಕುರಿತು ಮಾಹಿತಿ ನೀಡಲು ಮುಂದಾದಾಗ, ಆಕ್ಷೇಪಿಸಿದ ಚಂದ್ರಶೇಖರ ಖಾರ್ವಿ, ಅಧ್ಯಕ್ಷರೇ ಉತ್ತರಿಸುವಂತೆ ಒತ್ತಾಯಿಸಿದರು.

    ಆಡಳಿತ ಪಕ್ಷದ ಸಂತೋಷ ಶೆಟ್ಟಿ, ಪ್ರಭಾಕರ, ಜಿ. ಕೆ. ಗಿರೀಶ್ ದೇವಾಡಿಗ, ಶೇಖರ್ , ಯಾವುದೇ ಅಧಿಕೃತ ಸಭೆ ನಡೆಸಿಲ್ಲ , ಅಧ್ಯಕ್ಷರು ಸಭೆ ಕರೆಯದೇ ಇರೋದರಿಂದ ತಪ್ಪೊಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು.

    ಮೋಹನದಾಸ್ ಶೆಣೈ ಮಾತನಾಡಿ, ‘ಸಭೆ ಅನಧಿಕೃತ ಎಂದು ಉಪ ವಿಭಾಗಾಧಿಕಾರಿ ಹೇಳಿದ್ದಾರೆ. ಒಳಚರಂಡಿ ಮಂಡಳಿ ನಿರ್ದೇಶಕರು ಭೇಟಿ ನೀಡಿದ ಸಂದರ್ಭದಲ್ಲಿ ಅನೌಪಚಾರಿಕವಾಗಿ ಯುಜಿಡಿ ಬಗ್ಗೆ ಕೇಳಿದ್ದರಿಂದ ಮಾಹಿತಿ ನೀಡಲಾಗಿದೆ. ಇನ್ನೂ 15 ದಿನದಲ್ಲಿ ಮಂಡಳಿ ನಿರ್ದೇಶಕರ ಜೊತೆ ಸಭೆ ನಡೆಸಿ, ಯುಜಿಡಿ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಗುತ್ತದೆ. ಇನ್ನೂ ಮುಂದೆ ಹೀಗಾಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ಸಮಜಾಯಿಷಿ ನೀಡಿದರು. ವಿರೋಧ ಪಕ್ಷದ ಸದಸ್ಯರು ಅಧ್ಯಕ್ಷರೇ ಮಾತನಾಡುವಂತೆ ಒತ್ತಾಯಿಸಿದರು.

    ಇದಕ್ಕೆ ಪ್ರತಿ ಸ್ಪಂದಿಸಿದ ಅಧ್ಯಕ್ಷೆ ವೀಣಾ ಭಾಸ್ಕರ್ ಮೆಂಡನ್, ಸಭೆ ನಡೆಸಿಲ್ಲ. ಪಕ್ಷದ ಕಾರ್ಯಕರ್ತರು ಅವರನ್ನು ಅಭಿನಂದಿಸಲು ಬಂದಿದ್ದರು ಅಷ್ಟೇ’ ಎಂದು ಪರಿಸ್ಥಿತಿ ತಿಳಿಗೊಳಿಸಿದರು. ಮಂಡಳಿ ನಿರ್ದೇಶಕರ ಸಭೆಯಲ್ಲಿ ಪಾಲ್ಗೊಂಡಿರುವ ಮುಖ್ಯಾಧಿಕಾರಿ ಅವರ ವಿರುದ್ಧ ಹಕ್ಕುಚ್ಯುತಿ ಹಾಗೂ ಶಿಸ್ತುಕ್ರಮಕ್ಕೆ ದೂರು ನೀಡುತ್ತೇವೆ ಎಂದು ಚಂದ್ರಶೇಖರ ಖಾರ್ವಿ ಹೇಳಿದರು.

    Click here

    Click here

    Click here

    Click Here

    Call us

    Call us

    ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ನಾನು ಯಾವುದೇ ಕ್ರಮಕ್ಕೂ ಸಿದ್ದನಿದ್ದೇನೆ ಎಂದರು. ಸಭೆಯಲ್ಲಿ ಕುಡಿಯುವ ನೀರು, ವಿದ್ಯುತ್, ಬೀದಿ ದೀಪ ಕುರಿತು ಚರ್ಚೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ್ ಮೆಂಡನ್ ವಹಿಸಿದ್ದರು. ಯುಜಿಡಿ ಅಧಿಕಾರಿ ಚಂದ್ರಶೇಖರ ಹೇಳಿದರು. ಉಪಾಧ್ಯಕ್ಷ ಸಂದೀಪ ಖಾರ್ವಿ, ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಇದ್ದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    2 × three =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.