Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಖಂಬದಕೋಣೆ ರೈ.ಸೇ.ಸ ಸಂಘ: ‘ರೈತರೆಡೆಗೆ ಸಹಕಾರಿ ನಡಿಗೆ’ ಅಭಿಯಾನ
    ಊರ್ಮನೆ ಸಮಾಚಾರ

    ಖಂಬದಕೋಣೆ ರೈ.ಸೇ.ಸ ಸಂಘ: ‘ರೈತರೆಡೆಗೆ ಸಹಕಾರಿ ನಡಿಗೆ’ ಅಭಿಯಾನ

    Updated:30/01/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ರೈತರು ದುಡಿಮೆಯ ಮೂಲಕ ಆದಾಯ ಹೆಚ್ಚಿಸಿಕೊಂಡು, ಭವಿಷ್ಯಕ್ಕಾಗಿ ಉಳಿತಾಯ ಮಾಡಲು ಸಾಧ್ಯವಾಗುವಂತೆ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ಸೂಕ್ತ ಅವಕಾಶ ಕಲ್ಪಿಸಬೇಕು ಎಂಬ ಉದ್ದೇಶದಿಂದ ‘ರೈತರೆಡೆಗೆ ಸಹಕಾರಿ ನಡಿಗೆ’ ಎಂಬ ವಿನೂತನ ಅಭಿಯಾನ ಕೈಗೊಂಡಿದೆ ಎಂದು ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು.

    Click Here

    Call us

    Click Here

    ಸಹಕಾರಿ ಸಂಘ, ರೈತಸಿರಿ ಹಾಗೂ ರೈತ ಸೇವಾ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಈಚೆಗೆ ಕೆರ್ಗಾಲು ಗ್ರಾಮದ ಚೆರುಮಕ್ಕಿಯಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

    ಸಂಘದಿಂದ ರೈತರಿಗೆ ಒದಗಿಸುತ್ತಿರುವ ಸೌಲಭ್ಯಗಳ ಮಾಹಿತಿಯನ್ನು ಮತ್ತು ಲಾಭದಾಯಕ ಕ್ರಮಗಳ ಅರಿವನ್ನು ವ್ಯಾಪ್ತಿಯ ಎಲ್ಲ ರೈತರಿಗೆ ತಲುಪಿಸುವುದು ‘ರೈತರೆಡೆಗೆ ಸಹಕಾರಿ ನಡಿಗೆ’ ಕಾರ್ಯಕ್ರಮದ ಉದ್ದೇಶ. ಕೃಷಿ ಇಂದು ವಿಜ್ಞಾನವಾಗಿ ಪರಿವರ್ತಿತವಾಗಿದೆ. ರೈತರು ಪರಿಣಿತರಿಂದ ವೈಜ್ಞಾನಿಕ ಮಾಹಿತಿ ಪಡೆದು, ಆಧುನಿಕ ವಿಧಾನ ಮತ್ತು ಯಂತ್ರೋಪಕರಣ ಬಳಸಿ ಕೃಷಿಯಿಂದ ಲಾಭ ಗಳಿಸಬೇಕು. ಪ್ರತಿ ಗ್ರಾಮದಲ್ಲಿ ರೈತ ಸಂಘಟನೆ ಇರಬೇಕು. ರೈತರು ತಮ್ಮ ಬೆಳೆಗೆ ಸೂಕ್ತ ಮಾರುಕಟ್ಟೆ ಮತ್ತು ಸಮರ್ಪಕ ಬೆಲೆ ಪಡೆಯಲು ಇರುವ ಅಡ್ಡಿಯನ್ನು ಪರಿಹರಿಸಿಕೊಳ್ಳಬೇಕು. ಅವರು ಬೆಳೆದ ಕೃಷಿ ಉತ್ಪನ್ನಗಳಿಗೆ ಅವರೇ ಮಾರುಕಟ್ಟೆ ಸೃಷ್ಟಿಸಿಕೊಂಡಾಗ ಅದು ಸಾಧ್ಯವಾಗಬಹುದು ಎಂದು ಅವರು ಅಭಿಪ್ರಾಯಪಟ್ಟರು.

    ಮೂರು ಎಕರೆ ಸ್ಥಳವನ್ನು ಲೀಸ್‌ಗೆ ಪಡೆದು ಸಾವಯವ ಗೊಬ್ಬರ ಬಳಸಿ ಸುಮಾರು 20ಕ್ಕೂ ಹೆಚ್ಚು ಬಗೆಯ ತರಕಾರಿ ಬೆಳೆಸಿ ಉತ್ತಮ ಫಸಲು ಪಡೆದು ಲಾಭ ಗಳಿಸುವ ಮೂಲಕ ಪರಿಸರದ ರೈತರಿಗೆ ಮಾದರಿಯಾದ ಹಿರಿಯ ಕೃಷಿಕ ಲಕ್ಷ್ಮಣ ದೇವಾಡಿಗ ಅವರನ್ನು ಗೌರವಿಸಲಾಯಿತು. ಸಂಘದ ಮುಖ್ಯಕಾರ್ಯನಿರ್ವಣಾಧಿಕಾರಿ ವಿಷ್ಣು ಆರ್. ಪೈ, ಕಿಸಾನ್ ಸಂಘದ ಅಧ್ಯಕ್ಷ ಎಚ್. ಜಗದೀಶ್ ರಾವ್, ಪ್ರಗತಿಪರ ರೈತ ದಿನೇಶ ಗಾಣಿಗ ಇದ್ದರು. ಸಂಘದ ಕೃಷಿ ಅಭಿವೃದ್ಧಿ ಅಧಿಕಾರಿ ಈಶ್ವರ ನಾಯ್ಕ್ ಸ್ವಾಗತಿಸಿ, ವ್ಯವಸ್ಥಾಪಕ ಚಂದಯ್ಯ ಶೆಟ್ಟಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    sixteen − 6 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.