Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಲ್ಲಿಗೆ ಕೃಷಿಯ ಮೂಲಕ ಬ್ರ್ಯಾಂಡ್ ಹುಟ್ಟುಹಾಕಬೇಕಿದೆ: ಎಸ್. ಪ್ರಕಾಶ್ಚಂದ್ರ ಶೆಟ್ಟಿ
    ಊರ್ಮನೆ ಸಮಾಚಾರ

    ಮಲ್ಲಿಗೆ ಕೃಷಿಯ ಮೂಲಕ ಬ್ರ್ಯಾಂಡ್ ಹುಟ್ಟುಹಾಕಬೇಕಿದೆ: ಎಸ್. ಪ್ರಕಾಶ್ಚಂದ್ರ ಶೆಟ್ಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಸ್ವಸಹಾಯ ಸಂಘಗಳು ಕೇವಲ ಲೇವಾದೇವಿ ಸಂಸ್ಥೆಗಳಾಗದೆ, ಕಾಯಕದ ಮೂಲಕ ಉತ್ಪಾದನಾ ಚಟುವಟಿಕೆ ನಡೆಸಿ ಸದಸ್ಯರ ಸ್ವಾವಲಂಬನೆ ಸಾಧಿಸುವ ಸಾಧನಗಳಾಗಬೇಕು ಎನ್ನುವುದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಆಶಯ. ಸಂಘದ ರೈತಸಿರಿ ಮತ್ತು ನವೋದಯ ಸ್ವಸಹಾಯ ಸಂಘಗಳಿಗೆ ಅಗತ್ಯ ಪರಿಣತಿ ಮತ್ತು ನೆರವು ನೀಡುವ ಮೂಲಕ ಅದು ಈ ಆಶಯವನ್ನು ಸಾಕಾರಗೊಳಿಸಲು ಯತ್ನಿಸುತ್ತಿದೆ ಎಂದು ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದರ ಶೆಟ್ಟಿ ಹೇಳಿದರು.

    Click Here

    Call us

    Click Here

    ಸಂಘ ಹಾಗೂ ರೈತಸಿರಿ, ರೈತಸೇವಾ ಒಕ್ಕೂಟದ ಪ್ರಾಯೋಜಕತ್ವದಲ್ಲಿ ಸಂಘದ ರೈತಸಿರಿ, ನವೋದಯ ಸ್ವಸಹಾಯ ಸಂಘಗಳ ಸದಸ್ಯರು ಮತ್ತು ಆಸಕ್ತ ರೈತರಿಗಾಗಿ ನಾಗೂರಿನ ಶ್ರೀ ಕೃಷ್ಣಲಲಿತಾ ಕಲಾಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ಮಲ್ಲಿಗೆ ಕೃಷಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ, ಮಾತನಾಡಿದರು.

    ಸಹಕಾರಿ ಸಂಘ ರೈತರ ಅಗತ್ಯಗಳಿಗೆ ತಕ್ಕಂತೆ ಯೋಜನೆ ರೂಪಿಸಿ, ಅನುಷ್ಠಾನಿಸುವ ಸ್ವಾತಂತ್ರ್ಯ ಹೊಂದಿದೆ. ಸಂಘದ ವ್ಯಾಪ್ತಿಯ ರೈತರು ಬೆಳೆಯುವ ಕಲ್ಲಂಗಡಿ ಹಣ್ಣಿನ ಮೂಲಕ ವಾರ್ಷಿಕ ರೂ ೪ ಕೋಟಿ ವ್ಯವಹಾರ ನಡೆಯುತ್ತಿದೆ. ಹಾಗೆಯೇ ಸ್ವಸಹಾಯ ಸಂಘದ ಸದಸ್ಯರು ಮಲ್ಲಿಗೆ ಬೆಳೆದು ಖಂಬದಕೋಣೆ ಅಥವಾ ಬೈಂದೂರು ಮಲ್ಲಿಗೆಯ ಬ್ರ್ಯಾಂಡ್ ಹುಟ್ಟುಹಾಕಬೇಕು. ಕನಿಷ್ಠ ೨೫೦ ಗಿಡಗಳನ್ನು ಬೆಳೆಯುವ ಸ್ವಸಹಾಯ ಸಂಘಕ್ಕೆ ಸಹಕಾರಿ ಸಂಘದಿಂದ ರೂ 1 ಲಕ್ಷ ಬಡ್ಡಿರಹಿತ ಸಾಲ ನೀಡಲಾಗುವುದು ಮತ್ತು ಹೂವಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಲಾಗುವುದು ಎಂದು ಅವರು ಹೇಳಿದರು.

    ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಷ್ಣು ಆರ್. ಪೈ ಸ್ವಾಗತಿಸಿದರು. ಹಿರಿಯ ವ್ಯವಸ್ಥಾಪಕ ಚಂದ್ರಯ್ಯ ಶೆಟ್ಟಿ ವಂದಿಸಿದರು. ಚಂದ್ರ ಮೊಗವೀರ ನಿರೂಪಿಸಿದರು. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್. ರಾಜು ಪೂಜಾರಿ, ಸಂಘದ ಉಪಾಧ್ಯಕ್ಷ ಈಶ್ವರ ಹಕ್ಲತೋಡು, ನಿರ್ದೇಶಕರಾದ ಮಂಜು ದೇವಾಡಿಗ, ಜಲಜಾಕ್ಷಿ, ಹೂವ ನಾಯ್ಕ್ ಇದ್ದರು.

    Click here

    Click here

    Click here

    Click Here

    Call us

    Call us

    ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ, ಮಲ್ಲಿಗೆ ಬೆಳೆಗಾರ ರಾಮಕೃಷ್ಣ ಶರ್ಮ ಬಂಟಕಲ್, ಮಲ್ಲಿಗೆ ಕೃಷಿ ಕುರಿತು ಮತ್ತು ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕಾ ತಜ್ಞ ಎಚ್. ಎಸ್. ಚೈತನ್ಯ ರೋಗ ಮತ್ತು ಕೀಟ ನಿಯಂತ್ರಣ ಬಗೆಗೆ ಮಾಹಿತಿ ನೀಡಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    17 + eighteen =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.