Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪರಿಷತ್ ಸಭಾಪತಿ ಸ್ಥಾನಕ್ಕೆ ಕೆ. ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ
    ಊರ್ಮನೆ ಸಮಾಚಾರ

    ಪರಿಷತ್ ಸಭಾಪತಿ ಸ್ಥಾನಕ್ಕೆ ಕೆ. ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೆಂಗಳೂರು: ರಾಜ್ಯ ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    Click Here

    Call us

    Click Here

    ಬಳಿಕ ವಿದಾಯ ಭಾಷಣ ಮಾಡಿದ ಸಭಾಪತಿ ಅವರು ಸಂಖ್ಯಾಬಲದ ಮೇಲೆ ಸಭಾಪತಿ ಆಯ್ಕೆ ನಡೆಯುತ್ತದೆ. ಮುಂದಿನ ಬಜೆಟ್ ಅಧಿವೇಶನದ ವರೆಗೂ ಈ ಸ್ಥಾನದಲ್ಲಿ ಇರುವ ಅವಕಾಶ ನನಗಿತ್ತು. ಆದರೆ ಎಲ್ಲರ ಬಯಕೆ ಬೇರೆಯದೇ ಆಗಿರುವ ಹಿನ್ನೆಲೆ ಈ ಸ್ಥಾನದಲ್ಲಿ ಇನ್ನೂ ಹೆಚ್ಚು ಸಮಯ ಮುಂದುವರಿಯದಿರಲು ತೀರ್ಮಾನಿಸಿದ್ದೇನೆ. ನೈತಿಕ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಿರುವುದರಿಂದ ಪೀಠಕ್ಕೆ ರಾಜಿನಾಮೆ ನೀಡುತ್ತಿದ್ದೇನೆ. ಈಗ ನನ್ನ ಮನಸ್ಸು ನಿರಾಳವಾಗಿದೆ, ಜವಾಬ್ದಾರಿ ಮುಗಿದಿದೆ, ಸದನದ ನಿಯಮದಂತೆ ಉಪ ಸಭಾಪತಿಗಳಿಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಪೀಠತ್ಯಾಗ ಮಾಡುತ್ತಿದ್ದೇನೆ ಎಂದಿದ್ದಾರೆ.

    ಸದನದ ಘನತೆ, ಚ್ಯುತಿ ಬಾರದಂತೆ ನಡೆದುಕೊಳ್ಳುವ ಅನಿವಾರ್ಯತೆ ವಿಧಾನ ಪರಿಷತ್ ಎಲ್ಲಾ ಸದಸ್ಯರಿಗೆ ಇದೆ. ಕೆಲವೊಮ್ಮೆ ಸದನದ ಸದಸ್ಯರ ಬದಲಾದಂತೆ ನಿಲುವುಗಳು ಬದಲಾಗುತ್ತವೆ. ಅಂತಹ ನಿಲುವುಗಳಿಗೆ ಹಿಡಿತದಲ್ಲಿದ್ದರೂ ಗೌರವ ಸಲ್ಲಿಸಬೇಕಾಗುತ್ತದೆ. ಇದಕ್ಕೆ ನಾನು ಕೂಡ ಹೊರತಾಗಿಲ್ಲ. ನನ್ನ ಮೇಲಿನ ನಂಬಿಕೆ ಕಡಿಮೆಯಾಗಿದೆ ಎಂಬ ವಿಚಾರ ಅರಿತು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ.

    ಈ ಸಭಾಪತಿ ಪೀಠವು ಜವಾಬ್ದಾರಿಯುತ ಸ್ಥಾನವಾಗಿದೆ. ಜವಾಬ್ದಾರಿಯುತ ಸ್ಥಾನದ ಗೌರವ ಎತ್ತಿ ಹಿಡಿಯಬೇಕಿದೆ. 37 ವರ್ಷ ಜನಪ್ರತಿನಿಧಿಯಾಗಿ ನಡೆ, ನುಡಿಯಲ್ಲಿ ಬದಲಾಗದೇ ಸಾಗಿ ಬಂದಿದ್ದೇನೆ. ಜನ ಸಾಮಾನ್ಯರಲ್ಲಿ ನಂಬಿಕೆ ಬದಲಾಗುವ ವಾತಾವರಣ ಗಮನಿಸಿದ್ದೇನೆ. ನಾವೆಲ್ಲಾ ಒಳ್ಳೆಯವರು, ಜವಾಬ್ದಾರಿ ನಿಭಾಯಿಸುವಾಗ, ಪಕ್ಷ ಬದಲಾವಣೆ ಇತ್ಯಾದಿ. ಇಷ್ಟವಿಲ್ಲದಿದ್ದರೂ 2018ರ ಡಿಸೆಂಬರ್ 12ರಂದು ಬೆಳಗಾವಿಯಲ್ಲಿ ನನ್ನನ್ನು ಸಭಾಪತಿಯಾಗಿ ಆಯ್ಕೆ ಮಾಡಿದ್ದೀರಿ. ನಿಮ್ಮ ಭಾವನೆಗೆ ಧಕ್ಕೆ ಆಗದಂತೆ ನಡೆದುಕೊಂಡಿದ್ದೇನೆ. ಸ್ಥಾನಕ್ಕೆ ಚ್ಯುತಿ ಬಾರದಂತೆ ನಡೆದುಕೊಂಡಿದ್ದೇನೆ. ಇಂತಹ ಸ್ಥಾನ ಕತ್ತಿಯ ಮೇಲಿನ ಅಲುಗಿನ ಮೇಲಿನ ನಡಿಗೆಯಾಗಿದೆ ಎಂಬ ಅರಿವಿದೆ. ಪಕ್ಷಗಳ ಸ್ಥಾನ ಬದಲಾದಾಗ ಸಭಾಪತಿ ಪೀಠದ ನಿಭಾಯಿಸುವ ವ್ಯಕ್ತಿಗಳು ಬದಲಾಗುತ್ತಾರೆ. ಸಹವರ್ತಿಗಳು ಹಲವರು ನನ್ನ ಆತ್ಮೀಯರು. ಇಂದಿನ ಬದಲಾದ ವ್ಯವಸ್ಥೆಗೆ ಬಲಿಯಾಗಿ ಹಲವರು ಇಂದು ನನ್ನ ವಿಚಾರದಲ್ಲಿ ಪೂರ್ಣ ಮನಸ್ಸಿನಿಂದ ಕೈಗೊಂಡಿದ್ದು ಅಲ್ಲ ಎನ್ನುವುದು ನನಗೆ ಗೊತ್ತಿದೆ. ಇಲ್ಲಿ ಸ್ಥಾನಗಳ ಬಲಾಬಲದ ಮೇಲೆ ಸಭಾಪತಿಗಳು ಬದಲಾದರೆ ನೈಜ ಗೌರವ ಉಳಿಯುವುದಿಲ್ಲ. ಅಂಕೆ ಸಂಖ್ಯೆಗಳ ಆಧಾರದಲ್ಲಿ ನನ್ನ ಅವಧಿಯಲ್ಲಿ ಒಂದು ಅಹಿತಕರ ಘಟನೆ ಕೂಡ ನಡೆದಿದೆ. ನೈತಿಕತೆಯ ಅರಿವು ನನಗಿದೆ. ರಾಜ್ಯಪಾಲರಿಗೆ ನನ್ನ ಅವಧಿಯ ಎಲ್ಲಾ ಮಾಹಿತಿ ನೀಡಿದ್ದೇನೆ. ಇಲ್ಲಿನ ಅಹಿತಕರ ಘಟನೆ ಸವಿಸ್ತಾರ, ನ್ಯಾಯಯುತ ತನಿಖೆ ನಡೆಸುವ ಕಾರ್ಯ ಮಾಡಿದ್ದೇನೆ. ಸಮಿತಿ ರಚನೆ ಮಾಡಿದ್ದು ಅದು ಮದ್ಯಂತರ ವರದಿ ಕೂಡ ಸಲ್ಲಿಸಿದ್ದು ಪರಿಷತ್ತಿನಲ್ಲಿ ಅದನ್ನು ಮಂಡಿಸಲಾಗಿದೆ. ಸಮಿತಿ ಮನವಿ ಮೇರೆಗೆ ಮೂರು ತಿಂಗಳ ಕಾಲಾವಧಿಯನ್ನು ವಿಸ್ತರಿಸಲಾಗಿದೆ. ನನ್ನ ಕಾಲಾವಧಿಯಲ್ಲಿ ಯಾವುದೇ ರೀತಿ ಪೀಠಕ್ಕೆ ಬಾರದ ರೀತಿ ನಡೆದುಕೊಂಡಿದ್ದೇನೆ. ಪಕ್ಷ ಬೇಧ ತೋರದೆ ನ್ಯಾಯಯುತವಾಗಿ ನಡೆದುಕೊಂಡಿದ್ದೇನೆ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದರು.

    ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ತಮ್ಮ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯ ಸೂಚನೆ ಹಿನ್ನಲೆಯಲ್ಲಿ ವಿಧಾನಪರಿಷತ್ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ಇಂದು ರಾಜಿನಾಮೆ ಸಲ್ಲಿಸಿದ್ದಾರೆ. ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರತಾಪ್ ಚಂದ್ರ ಶೆಟ್ಟಿಯವರಿಗೆ ರಾಜಿನಾಮೆ ಸಲ್ಲಿಸಲು ಸಹಮತ ದೊರೆತಿತ್ತು. ಪ್ರತಾಪ್ ಚಂದ್ರ ಶೆಟ್ಟಿ ಅವರು ಕಳೆದ ಅಧಿವೇಶನದಲ್ಲೇ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಕಾಂಗ್ರೆಸ್ ನಾಯಕರು ರಾಜೀನಾಮೆ ನೀಡದಂತೆ ತಡೆದಿದ್ದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.