Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್‌ನಲ್ಲಿ ನಾಯಕತ್ವ ತರಬೇತಿ ಕಾರ್ಯಾಗಾರ
    alvas nudisiri

    ಆಳ್ವಾಸ್‌ನಲ್ಲಿ ನಾಯಕತ್ವ ತರಬೇತಿ ಕಾರ್ಯಾಗಾರ

    Updated:08/02/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಪದವಿ ಹಾಗೂ ಸ್ನಾತಕೋತ್ತರ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಪಿಜಿ ಸಭಾಂಗಣದಲ್ಲಿ ಸ್ವಾಮಿ ವಿವೇಕಾನಂದರ 158ನೇ ಜನ್ಮದಿನದ ಅಂಗವಾಗಿ ನಡೆದ ನಾಯಕತ್ವ ತರಬೇತಿ ಕಾರ್ಯಾಗಾರ ನಡೆಯಿತು.

    Click Here

    Call us

    Click Here

    ಮುಖ್ಯ ಅತಿಥಿಯಾಗಿ ಖೋ ಖೋ ಆಟಗಾರ ಮಂಜುನಾಥ್ ಮಾತನಾಡಿ, ಸದಾ ಸಕಾರಾತ್ಮಕ ಚಿಂತನೆಯಿಂದ ಯುವಕರನ್ನು ಪ್ರೋತ್ಸಾಹಿಸಬೇಕು. ಹಾಗೆಯೇ, ಮಾನಸಿಕ ಹಾಗೂ ದೈಹಿಕ ಶಿಕ್ಷಣಕ್ಕೆ ಮಹತ್ವ ಕೊಡಬೇಕು. ಶಿಕ್ಷಣದ ಮೂಲಕ ಮಾನವೀಯತೆ ವಿಕಸನವಾಗುವುದಲ್ಲದೆ, ಧರ್ಮ ಮತ್ತು ವಿಜ್ಞಾನವನ್ನು ಶಿಕ್ಷಣದಲ್ಲಿ ಅಳವಡಿಸಿದಾಗ ಲೌಕಿಕ ಸಂಪತ್ತು ವೃದ್ಧಿಗೊಳ್ಳುತ್ತದೆ. ವಿದ್ಯೆಯನ್ನು ಕಲಿತವರು ಬಡವರನ್ನು ನಿರ್ಲಕ್ಷ್ಯ ಮಾಡಿದರೆ ಅವರು ದೇಶ ದ್ರೋಹಿಗಳಿಗೆ ಸಮಾನ. ವ್ಯವಸಾಯವನ್ನು ಉದ್ಯೋಗವನ್ನಾಗಿಸಿ, ಕೃಷಿ ಕಾರ್ಮಿಕರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು ಎಂದರು.

    ಕಾರ್ಯಾಗಾರದ ಮತ್ತೋರ್ವ ಅತಿಥಿಯಾಗಿ ಭಾಗವಹಿಸಿದ ಕ್ರಿಕೆಟ್‌ಪಟು ವಿಷ್ಣುಚೈತನ್ಯ ಮಾತನಾಡಿ, ಉತ್ತಮ ಭವಿಷ್ಯಕ್ಕಾಗಿ ಜಾಗೃತಿ ಮೂಡಿಸಿ, ಯುವಜನತೆಯಲ್ಲಿ ವ್ಯಕ್ತಿತ್ವ ವಿಕಸನ ಮತ್ತು ಚಾರಿತ್ರ್ಯ ನಿರ್ಮಾಣದ ಕಡೆಗೆ ಗಮನ ಹರಿಸುವಂತೆ ಮಾಡುವುದು ರಾಷ್ಟೀಯ ಯುವ ದಿನಾಚರಣೆಯ ಮುಖ್ಯ ಉದ್ದೇಶ. ಈ ಸಂದರ್ಭ, ಬಡವರಿಗೆ ಮತ್ತು ಅಲ್ಪಸಂಖ್ಯಾತರಿಗೆ ಆದಷ್ಟು ಸಹಾಯಮಾಡಬೇಕು ಎಂದು ಸ್ವಾಮಿ ವಿವೇಕಾನಂದರ ತತ್ವಗಳನ್ನು ತಿಳಿಸಿದರು.

    ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿದ್ದ ಬಾಸ್ಕೆಟ್‌ಬಾಲ್ ಆಟಗಾರ ಶಮಂತ್ ಮಾತನಾಡಿ, ಋಗ್ವೇದ ಕಾಲದಲ್ಲಿ ಮಹಿಳೆಯರಿಗೆ ಬಹಳಷ್ಟು ಗೌರವ ಸಿಗುತ್ತಿತ್ತು. ಆದರೆ ಮಹಿಳೆಯರು ಸಾಮಾಜಿಕ ಮತ್ತು ರಾಜಕೀಯವಾಗಿ ಬೆಳವಣಿಗೆಯಾದಷ್ಟು, ಸಮಾಜದಲ್ಲಿ ಅವರ ಮಹತ್ವ ಕಡಿಮೆಯಾಗುತ್ತಿದೆ’ ಎಂದರು. ಜತೆಗೆ ದೇಶದಲ್ಲಿ ಮಹಿಳೆಯರ ರಕ್ಷಣೆಗೆ ಇರುವ ಕಾಯ್ದೆ ಹಾಗೂ ನಿಬಂಧನೆಗಳ ಬಗ್ಗೆ ತಿಳಿಸಿದರು.

    ಕಾರ‍್ಯಕ್ರಮದಲ್ಲಿ ದೈಹಿಕ ಶಿಕ್ಷಣ ವಿಭಾಗದ ಪ್ರಭಾರ ಪ್ರಾಚಾರ್ಯ ಮಧು ಜಿ.ಆರ್ ಉಪಸ್ಥಿತರಿದ್ದರು. ಪದವಿ ಹಾಗೂ ಸ್ನಾತ್ತಕೋತ್ತರ ದೈಹಿಕ ಶಿಕ್ಷಣದ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಕಾರ್ಯಾಗಾರದ ಪ್ರಯೋಜನವನ್ನು ಪಡೆದರು. ವಿದ್ಯಾರ್ಥಿ ಅರ್ಜುನ್ ಕಾರ್ಯಕ್ರಮ ನಿರೂಪಿಸಿ, ಅಣ್ಣಯ್ಯ ಧನ್ಯವಾದ ಸಮರ್ಪಿಸಿದರು.

    Click here

    Click here

    Click here

    Call us

    Call us

    ‘ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ರಕ್ಷಣೆ ಕಾಯ್ದೆ, 2005 ವರದಕ್ಷಿಣೆ ನಿಷೇಧ ಕಾಯ್ದೆ, 1961; ಮಹಿಳೆಯರ ಅಸಭ್ಯ ಪ್ರಾತಿನಿಧ್ಯ (ನಿಷೇಧ) ಕಾಯ್ದೆ, 1986; ಲೈಂಗಿಕ ಅಪರಾಧಗಳ ವಿರುದ್ಧ ಕಾನೂನುಬದ್ಧವಾಗಿ ತಡೆಗಟ್ಟಲು ಅಪರಾಧ ಕಾನೂನು (ತಿದ್ದುಪಡಿಗಳು), ಕಾಯ್ದೆ 2013; ಕ್ರಿಮಿನಲ್ ಕಾನೂನು (ತಿದ್ದುಪಡಿ) ಕಾಯ್ದೆ, 2008 ಇತ್ಯಾದಿ ಕಾಯಿದೆ ಹಾಗೂ ನಿಬಂಧನೆಗಳು ದೇಶದಲ್ಲಿ ಮಹಿಳೆಯರಿಗೆ ರಕ್ಷಣೆಯನ್ನು ಒದಗಿಸುತ್ತದೆ’- ಬಾಸ್ಕೆಟ್‌ಬಾಲ್ ಆಟಗಾರ ಶಮಂತ್

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ

    18/12/2025

    ಖೋ-ಖೋ ಟೂರ್ನಮೆಂಟ್: ಆಳ್ವಾಸ್ ಅವಳಿ ವಿಭಾಗಗಳಲ್ಲಿ ಸಮಗ್ರ ಚಾಂಪಿಯನ್ಸ್

    13/12/2025

    ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್: ಆಳ್ವಾಸ್ ಮಹಿಳಾ ತಂಡಕ್ಕೆ ಸಮಗ್ರ ಪ್ರಶಸ್ತಿ

    08/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.