Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ಪ್ರೆಸ್ ಕ್ಲಬ್ ವಿಷಯದಲ್ಲಿ ಗೊಂದಲಕ್ಕೆ ಒಳಗಾಗಬೇಡಿ: ಕಾರ್ಯನಿರತ ಪತ್ರಕರ್ತರ ಸಂಘ ಸ್ಪಷ್ಟನೆ
    ಊರ್ಮನೆ ಸಮಾಚಾರ

    ಕುಂದಾಪುರ ಪ್ರೆಸ್ ಕ್ಲಬ್ ವಿಷಯದಲ್ಲಿ ಗೊಂದಲಕ್ಕೆ ಒಳಗಾಗಬೇಡಿ: ಕಾರ್ಯನಿರತ ಪತ್ರಕರ್ತರ ಸಂಘ ಸ್ಪಷ್ಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಹೆಸರನ್ನೇ ಹೋಲುವ ಇನ್ನೊಂದು ಸಂಘಟನೆಯ ಹೆಸರಿನಲ್ಲಿ ‘ಪ್ರೆಸ್ ಕ್ಲಬ್’ ಉದ್ಘಾಟನಾ ಕಾರ್ಯಕ್ರಮ ಎಂಬ ಆಹ್ವಾನ ಪತ್ರಿಕೆಯೊಂದು ಸೊಷಿಯಲ್ ಮೀಡಿಯಾದಲ್ಲಿ ಕಂಡುಬಂದಿದ್ದು ಈ ಕುರಿತು ಸಾರ್ವಜನಿಕರು ಗೊಂದಲಕ್ಕೆ ಒಳಗಾಗಬಾರದು ಎಂದು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಕಟಣೆ ತಿಳಿಸಿದೆ.

    Click Here

    Call us

    Click Here

    ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಮಾನ್ಯತೆ ಹೊಂದಿರುವ ಅಧಿಕೃತ ಪತ್ರಕರ್ತರ ಸಂಘಟನೆಯಾಗಿದೆ. ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜು ವಾಣಿಜ್ಯ ಸಂಕೀರ್ಣದಲ್ಲಿ ಸಂಘದ ಕಛೇರಿ ಮತ್ತು ಪ್ರೆಸ್ ಕ್ಲಬ್ ಇದ್ದು ಸಂಸ್ಥೆಗೆ ಮೂವತ್ತಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಮಾನ್ಯತೆ ಪಡೆದಿರುವ ನಮ್ಮ ಸಂಘಕ್ಕೂ ಮತ್ತು ನಮ್ಮ ಸಂಘದ ಹೆಸರನ್ನೇ ಹೋಲುವ ಇನ್ನೊಂದು ಸಂಘಟನೆಯ ಪ್ರೆಸ್ ಕ್ಲಬ್ ಅಥವಾ ಇತರ ಯಾವುದೇ ಚಟುವಟಿಕೆಗಳಿಗೂ ಸಂಬಂಧವಿಲ್ಲ ಮತ್ತು ಈ ಕುರಿತು ಸಾರ್ವಜನಿಕರು ಯಾವುದೇ ಗೊಂದಲಕ್ಕೊಳಗಾಗಬಾರದು ಎಂದು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ವಿನಂತಿಸಿದೆ.

    ಕನ್ನಡದ ಎಲ್ಲ ದಿನಪತ್ರಿಕೆಗಳು, ಟಿವಿ ಚಾನಲ್ಗಳು, ಸ್ಥಳೀಯ ಪತ್ರಿಕೆಗಳಲ್ಲಿ ಕೆಲಸ ಮಾಡುವ ವರದಿಗಾರರು, ಬಿಡಿಸುದ್ದಿಗಾರರು (ಸ್ಟ್ರಿಂಜರ್ಸ್), ಸಂಪಾದಕರು ಮತ್ತು ಇತರ ಪತ್ರಕರ್ತರು ನಮ್ಮ ಸಂಘದ ಸದಸ್ಯರಾಗಿದ್ದು ಸಂಘವು 63 ಸದಸ್ಯ ಬಲವನ್ನು ಹೊಂದಿದೆ. ತಾಲೂಕಿನ ಎಲ್ಲ ರಾಜಕೀಯ ಪಕ್ಷಗಳು, ಸಂಘಸಂಸ್ಥೆಗಳು, ಉದ್ಯಮಗಳು, ವ್ಯಕ್ತಿಗಳು ಸೇರಿದಂತೆ ಎಲ್ಲರ ಪತ್ರಿಕಾಗೋಷ್ಟಿಗಳು ಹಾಗೂ ಇತರ ಸಂಬಂಧಿತ ಚಟುವಟಿಕೆಗಳು ನಮ್ಮ ಕ್ಲಬ್ನ ಆಶ್ರಯದಲ್ಲೇ ನಡೆಯುತ್ತಿದ್ದು ಇದು ಮುಂದೆಯೂ ಮುಂದುವರಿಯಲಿದೆ. ಈ ಕುರಿತು ಸಾರ್ವಜನಿಕರಲ್ಲಿ ಯಾವುದೇ ಗೊಂದಲ ಬೇಡ ಎಂದು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ್ಯ ಶಶಿಧರ ಹೆಮ್ಮಾಡಿ ಮತ್ತು ಪ್ರಧಾನ ಕಾರ್ಯದರ್ಶಿ ನಾಗರಾಜ ರಾಯಪ್ಪನಮಠ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆಯ ಶೌರ್ಯ ತಂಡದಿಂದ ಮಳೆ ಹಾನಿ ಪ್ರದೇಶದಲ್ಲಿ ಸೇವಾ ಕಾರ್ಯ

    08/07/2026

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಖೋ ಖೋ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    08/07/2026

    ಕೋಟ ವಿವೇಕ ವಿದ್ಯಾಸಂಸ್ಥೆಯಲ್ಲಿ ವಿಶಿಷ್ಟ ಶ್ರೇಣಿಯ ಸಾಧಕರಿಗೆ ಸನ್ಮಾನ

    08/07/2026
    Leave A Reply Cancel Reply

    3 × five =

    Call us

    Click Here

    Call us

    Call us

    Call us
    Highest Viewed Recently
    • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆಯ ಶೌರ್ಯ ತಂಡದಿಂದ ಮಳೆ ಹಾನಿ ಪ್ರದೇಶದಲ್ಲಿ ಸೇವಾ ಕಾರ್ಯ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಖೋ ಖೋ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಕೋಟ ವಿವೇಕ ವಿದ್ಯಾಸಂಸ್ಥೆಯಲ್ಲಿ ವಿಶಿಷ್ಟ ಶ್ರೇಣಿಯ ಸಾಧಕರಿಗೆ ಸನ್ಮಾನ
    • ಸಿ.ಎ. ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.