ಭಾರತೀಯ ಅಂಚೆ ಇಲಾಖೆಯಿಂದ ಸುರೇಂದ್ರ ಡಿ. ಅವರಿಗೆ ಪ್ರಶಸ್ತಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಭಾರತೀಯ ಅಂಚೆ ಇಲಾಖೆಯು ನೀಡುವ ರಾಷ್ಟ್ರ ಪ್ರಶಸ್ತಿಯನ್ನು ಬೈಂದೂರು ಅಂಚೆ ಕಛೇರಿಯಲ್ಲಿ ಅಂಚೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿರುವ ಸುರೇಂದ್ರ ಡಿ. ಅವರು ಪಡೆದುಕೊಂಡಿದ್ದಾರೆ.

Call us

Click Here

ಅಂಚೆ ಇಲಾಖೆಯ ಗ್ರಾಮೀಣ ಅಂಚೆ ಜೀವ ವಿಮಾ ವಿಭಾಗದಲ್ಲಿ 2019-20ನೇ ಸಾಲಿಗೆ ಸಂಬಂಧಿಸಿದಂತೆ ರಾಷ್ಟ್ರಮಟ್ಟದಲ್ಲಿ ಅತಿ ಹೆಚ್ಚಿನ ವಹಿವಾಟನ್ನು ಮಾಡಿಸಿರುವ ಸುರೇಂದ್ರ ಅವರಿಗೆ ಭಾರತೀಯ ಅಂಚೆ ಇಲಾಖೆಯಿಂದ ಬೆಂಗಳೂರಿನ ಜನರಲ್ ಪೋಸ್ಟ್ ಆಫೀಸಿನಲ್ಲಿರುವ ಮೇಘಧೂತ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿಯ ಜೊತೆಗೆ ನಗದು ಬಹುಮಾನವನ್ನು ನೀಡಿ ಗೌರವಿಸಲಾಗಿದೆ.

ಅವರು ತಮ್ಮ ಹನ್ನೇರಡು ವರ್ಷದ ಸೇವಾ ಅವಧಿಯಲ್ಲಿ ಏಳು ಬಾರಿ ವಿಭಾಗಿಯ ಮಟ್ಟದ ಮತ್ತು ಮೂರು ಬಾರಿ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಸಮಾರಂಭದಲ್ಲಿ ಕರ್ನಾಟಕ ವೃತ್ತದ ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಶಾರದಾ ಸಂಪತ್, ಡೈರೆಕ್ಟರ್ ಆಫ್ ಪೋಸ್ಟಲ್ ಸರ್ವಿಸ್ ಮಹೇಂದ್ರ ಗಜ್ಭಾಯ್, ಹಾಗೂ ಕರ್ನಾಟಕ ವೃತ್ತದ ಇಲಾಖೆಯ ಮೇಲಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply