ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ಕ್ರಾಸ್ ಘಟಕ ಮತ್ತು ರೆಡ್ ರಿಬ್ಬನ್ ಕ್ಲಬ್, ಎನ್.ಸಿ.ಸಿ., ಎನ್.ಎಸ್.ಎಸ್., ಇಂಡಿಯನ್ ರೆಡ್ಕ್ರಾಸ್ ಸೊಸೈಟಿ, ಕುಂದಾಪುರ ಹಾಗೂ ಲಯನ್ಸ್ ಕ್ಲಬ್, ಕುಂದಾಪುರದ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಜರುಗಿತು.
ಶಿಬಿರದಲ್ಲಿ ಸುಮಾರು124 ಯುನಿಟ್ಗಳಷ್ಟು ರಕ್ತವನ್ನು ರಕ್ತದಾನಿಗಳಿಂದ ಸಂಗ್ರಹಿಸಲಾಯಿತು.
ಇದೇ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಡಿಸ್ಟ್ರಿಕ್ ಗವರ್ನರ್ ಲಯನ್ ಎಮ್. ಎಮ್. ಹೆಗ್ಡೆ, ಅವರ ಪತ್ನಿ ಸಂಧ್ಯಾ ಹೆಗ್ಡೆ, ಲಯನ್ಸ್ ಕ್ಲಬ್ ಕುಂದಾಪುರದ ಅಧ್ಯಕ್ಷರಾದ ಚಂದ್ರಶೇಖರ್ ಕೆ., ಕಾರ್ಯದರ್ಶಿಗಳಾದ ರಾಜೇಂದ್ರ, ಖಜಾಂಚಿ ಕಿರಣ್ ಕುಮಾರ್ ಮತ್ತು ಸದಸ್ಯರು ಹಾಗೂ ಕುಂದಾಪುರ ರೆಡ್ಕ್ರಾಸ್ ಘಟಕದ ಚೇರ್ಮನ್ ಜಯಕರ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯಕ್ರಮ ಅಧಿಕಾರಿ ಸತ್ಯನಾರಾಯಣ ಪುರಾಣಿಕ್, ಜನೌಷಧಿ ಉಸ್ತುವಾರಿ ಗಣೇಶ್ ಆಚಾರ್, ಕಾರ್ಯದರ್ಶಿ ಸೀತಾರಾಮ್ ಶೆಟ್ಟಿ, ಡಾ. ಸೋನಿ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಯುವ ರೆಡ್ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್ ಹಾಗೂ ಸಹ ಸಂಯೋಜಕರಾದ ಕು. ಸೌಮ್ಯ ಎನ್. ಕುಂದರ್, ಎನ್.ಸಿ.ಸಿ. ಅಧಿಕಾರಿಯಾದ ಶಿವರಾಜ್ ಸಿ. ನಾವುಂದ, ಎನ್.ಎಸ್.ಎಸ್. ಯೋಜನಾಧಿಕಾರಿಯಾದ ಪ್ರವೀಣ್ ಮೊಗವೀರ ಗಂಗೊಳ್ಳಿ, ಸಹ ಸಂಯೋಜಕರಾದ ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು.