Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರದಲ್ಲಿ ಸುಸಜ್ಜಿತ ಜಿಮ್ ಮತ್ತು ಈಜುಕೊಳ ಆರಂಭಿಸಲು ಅಗತ್ಯ ಕ್ರಮ: ಸಚಿವ ಡಾ. ನಾರಾಯಣ ಗೌಡ
    ಉಡುಪಿ ಜಿಲ್ಲೆ

    ಕುಂದಾಪುರದಲ್ಲಿ ಸುಸಜ್ಜಿತ ಜಿಮ್ ಮತ್ತು ಈಜುಕೊಳ ಆರಂಭಿಸಲು ಅಗತ್ಯ ಕ್ರಮ: ಸಚಿವ ಡಾ. ನಾರಾಯಣ ಗೌಡ

    Updated:01/03/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಜಿಲ್ಲೆಯಲ್ಲಿ ಶಾಸಕರ ಪ್ರದೇಶಾಭಿವೃಧ್ದಿ ಯೋಜನೆಯಡಿಯಲ್ಲಿ ನೀಡಲಾಗುವ ಅನುದಾನವನ್ನು ಸಂಪೂರ್ಣವಾಗಿ ವೆಚ್ಚ ಮಾಡಿ, ನಿಗಧಿತ ಅವಧಿಯೊಳಗೆ ಅಗತ್ಯ ಕಾಮಗಾರಿಗಳನ್ನು ಮುಕ್ತಾಯಗೊಳಿಸಿ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಾ. ನಾರಾಯಣ ಗೌಡ ತಿಳಿಸಿದರು.

    Click Here

    Call us

    Click Here

    ಅವರು ಜಿಲ್ಲಾದಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಶಾಸಕರ ಪ್ರದೇಶಾಭಿವೃಧ್ದಿ ಯೋಜನೆಯಡಿಯಲ್ಲಿ ನೀಡಲಾಗುವ ಅನುದಾನವನ್ನು ನಿಗಧಿತ ಅವಧಿಯೊಳಗೆ ವೆಚ್ಚ ಮಾಡದೇ ಇದ್ದಲ್ಲಿ , ಆರ್ಥಿಕ ಇಲಾಖೆಯಿಂದ ಹೊಸ ಅನುದಾನ ಪಡೆಯಲು ಸಾಧ್ಯವಾಗುವುದಿಲ್ಲ ಆದ್ದರಿಂದ ಜಿಲ್ಲೆಯ ಎಲ್ಲಾ ಶಾಸಕರಿಂದ ಕ್ರಿಯಾ ಯೋಜನೆಯನ್ನು ಪಡೆದು, ಕಾಲಮಿತಿಯಲ್ಲಿ ಯೋಜನೆ ಮುಕ್ತಾಯಗೊಳಿಸಿ , ಅನುದಾನವನ್ನು ವೆಚ್ಚ ಮಾಡಿ , ಅನುದಾನವನ್ನು ಪಿಡಿ ಖಾತೆಯಲ್ಲಿ ಇಡಬೇಡಿ ಎಂದರು.

    ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಸಕರ ಪ್ರದೇಶಾಭಿವೃಧ್ದಿ ಯೋಜನೆಯ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಸದೇ ಇರುವುದರಿಂದ ಹೆಚ್ಚುವರಿ ಅನುದಾನ ಬಿಡುಗಡೆಗೆ ಅಡಚಣೆಯಾಗಿದ್ದು, ಉಡುಪಿ ಜಿಲ್ಲೆಯು ಅನುದಾನ ಬಳಕೆಯಲ್ಲಿ ರಾಜ್ಯದಲ್ಲಿ 2 ನೇ ಸ್ಥಾನದಲ್ಲಿದ್ದು, ಪ್ರಸ್ತುತ ಸಾಲಿನಲ್ಲಿ ಬಾಕಿ ಇರುವ ಕಾಮಗಾರಿಗಳನ್ನು ಸಂಬಂಧಪಟ್ಟ ಇಲಾಖೆಗಳ ಮೂಲಕ ಶೀಘ್ರದಲ್ಲಿ ಮುಕ್ತಾಯಗೊಳಿಸುವ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರಿಗೆ ಸಚಿವರು ತಿಳಿಸಿದರು.

    ಜಿಲ್ಲೆಯ ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲಿಸಿದ ಸಚಿವರು, ಉಡುಪಿಯಲ್ಲಿನ ಕ್ರೀಡಾ ಸೌಲಭ್ಯಗಳ ಬಗ್ಗೆ ಪರಿಶೀಲಿಸಿ ,ಇಡೀ ರಾಜ್ಯಕ್ಕೆ ಮಾದರಿಯಾಗುವಂತಹ ಸೌಲಭ್ಯಗಳು ಇಲ್ಲಿದ್ದು, ಇವುಗಳ ಸದ್ಬಳಕೆ ಮತ್ತು ಸಮರ್ಪಕ ನಿರ್ವಹಣೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

    Click here

    Click here

    Click here

    Call us

    Call us

    ಜಿಲ್ಲೆಯಲ್ಲಿನ ಎಲ್ಲಾ ತಾಲೂಕು ಕ್ರೀಡಾಂಗಣಗಳ ಅಭಿವೃದ್ದಿ ಕುರಿತಂತೆ ಸಂಬಂಧಪಟ್ಟ ಶಾಸಕರಿಂದ ಪ್ರಸ್ತಾವನೆ ಸಲ್ಲಿಸಿ, ಕುಂದಾಪುರದಲ್ಲಿ ತಾಲೂಕಿನಲ್ಲಿ ಸುಸಜ್ಜಿತ ಜಿಮ್ ಮತ್ತು ಈಜುಕೊಳ ಆರಂಭಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು, ಉಡುಪಿ ಬ್ಯಾಡ್ಮಂಟನ್ ಕೋರ್ಟ್ ವಿಸ್ತರಣೆ ಹಾಗೂ ಕ್ರೀಡಾ ವಸತಿ ನಿಲಯದಲ್ಲಿ ಪದವಿ ವರೆಗೆ ಕ್ರೀಡಾಪಟುಗಳಿಗೆ ಅಗತ್ಯ ವ್ಯವಸ್ಥೆ ಕಲ್ಪಿಸಲಾಗುವುದು , ಕ್ರೀಡಾಂಗಣಗಳ ನಿರ್ಮಾಣ ಮತ್ತು ವಿಸ್ತರಣೆ ಸಂದರ್ಭದಲ್ಲಿ ಕ್ರೀಡಾಪಟುಗಳಿಗೆ ಸುಸಜ್ಜಿತ ಶೌಚಾಲಯ ಮತ್ತು ಸ್ನಾನಗೃಹ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ಸೂಚಿಸಿದರು.

    ಸಭೆಯಲ್ಲಿ ಶಾಸಕ ರಘುಪತಿ ಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹಗ್ಡೆ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಯೋಜನಾ ಇಲಾಖೆ ನಿರ್ದೇಶಕ ಚಂದ್ರಶೇಖರ್, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿ.ಪಂ. ಸಿಇಓ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಷನ್ ಕುಮಾರ್ ಶೆಟ್ಟಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    nine + 17 =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.