Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ: ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಕೋಟ: ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ

    Updated:27/02/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ: ಹಣೆಬರವನ್ನು ನಂಬಿ ಬದುಕಿದವರು ನಾವಲ್ಲ ಹಣೆಯ ಬೆವರನ್ನು ನಂಬಿ ಬದುಕುತ್ತಿರುವ ರೈತರು ನಾವು ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕೃಷಿಕ ಭಾಸ್ಕರ್ ಶೆಟ್ಟಿ ಮಣೂರು ಹೇಳಿದರು.

    Click Here

    Call us

    Click Here

    ಅವರು ಕೋಟದ ಪಂಚವರ್ಣ ಯುವಕ ಮಂಡಲ ಇವರ ನೇತ್ರತ್ವದಲ್ಲಿ ಗಿಳಿಯಾರು ಯುವಕ ಮಂಡಲ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಗೀತಾನಂದ ಫೌಂಡೇಶನ್ ಮಣೂರು, ಮಣೂರು ಫ್ರೆಂಡ್ಸ್ ಮಣೂರು ಇವರ ಸಹಯೋಗದೊಂದಿಗೆ 6 ತಿಂಗಳ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

    ಅದೃಷ್ಟವನ್ನು ನಂಬಿ ಬದುಕಿದವರು ನಾವಲ್ಲ ದೂರದೃಷ್ಟಿಯನ್ನು ಇಟ್ಟುಕೊಂಡು ಕೃಷಿ ಕ್ಷೇತ್ರದಲ್ಲಿ ಒಂದೊಂದೆ ವಿಧಾನವನ್ನು ಕಂಡುಕೊಂಡು ಬದುಕುತ್ತಿರುವ ರೈತರು ಅಂತಹ ರೈತರನ್ನು ಗುರುತಿಸುವುದು ಪ್ರೋತ್ಸಾಹಿಸುವುದು ಅತ್ಯಗತ್ಯ ,ಇನ್ನು ಕೃಷಿಯಲ್ಲಿ ನಷ್ಟ ಅನ್ನೋದು ಸತ್ಯಕ್ಕೆ ದೂರವಾದ ವಿಚಾರ ,ಸಾಂಪ್ರಾದಾಯಕ ಕೃಷಿ ಪದ್ಧತಿಯಿಂದ ಹಿಂದಿನ ಹಿರಿಯರು ಯಶಸ್ಸು ಕಂಡಿದ್ದಾರೆ. ಆದರೆ ಇಂದಿನ ಆಧುನಿಕ ಕೃಷಿ ಪದ್ದತಿಯಲ್ಲಿ ಮತ್ತಷ್ಟು ಯಶಸ್ಸು ಕಾಣಲು ಸಾಧ್ಯ ಎಂದರಲ್ಲದೆ ಕೃಷಿ ಒಂದನ್ನೆ ಅವಲಂಬಿಸದೆ ಅದಕ್ಕೆ ಪೂರಕವಾದ ಹೈನುಗಾರಿಕೆ, ಕೋಳಿ ಸಾಕಾರಣೆ ಇದನ್ನೆಲ್ಲ ನಂಬಿ ಬದುಕಿದೆ ಜೀವನ ಪರಿಯಂತ ಯಶಸ್ಸು ಕಾಣಲು ಸಾಧ್ಯ ಎಂದು ಇಲ್ಲಿನ ಎಲ್ಲಾ ಸಂಘಟಕರು ಮನೆಯ ಬಾಗಿಲಿಗೆ ಬಂದು ಗೌರವಿಸುವ ಕಾರ್ಯ ಎಲ್ಲಾ ಪ್ರಶಸ್ತಿಗಳಿಗಿಂತ ಶ್ರೇಷ್ಠವಾದದ್ದು ಎಂದು ಭಾವಿಸಿ ಇದು ನಿರಂತವಾಗಿ ನಡೆಯುವಂತಾಗಲಿ ಎಂದರು.

    ಈ ದೇಶದ ಬೆನ್ನೆಲುಬು ಎಂದು ಬರಿ ಬಾಯಲ್ಲಿ ಹೇಳಿದರೆ ಸಾಲದು ಅದಕ್ಕೆ ಸಮನಾದ ಪ್ರೋತ್ಸಾಹ ಅತ್ಯಗತ್ಯ ಈ ದಿಸೆಯಲ್ಲಿ ಸರಕಾರ ರೈತರಿಗೆ ತೊಂದರೆಯಾಗದ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಅವನ ಸಮಸ್ಯೆಯನ್ನು ಮನಗಾಣಬೇಕು.ರೈತರು ಬೆಳೆದ ಫಸಲಿಗೆ ಸರಿಸಮನಾದ ಬೆಂಬಲ ಬೆಲೆ ಕಾಲಕ್ಕನುಗುಣವಾಗಿ ಸಿಗಬೇಕು ಎಂದು ಸರಕಾರವನ್ನು ಆಗ್ರಹಿಸಿದರು.

    ಸಾಸ್ತಾನದ ಉದ್ಯಮಿ ಬಾಲಕೃಷ್ಣ ಪೂಜಾರಿ ಮಾತನಾಡಿ, ಕೃಷಿಕರನ್ನು ಗೌರವಿಸುವುದು ಬಲು ಅಪರೂಪವಾದರೂ ಇಲ್ಲೊಂದು ಸಂಘಟಕರು ಮನೆಗೆ ತೆರಳಿ ಗೌರವಿಸುವ ಕಾರ್ಯಕ್ರಮ ಇತರ ಸಂಘಟನೆಗಳಿಗೂ ಪ್ರೇರಣೆಯಾಗಬೇಕು. ಎಂದು ಅಭಿಪ್ರಾಯ ಪಟ್ಟರು.

    Click here

    Click here

    Click here

    Call us

    Call us

    ಅಧ್ಯಕ್ಷತೆಯನ್ನು ಕೋಟ ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಮೃತ್ ಜೋಗಿ ವಹಿಸಿದ್ದರು. ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಇದರ ಅಧ್ಯಕ್ಷ ಚೆಂಪಿ ವೆಂಕಟೇಶ ಭಟ್,ರೋಟರಿ ಕ್ಲಬ್ ನಿಕಟಪೂರ್ವ ಅಧ್ಯಕ್ಷೆ ಕುಸುಮ ಎಮ್ ಪೂಜಾರಿ, ಸಾಸ್ತಾನದ ಉದ್ಯಮಿ ಮನೋಜ್ ಪೂಜಾರಿ, ಕೋಟ ರೈತ ಧ್ವನಿ ಅಧ್ಯಕ್ಷ ಎಂ.ಜಯರಾಮ್ ಶೆಟ್ಟಿ, ಪಾಂಡೇಶ್ವರದ ರಕ್ತೇಶ್ವರಿ ದೇವಳದ ಧರ್ಮದರ್ಶಿ ಕೆ.ವಿ ರಮೇಶ್ ರಾವ್, ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್ಯ, ಗಿಳಿಯಾರು ಯುವಕ ಮಂಡಲ ಸ್ಥಾಪಾಕಾಧ್ಯಕ್ಷ ಸುರೇಶ್ ಗಿಳಿಯಾರ್,ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಸಂಚಾಲಕಿ ಸುಜಾತ ಬಾಯಿರಿ, ಮಣೂರು ಪರಿಸರದ ಹಿರಿಯ ಕೃಷಿಕ ಕೃಷ್ಣಯ್ಯ ಶೆಟ್ಟಿ, ಕೋಟ ಗ್ರಾ.ಪಂ ಮಾಜಿ ಸದಸ್ಯ ವಿಜಯ ಕುಂದರ್ ಉಪಸ್ಥಿತರಿದ್ದರು. ಪಂಚವರ್ಣ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸ್ವಾಗತಿಸಿ ಪ್ರಾಸ್ತಾವನೆ ಸಲ್ಲಿಸಿದರು. ಪಂಚವರ್ಣ ಯುವಕ ಮಂಡಲ ಸಂಘಟನಾಕಾರ್ಯದರ್ಶಿ ಅಜಿತ್ ಆಚಾರ್ಯ ನಿರೂಪಿಸಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    19/12/2025

    ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ

    19/12/2025

    ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.