Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಲೆ ಹಾಗೂ ಸಾಹಿತ್ಯ ಮನುಷ್ಯನ ಕೈಹಿಡಿದು ನಡೆಸುತ್ತದೆ: ಸುಬ್ರಹ್ಮಣ್ಯ ಶೆಟ್ಟಿ
    ಊರ್ಮನೆ ಸಮಾಚಾರ

    ಕಲೆ ಹಾಗೂ ಸಾಹಿತ್ಯ ಮನುಷ್ಯನ ಕೈಹಿಡಿದು ನಡೆಸುತ್ತದೆ: ಸುಬ್ರಹ್ಮಣ್ಯ ಶೆಟ್ಟಿ

    Updated:02/03/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಯಾವ ವ್ಯಕ್ತಿಗೆ ನಾಟಕ, ಸಂಗೀತ, ಸಾಹಿತ್ಯ, ಕಲೆ ಮತ್ತು ಪುಸ್ತಕಗಳ ಆಸಕ್ತಿ ಇಲ್ಲವೋ ಆತ ಮನುಷ್ಯನಾಗಿರಲು ಸಾಧ್ಯವಿಲ್ಲ. ಬದುಕಿನ ಅವಕಾಶಗಳನ್ನು ಅರಸಿ ಎಲ್ಲೆಯೋ ನೆಲೆ ಕಾಣಲು ಹೊರಟರೂ ಅಂತಿಮವಾಗಿ ಕಲೆ ಹಾಗೂ ಸಾಹಿತ್ಯ ಮನುಷ್ಯನ ಕೈಹಿಡಿದು ನಡೆಸುತ್ತದೆ. ಎಂದು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ಬೈಂದೂರು ಶಾರದಾ ವೇದಿಕೆಯಲ್ಲಿ ನಡೆದ ಲಾವಣ್ಯದ ರಂಗವೈವಿಧ್ಯ-2021 ಸಮಾರಂಭದ ಎರಡನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಬೈಂದೂರಿನಲ್ಲಿ ರಂಗಾಸಕ್ತರು, ಕಲಾಭಿಮಾನಿಗಳು ಹಾಗೂ ಸಾಹಿತ್ಯಾಭಿಮಾನಿಗಳು ಹೆಚ್ಚಿನ ಪ್ರಮಾಣದಲ್ಲಿದ್ದು, ಇಲ್ಲಿ ವರ್ಷವಿಡೀ ವಿವಿಧ ಸ್ಥರದ ರಂಗ ಚಟುವಟಿಕೆಗಳು ನಡೆಯುತ್ತಿರುವ ಈ ಪ್ರದೇಶವನ್ನು ರಂಗ ಕಾಶಿ ಎಂದರೂ ಅತಿಶಯೋಕ್ತಿ ಅಗಲಾರದು. ಈ ಸಮಾಜವನ್ನು ನೋಡಿ ಅದನ್ನು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಅರಿಯಬೇಕು ಎಂಬ ಮಹದಾಸೆ ಹೊಂದಿರುವ ಸೃಜನಶೀಲ ಪ್ರೇಕ್ಷಕವೃಂದ ಈ ಭಾಗದಲ್ಲಿದೆ. ಕಳೆದ 44 ವರ್ಷಗಳಿಂದ ಒಂದು ಕಲಾಸಂಸ್ಥೆ ಸದೃಢವಾಗಿರುವುದಕ್ಕೆ ಅದರಲ್ಲಿರುವ ಎಲ್ಲಾ ಸದಸ್ಯರು ರಂಗಭೂಮಿ ಹಾಗೂ ರಂಗಪ್ರಕಾರಗಳ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕೇಂಬ ಅಚಲವಾದ ನಂಬಿಕೆ ಹಾಗೂ ಆಸಕ್ತಿ ಕಾರಣವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ನಡೆಯುತ್ತಿರುವ ರಂಗ ಚಟುವಟಿಕೆಗಳಿಂದ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದರು.

    ಸಾಹಿತಿ ಬಾಡ ಪ್ರವೀಣ್‌ಕುಮಾರ್ ಶೆಟ್ಟಿ ಮಾತನಾಡಿ, ಕಲಾಪೋಷಕರು ಹಾಗೂ ಪ್ರೇಕ್ಷಕರು ಕಲೆ ಮತ್ತು ಕಲಾವಿದರ ಹಿಂದಿರುವ ದೊಡ್ಡಶಕ್ತಿ. ಸಾಂಸ್ಕೃತಿಕ ಅಭಿರುಚಿ, ಅಭಿಮಾನ ಹಾಗೂ ಹಿರಿಯರ ಸನ್ನಡತೆಯ ಸಹಕಾರದಿಂದ 44 ವರ್ಷಗಳಿಂದ ರಂಗಕೃಷಿಯಲ್ಲಿ ತೊಡಗಿಸಿಕೊಂಡ ಲಾವಣ್ಯ ತನ್ನ 44ನೇ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದೆ ಅನ್ನುವುದಕ್ಕಿಂತ ಇಲ್ಲಿನ ಪ್ರೇಕ್ಷಕರು ತಮ್ಮ ಪ್ರಬುದ್ಧತೆಯ ೪೪ನೇ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

    ಲಾವಣ್ಯದ ಗೌರವಾಧ್ಯಕ್ಷ ವಿ. ಆರ್. ಬಾಲಚಂದ್ರ ಅಧ್ಯಕ್ಷತೆ ವಹಿಸಿದ್ದರು. ಬೈಂದೂರಿನ ಪೌರಕಾರ್ಮಿಕರಾದ ಉಮೇಶ ಕೊರಗ, ಗಿರೀಶ್ ಕೊರಗ, ಹರೀಶ್ ಕೊರಗ, ಸತೀಶ್ ಕೊರಗ, ಕಮಲ, ಸುವರ್ಣ ಇವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.

    Click here

    Click here

    Click here

    Call us

    Call us

    ಸಂಸ್ಥೆಯ ಗೌರವಾಧ್ಯಕ್ಷ ಯು. ಶ್ರೀನಿವಾಸ ಪ್ರಭು, ಉಡುಪಿ ಸಂಸ್ಕೃತಿ ವಿಶ್ ಪ್ರತಿಷ್ಠಾನದ ಗೌರವಾಧ್ಯಕ್ಷ ಯು. ವಿಶ್ವನಾಥ ಶೆಣೈ, ಉದ್ಯಮಿ ಕೆ. ಬಾಬು ಶೆಟ್ಟಿ ತಗ್ಗರ್ಸೆ, ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಐ. ನಾರಾಯಣ, ಬೈಂದೂರು ಸಿಟಿ ಜೆಸಿಐ ಅಧ್ಯಕ್ಷ ಶ್ರೀಧರ ಆಚಾರ್ಯ, ವಿದ್ಯುತ್ ಗುತ್ತಿಗೆದಾರ ಸವಿತಾ ದಿನೇಶ್ ಗಾಣಿಗ, ಸಾಹಿತಿ ಪ್ರವೀಣ್‌ಕುಮಾರ್ ಶೆಟ್ಟಿ ಬಾಡ, ಕಾರ್ಯದರ್ಶಿ ಮೂರ್ತಿ ಬೈಂದೂರು ಉಪಸ್ಥಿತರಿದ್ದರು.

    ಸಂಸ್ಥೆಯ ಅಧ್ಯಕ್ಷ ಹರೇಗೋಡು ಉದಯ್ ಆಚಾರ್ಯ ಸ್ವಾಗತಿಸಿ, ನಾಗರಾಜ ಪಿ. ಯಡ್ತರೆ ನಿರೂಪಿಸಿ, ದಯಾನಂದ ಪಿ. ವಂದಿಸಿದರು. ನಂತರ ನೃತ್ಯ ನಿಕೇತನ ಕೊಡವೂರು ತಂಡದವರು ಸುಧಾ ಆಡುಕಳ ರಚನೆಯ ಶ್ರೀಪಾದ ಭಟ್ ನಿರ್ದೇಶನದ ನಾರಸಿಂಹ ನೃತ್ಯ ನಾಟಕ ಪ್ರದರ್ಶಿಸಿದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.