Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್‌ನಲ್ಲಿ ಅಂತರರಾಷ್ಟ್ರೀಯ ಆನ್‌ಲೈನ್ ವಿಚಾರ ಸಂಕಿರಣ
    alvas nudisiri

    ಆಳ್ವಾಸ್‌ನಲ್ಲಿ ಅಂತರರಾಷ್ಟ್ರೀಯ ಆನ್‌ಲೈನ್ ವಿಚಾರ ಸಂಕಿರಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ: ಲಾಭಗಳಿಕೆಯ ಸಂಶೋಧನೆ ಸಮಷ್ಟಿಯ ಶ್ರೇಯಸ್ಸಿಗೆ ಕೊಡುಗೆ ನೀಡದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.

    Click Here

    Call us

    Click Here

    ಆಳ್ವಾಸ್ ಕಾಲೇಜಿನ ಬಯೋಟೆಕ್ನಾಲಜಿ ಹಾಗೂ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ಘಟಕದ ಸಹಯೋಗದಲ್ಲಿ ಮಿಜಾರಿನ ಎಂಬಿಎ ಸೆಮಿನಾರ್ ಹಾಲ್‌ನಲ್ಲಿ ನಡೆದ ಕೊರೊನಾ ನಂತರದಲ್ಲಿ ಜೈವಿಕ ವಿಜ್ಞಾನದ ಅಭಿವೃದ್ಧಿ ಕುರಿತ ಅಂತರರಾಷ್ಟ್ರೀಯ ಆನ್ಲೈನ್ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಲಾಭದ ನಿರೀಕ್ಷೆಯಿಂದ ಸಂಶೋಧನೆ ನಡೆಸಬಾರದು. ಸಂಶೋಧನೆಗೆ ಅಗತ್ಯವಿರುವ ಪ್ರೇರಣೆ ಯಾವುದೇ ಮೂಲದಿಂದ ಪಡೆಯಬಹುದು. ತರಗತಿಯೊಳಗಿನ ಜ್ಞಾನದೊಂದಿಗೆ ಹೊಸ ವಿಚಾರಗಳಲ್ಲಿ ತೊಡಗಿಸಿಕೊಳ್ಳುವುದು ಕಲಿಕೆಗೆ ಅಗತ್ಯ. ಕೋವಿಡ್ ನಿಯಂತ್ರಣದಲ್ಲಿ ವಿಜ್ಞಾನ ಪ್ರಮುಖ ಪಾತ್ರವಹಿಸಿದೆ. ಕೊರೊನಾ ಪ್ರಭಾವದಿಂದ ವಿಜ್ಞಾನದ ತೀಕ್ಷಣೆ ಕಡಿಮೆಯಾಗುತ್ತಿದೆ. ಈ ನಿಟ್ಟಿನಲ್ಲಿ ಸಂಶೋಧನಾ ಕ್ಷೇತ್ರ ಇನ್ನಷ್ಟು ಅಭಿವೃದ್ಧಿಯಾಗಬೇಕಿದೆ ಎಂದರು.

    ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ಪ್ರಸ್ತುತ ಪ್ರಪಂಚವು ಕೊರೊನಾ ಭೀತಿಯಲ್ಲೇ ಬದುಕುವ ಪರಿಸ್ಥಿತಿಯಲ್ಲಿದೆ ಆದ್ದರಿಂದ ವಿಜ್ಞಾನ ಜನರಲ್ಲಿ ಆತ್ಮವಿಶ್ವಾಸ ಹಾಗೂ ಆಶಾವಾದ ಹುಟ್ಟುಹಾಕಬೇಕು. ವಿಜ್ಞಾನದ ಉದ್ದೇಶ ಲಾಭಗಳಿಸುವುದಾಗದೇ, ಮಾನವ ಮತ್ತು ಪರಿಸರದ ನಡುವಿನ ಅಂತರವನ್ನು ಭರಿಸುವ ಸೇತುವೆಯಾಗಬೇಕು ಎಂದರು.

    ಸೆಮಿನಾರ್‌ನಲ್ಲಿ ಇಂಗ್ಲೆಂಡ್‌ನ ಬೆಡ್ಫೋಶೈರ್ ವಿಶ್ವವಿದ್ಯಾನಿಲಯದ ಲೈಫ್ ಸಯನ್ಸ್ ವಿಭಾಗದ ಡಾ. ರಮ್ಯ ಶನಿವಾರಸಂತೆ ಲೀಲೆಶ್, ‘ಜಿನೋಮ್ ಹಾಗೂ ವಾಕ್ಸಿನ್’ ಕುರಿತು ಮಾತನಾಡಿದರು. ಮನೇಸರ್‌ನ ಮ್ಯಾನ್‌ಕೈಂಡ್ ರಿಸರ್ಚ್ ಸೆಂಟರ್‌ನ ಡಾ. ಶ್ರೀನಿವಾಸ ರೆಡ್ಡಿ ‘ಡ್ರಗ್ ಡಿಸ್ಕವರಿ’ ಜಾರ್ಜ್ ವಾಶಿಂಗ್‌ಟನ್ ವಿಶ್ವವಿದ್ಯಾನಿಲಯದ ಪೋಸ್ಟ್ ಡಾಕ್ಟೋರಲ್ ಸೈಂಟಿಸ್ಟ್ ಡಾ. ಆಶಿತೋಷ್ ಏಂಡೆ ‘ಕ್ಯಾನ್ಸರ್ ರಿಸರ್ಚ್ ಆಂಡ್ ಇಂಪಾಕ್ಟ್ ಆಫ್ ಕೋವಿಡ್ 19 ಡೆನ್‌ಮಾರ್ಕ್‌ನ ಕೋಪನ್‌ಹ್ಯಾಗನ್ ವಿವಿಯ ಸಹಾಯಕ ಪ್ರಾಧ್ಯಾಪಕ ಮಹೇಶ್ ಎಂ. ಪೂಜಾರಿ ಪ್ರಾಣಿ ಆಧಾರಿತ ಆಹಾರ ಪ್ರೋಟೀನ್‌ಗಳನ್ನು ಪರ್ಯಾಯ ಪ್ರೋಟೀನ್‌ನೊಂದಿಗೆ ಬದಲಾಯಿಸುವುದರ ಸವಾಲಿನ ಕುರಿತು ವಿಷಯ ಮಂಡಿಸಿದರು.

    ಸೆಮಿನಾರ್‌ನಲ್ಲಿ ವಿದ್ಯಾರ್ಥಿಗಳ 3 ಮೌಖಿಕ ಹಾಗೂ 10  ಇ-ಪೋಸ್ಟರ್ ಪ್ರಸ್ತುತಿಪಡಿಸಲಾಯಿತು. ಸ್ನಾತಕೋತ್ತರ ಹಾಗೂ ಪದವಿ ಬಯೋಟೆಕ್ನಾಲಜಿ ವಿಭಾಗದ 125 ವಿದ್ಯಾರ್ಥಿಗಳು ಸೆಮಿನಾರ್‌ನಲ್ಲಿ ಭಾಗವಹಿಸಿದ್ದರು. ಅನ್ವಯಿಕ ಪ್ರಾಣಿಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ. ರಶ್ಮಿ ಉಪಸ್ಥಿತರಿದ್ದರು. ಸ್ನಾತಕೋತ್ತರ ಬಯೋಟೆಕ್ನಾಲಜಿ ವಿಭಾಗದ ಸಂಯೋಜಕ ಡಾ. ರಾಮ್ ಭಟ್ ಪಿ ಸ್ವಾಗತಿಸಿ, ವಿದ್ಯಾರ್ಥಿನಿ ಮೃಧುನ ವಂದಿಸಿದರು, ಮನಸ್ವಿ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ

    18/12/2025

    ಖೋ-ಖೋ ಟೂರ್ನಮೆಂಟ್: ಆಳ್ವಾಸ್ ಅವಳಿ ವಿಭಾಗಗಳಲ್ಲಿ ಸಮಗ್ರ ಚಾಂಪಿಯನ್ಸ್

    13/12/2025

    ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್: ಆಳ್ವಾಸ್ ಮಹಿಳಾ ತಂಡಕ್ಕೆ ಸಮಗ್ರ ಪ್ರಶಸ್ತಿ

    08/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ವೃದ್ಧೆ ನಾಪತ್ತೆ
    • ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.