Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಮಿನಿ ವಿಧಾನಸೌಧ ಕಾಮಗಾರಿಗೆ ಚಾಲನೆ
    ಊರ್ಮನೆ ಸಮಾಚಾರ

    ಬೈಂದೂರು ಮಿನಿ ವಿಧಾನಸೌಧ ಕಾಮಗಾರಿಗೆ ಚಾಲನೆ

    Updated:06/03/20212 Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಕಳೆದ ಎರಡುವರೆ ವರ್ಷದಲ್ಲಿ ಬೈಂದೂರು ಕ್ಷೇತ್ರಕ್ಕೆ ಸುಮಾರು 1680 ಕೋಟಿ ಅನುದಾನ ಬಂದಿದ್ದು, ಅಭಿವೃದ್ಧಿಯಲ್ಲಿ ಅಮೂಲಾಗ್ರ ಬದಲಾವಣೆಯಾಗಿದೆ. ಬಹು ನಿರೀಕ್ಷಿತ ಯೋಜನೆಗಳಿಂದ ಪ್ರತಿಯೊಬ್ಬರಿಗೂ ಸಮರ್ಪಕ ಸೇವೆ ದೊರೆತಿದೆ. ಈಗ ನಿರ್ಮಾಣವಾಗುತ್ತಿರುವ ಮಿನಿ ವಿಧಾನಸೌಧ ಮುಂದಿನ ಒಂದೂವರೆ ವರ್ಷದೊಳಗೆ ಲೋಕಾರ್ಪಣೆಗೊಳ್ಳಲಿದೆ ಎಂದ ಶಾಸಕ ಬಿ. ಎಂ. ಸುಮಾರ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ರಾಜ್ಯದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಇವರಿಂದ ಈ ಹಿಂದೆ ಶಿಲಾನ್ಯಾಸಗೊಂಡಿರುವ ಸುಮಾರು 8.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಬೈಂದೂರು ನೂತನ ಮಿನಿ ವಿಧಾನಸೌಧ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು.

    ಬೈಂದೂರು, ಕೊಲ್ಲೂರು, ಮರವಂತೆಯನ್ನು ಗಮನದಲಿಟ್ಟುಕೊಂಡು ಪ್ರವಾಸೋದ್ಯಮಕ್ಕೆ ಯೋಜನೆಯನ್ನು ರೂಪಿಸಿದ್ದು, ಮುಂದಿನ ದಿನಗಳಲ್ಲಿ ಬೈಂದೂರನ್ನು ಮಾದರಿ ಪ್ರವಾಸೋದ್ಯಮ ಕ್ಷೇತ್ರವನ್ನಾಗಿ ಮಾಡಲಾಗುತ್ತದೆ. ಕೇಂದ್ರ ಸರಕಾರದ ಜಲಜೀವನ ಯೋಜನೆಯಡಿ ಹಾಗೂ ರಾಜ್ಯ ಸರಕಾರದ ಸಹಾಯದೊಂದಿಗೆ ರೂ.550 ಕೋಟಿ ವೆಚ್ಚದಲ್ಲಿ ಬೈಂದೂರು ಕ್ಷೇತ್ರ ಪ್ರತಿ ಮನೆಗೂ ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಗುತ್ತದೆ. ಮಾನ್ಯ ಮುಖ್ಯಮಂತ್ರಿಗಳ ಹಾಗೂ ಸಂಸದರ ಮತ್ತು ಸಚಿವರ ಸಹಾಯದಿಂದ ಅನುದಾನ ಸಿಕ್ಕಿದೆ. ಕೃಷಿಗೆ ನೀರಿನ ಪುರೈಕೆಯನ್ನು ಗಮನದಲ್ಲಿ ಇಟ್ಟುಕೊಂಡು ಸಣ್ಣ ನೀರಾವರಿ ಇಲಾಖೆ ವತಿಯಿಂದ ಅಂದಾಜು ರೂ.200 ಕೋಟಿ ವೆಚ್ಚದಲ್ಲಿ ಹಲವು ಕಡೆಗಳಲ್ಲಿ ವೆಂಟೆಡ್ ಡ್ಯಾಂ ನಿರ್ಮಾಣವಾಗಿದ್ದು, ಇನ್ನು ಕೆಲವೆಡೆ ಕಾಮಗಾರಿ ಪ್ರಗತಿಯಲ್ಲಿದೆ. ಮೀನಗಾರಿಕಾ ಇಲಾಖೆಯಿಂದ 150 ಕೋಟಿ ಅನುದಾನ ಲಭಿಸಿದ್ದು, ಈಗಾಗಲೇ ಜಟ್ಟಿ ನಿರ್ಮಾಣ, ಬಂದರು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಬೈಂದೂರು ತಾಲೂಕು ಆಸ್ಪತ್ರೆಗೆ ರೂ.25 ಕೋಟಿ ಹಾಗೂ ಸುಬ್ಬರಾಡಿ ವೆಂಟೆಂಡ್ ಡ್ಯಾಮ್ ಹೆಚ್ಚುವರಿಯಾಗಿ ರೂ.30 ಕೋಟಿ ಅನುದಾನ ದೊರೆತಿದೆ. ಆರೋಗ್ಯ ಇಲಾಖೆಯಿಂದ ಬೈಂದೂರು ಕ್ಷೇತ್ರಕ್ಕೆ ಎರಡು 108 ವಾಹನ ಮಂಜೂರಾಗಿದೆ. ಗ್ರಾಮೀಣ ಪ್ರದೇಶದ ಹೆಚ್ಚಿನ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದರು.

    ತಹಶೀಲ್ದಾರ್ ಕಿರಣ್ ಗೌರಯ್ಯ, ಜಿಪಂ ಸದಸ್ಯರಾದ ಕೆ. ಬಾಬು ಶೆಟ್ಟಿ, ಶಂಕರ ಪೂಜಾರಿ, ಸುರೇಶ ಬಟ್ವಾಡಿ, ಬೈಂದೂರು ತಾಪಂ ಅಧ್ಯಕ್ಷ ಮಹೇಂದ್ರ ಪೂಜಾರಿ, ಉಪಾಧ್ಯಕ್ಷೆ ಮಾಲಿನಿ ಕೆ., ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಸದಸ್ಯೆ ಸುಜಾತಾ ದೇವಾಡಿಗ, ಗುತ್ತಿಗೆದಾರ ಸುಜಯ್ ಉಪಸ್ಥಿತರಿದ್ದರು. ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ನೆಲ್ಯಾಡಿ ದೀಪಕ್‌ಕುಮಾರ್ ಶೆಟ್ಟಿ ಸ್ವಾಗತಿಸಿ, ಎ. ಅನಂದ ಖಾರ್ವಿ ವಂದಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ

    07/07/2026

    ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    07/07/2026

    ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ

    06/07/2026

    2 Comments

    1. Pingback: ಬೈಂದೂರು ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಮಾರ್ಚ್ 15ಕ್ಕೆ ಉದ್ಘಾಟನೆ – Kundapra.com ಕುಂದಾಪ್ರ ಡಾಟ್ ಕಾಂ

    2. Pingback: ಬೈಂದೂರು ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಮಾರ್ಚ್ 15ಕ್ಕೆ ಉದ್ಘಾಟನೆ – Kundapra.com ಕುಂದಾಪ್ರ ಡಾಟ್ ಕಾಂ

    Leave A Reply Cancel Reply

    twenty − seven =

    Call us

    Click Here

    Call us

    Call us

    Call us
    Highest Viewed Recently
    • ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ
    • ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.