Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಾಡಹಗಲೇ ಸರಗಳ್ಳತನ: ಪೊಲೀಸರೆದುರೇ ಪರಾರಿಯಾದ ಕಳ್ಳರು
    ಅಪಘಾತ-ಅಪರಾಧ ಸುದ್ದಿ

    ಹಾಡಹಗಲೇ ಸರಗಳ್ಳತನ: ಪೊಲೀಸರೆದುರೇ ಪರಾರಿಯಾದ ಕಳ್ಳರು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ: ತಾಲೂಕಿನ ತಲ್ಲೂರು ಬಸ್ ನಿಲ್ದಾಣದಲ್ಲಿ ಕುಂದಾಪುರ ಬರಲು ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಯೋರ್ವಳ ಕುತ್ತಿಗೆಯಿಂದ ಕರಿಮಣಿ ಸರವನ್ನು ಹರಿದ ಬೈಕಿನಲ್ಲಿ ಬಂದ ಆಗಂತುಕರು, ಪೊಲೀಸರಿಗೂ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ಘಟನೆ ಇಂದು ಮಧ್ಯಾಹ್ನದ ವರದಿಯಾಗಿದೆ.

    Click Here

    Call us

    Click Here

    ಘಟನೆಯ ವಿವರ:

    ಕುಂದಾಪುರ ತಾಲೂಕಿನ ನೇರಳಕಟ್ಟೆ ಹಿಲ್ಕೋಡುವಿನ ನಿವಾಸಿಯಾದ ತೇಜ ಗಾಣಿಗ ಹಾಗೂ ಅವರ ಪತ್ನಿ ಸೀತಾ ಗಾಣಿಗ ಎಂಬುವವರು ತಲ್ಲೂರಿನ ಅಶ್ವಿನಿ ಆಯುರ್ವೇದಿಕ್ ಆಸ್ಪತ್ರೆ ತೆರಳಿ ಅಲ್ಲಿಂದ ಕುಂದಾಪುರಕ್ಕೆ ತೆರಳುವ ಬಸ್ಸಿಗಾಗಿ ತಲ್ಲೂರಿನ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದರು. ಅದೇ ವೇಳೆಗೆ ಅಲ್ಲಿಗೆ ಕಪ್ಪು ಬಣ್ಣದ ೨೨೦ ಸಿಸಿ ಪಲ್ಸರ್ ಬೈಕಿನಲ್ಲಿ ಬಂದ ಮಧ್ಯ ವಯಸ್ಸಿನ ಯುವಕರೀರ್ವರು ಒಮ್ಮೆಲೆ ಸೀತಾ ಗಾಣಿಗ ಅವರ ಕತ್ತಿಗೆಗೆ ಕೈ ಹಾಕಿ ಅವರ ಕರಿಮಣಿ ಸರವನ್ನು ಎಗರಿಸಿ ಕೂಡಲೇ ಅಲ್ಲಿಂದ ಪರಾರಿಯಾಗಿದ್ದಾರೆ.

    ಪೊಲೀಸರಿಗೆ ಸರಗಳ್ಳತನದ ಮಾಹಿತಿ ದೊರಕುತ್ತಿದ್ದಂತೆ ಕುಂದಾಪುರದ ಶಾಸ್ತ್ರೀ ವೃತ್ತದ ಬಳಿ ನಾಕಬಂಧಿ ಹಾಕಿ ನಿಂತಿದ್ದರು. ಆದರೆ ಅತಿವೇಗದಿಂದ ಬಂದ ಬೈಕ್ ಸವಾರರು ಅಲ್ಲಿಯೂ ಬೈಕ್ ನಿಲ್ಲಿಸದೇ ಪರಾರಿಯಾಗಿದ್ದಾರೆ. ತಕ್ಷಣ ಅವರನ್ನು ಎರಡು ಪೊಲೀಸ್ ಜೀಪು ಹಾಗೂ ಇಂಟರ್‌ಸೆಪ್ಟರ್ ಮೂಲಕ ಬೆನ್ನತ್ತಿದರೂ ಕೂಡ ಅತಿವೇಗದಲ್ಲಿದ್ದ ಬೈಕನ್ನು ನಿಲ್ಲಿಸದೇ ನೋಡನೋಡುತ್ತಿದ್ದಂತೆಯೇ ಕಣ್ಮರೆಯಾಗಿದ್ದಾರೆ.

    ಕೂಡಲೇ ಕೋಟೇಶ್ವರ, ಕೋಟ, ಬಸ್ರೂರು-ಕಂಡ್ಲೂರು, ಶಂಕರನಾರಾಯಣ ಮುಂತಾದೆಡೆ ನಾಕಬಂಧಿ ಹಾಕಿದರೂ ಕೂಡ ಬೈಕ್ ಸವಾರರು ಎತ್ತ ಸಾಗಿದರು ಎಂಬುದು ಮಾತ್ರ ತಿಳಿಯಲಿಲ್ಲ.

    Click here

    Click here

    Click here

    Click Here

    Call us

    Call us

    ಇಂದು ಬೆಳಿಗ್ಗೆ ಬೈಕ್ ಸವಾರರು ಕಾರವಾರ, ಭಟ್ಕಳದಲ್ಲಿಯೂ ಸರಣಿ ಸರಗಳ್ಳತನಗೈದು ತಲ್ಲೂರಿನಲ್ಲಿಯೂ ಈ ಕೃತ್ಯ ಏಸಗಿದ್ದಾರೆ ಎನ್ನಲಾಗಿದೆ. ಕಳ್ಳರು ಕಪ್ಪು ಪಲ್ಸರ್ ಬೈಕಿನಲ್ಲಿ ಕಪ್ಪು ಬಣ್ಣದ ಅಂಗಿಯನ್ನು ಹಾಗೂ ಹೆಲ್ಮೆಟ್ ಧರಿಸಿದ್ದರು. ಕುಂದಾಪುರದ ಶಾಸ್ತ್ರೀ ವೃತ್ತದ ಬಳಿ ಇರುವ ಸಿಸಿ ಕ್ಯಾಮರಾದಲ್ಲಿ ಬೈಕ್ ಹೋಗಿರುವುದು ದಾಖಲಾಗಿದೆ.

    ಸೀತಾ ಗಾಣಿಗ ಕುಂದಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಹೆಚ್ಚಿನ ತನಿಕೆ ಕೈಗೊಂಡಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    05/03/2026
    Leave A Reply Cancel Reply

    nineteen − three =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.