Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬದಲಾಗುತ್ತಿರುವ ಜಗತ್ತಿಗೆ ನಮ್ಮನ್ನು ನಾವು ಸಿದ್ಧಪಡಿಸಿಕೊಳ್ಳಬೇಕು: ವಿವೇಕ್ ಆಳ್ವ
    alvas nudisiri

    ಬದಲಾಗುತ್ತಿರುವ ಜಗತ್ತಿಗೆ ನಮ್ಮನ್ನು ನಾವು ಸಿದ್ಧಪಡಿಸಿಕೊಳ್ಳಬೇಕು: ವಿವೇಕ್ ಆಳ್ವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದರೆ: ವಿದ್ಯಾರ್ಥಿಗಳು ಪಠ್ಯಪುಸ್ತಕಗಳಿಗೆ ಸೀಮಿತರಾಗದೇ ಹೆಚ್ಚಿನ ಜ್ಞಾನವನ್ನು ಪಡೆಯಲು ಉತ್ಸುಕರಾಗಿರಬೇಕು. ಕಲಿಕೆಯಲ್ಲಿ ಯಾವುದೇ ವಿಷಯದ ಬಗ್ಗೆ ಆಳವಾದ ಅಧ್ಯಯನ ಮತ್ತು ಅದರ ಸೃಜನಶೀಲ ಪ್ರಸ್ತುತಿ ಮುಖ್ಯವಾದದ್ದು. ಬದಲಾಗುತ್ತಿರುವ ಜಗತ್ತಿಗೆ ನಮ್ಮನ್ನು ನಾವು ಸಿದ್ಧಪಡಿಸಿಕೊಳ್ಳಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜ್‌ಮೆಂಟ್ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.

    Click Here

    Call us

    Click Here

    ಅವರು ಆಳ್ವಾಸ್ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಆಯೋಜಿಸಲಾದ ‘ಸವ್ಯಸಾಚಿ-2021’ ರಸಪ್ರಶ್ನೆ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

    ಹೆಚ್ಚಿನ ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ತಮ್ಮ ಪಿಯು ಹಂತವನ್ನು ಸರಿಯಾಗಿ ಗ್ರಹಿಸುವಲ್ಲಿ ಎಡವುತ್ತಾರೆ. ಮುಂದಿನ ಶಿಕ್ಷಣದ ಹಾದಿಗಳ ಬಗ್ಗೆ ಅವರಿಗೆ ಹೆಚ್ಚಿನ ಮಾಹಿತಿಯಿರುವುದಿಲ್ಲ. ಇದು ಭವಿಷ್ಯದಲ್ಲಿ ಅವರಿಗೆ ಸವಾಲಾಗಬಹುದು. ಆದ್ದರಿಂದ ಪಿಯು ಹಂತದಲ್ಲಿ ಕೌಶಲ್ಯಾಧಾರಿತ ಶಿಕ್ಷಣವನ್ನು ನೀಡಬೇಕು’ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್  ಚಿಕ್ಕಂದಿನಿಂದಲು ಹೆತ್ತವರು ತಮ್ಮ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ, ಆದರೆ ಪ್ರತೀ ವಿದ್ಯಾರ್ಥಿಯು 18 ವಯಸ್ಸಿನ ನಂತರ ತಾವೇನಾಗಬೇಕೆಂಬ ನಿರ್ಧಾರವನ್ನು ತಾವೇ ತೆಗೆದುಕೊಳ್ಳುವಂತಾಗಬೇಕು. ಪದವಿ ಪೂರ್ವ ಶಿಕ್ಷಣದ ಬಳಿಕ ನೂರಾರು ದಾರಿಗಳಿರುತ್ತವೆ ಆದರೆ ನಾವು ಯಾವುದನ್ನು ಆಯ್ಕೆ ಮಾಡಬೇಕೆಂಬ ಅರಿವು ನಮಗಿರಬೇಕು ಎಂದು ಹೇಳಿದರು.

    ಕ್ವಿಝ್ ಮಾಸ್ಟರ್ ಸುಮಂತ್ ಪೂಜಾರಿ ಕ್ವಿಝ್ ನಡೆಸಿಕೊಟ್ಟರು. ಕಾಮರ್ಸ್ ವಿಭಾಗದ ಸಂಯೋಜಕಿ ಶರ್ಮಿಳಾ ಕುಂದರ್ ಸ್ವಾಗತಿಸಿದರು. ತೃತಿಯ ಬಿ.ಕಾಂ ವಿದ್ಯಾರ್ಥಿನಿ ಶರಣ್ಯದೇವಿ ನಿರೂಪಿಸಿದರು. ಕಾಮರ್ಸ್ ವಿಭಾಗದ ಕಾರ್ಯಕ್ರಮ ಸಂಯೋಜಕ ಬಾಲಕೃಷ್ಣ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕಾಲೇಜುಗಳಿಂದ ಒಟ್ಟು 54 ತಂಡಗಳಿಂದ 112 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಆಳ್ವಾಸ್ ಪಿಯು ಕಾಲೇಜಿನ ಆಯುಷ್ ಮಂಜುನಾಥ್ ಹಾಗೂ ಪ್ರಜ್ವಲ್ ಹಿರೇಮಠ ಪ್ರಥಮ, ರೋಟರಿ ಪಿಯು ಕಾಲೇಜಿನ ಹರ್ಷಿತ್ ಹಾಗೂ ಚಿನ್ಮಯಿ ದ್ವಿತೀಯ ಹಾಗೂ ಜ್ಞಾನಸುಧಾ ಕಾಲೇಜಿನ ವಿನೀತ್ ಕಿಣಿ ಹಾಗೂ ಸೃಜನ್ ತೃತೀಯ ಸ್ಥಾನವನ್ನು ಪಡೆದರು. ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಪಡೆದ ತಂಡಗಳಿಗೆ ಕ್ರಮವಾಗಿ ರೂ 3000, ರೂ2000, ರೂ 1000ವನ್ನು ನೀಡಲಾಯಿತು. ವಿಜೇತ ವಿದ್ಯಾರ್ಥಿಗಳಿಗೆ ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಬಹುಮಾನ ವಿತರಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ

    18/12/2025

    ಖೋ-ಖೋ ಟೂರ್ನಮೆಂಟ್: ಆಳ್ವಾಸ್ ಅವಳಿ ವಿಭಾಗಗಳಲ್ಲಿ ಸಮಗ್ರ ಚಾಂಪಿಯನ್ಸ್

    13/12/2025

    ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್: ಆಳ್ವಾಸ್ ಮಹಿಳಾ ತಂಡಕ್ಕೆ ಸಮಗ್ರ ಪ್ರಶಸ್ತಿ

    08/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.