ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ರಾಮಕೃಷ್ಣ ಪರಮಹಂಸರ 186ನೇ ಜನ್ಮ ಜಯಂತಿ ಅಂಗವಾಗಿ ಸೋಮವಾರ ಏಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಿದವು.
ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಪ್ರಾತಃಪೂಜೆ, ಭಜನೆ, ಉಪನಿಷತ್ ಪಠಣ, ಚಂಡಿಕಾ ಪಾರಾಯಣ, ಪೂಜೆ ಹಾಗೂ ಪ್ರಸಾದ ವಿತರಣೆ, ಏಳಜಿತ ಶಾಲಾ ವಿದ್ಯಾರ್ಥಿಗಳಿಂದ ಶ್ರೀ ಭಗವದ್ಗೀತೆ ಹಾಗೂ ಶ್ರೀ ವಿಷ್ಣುಸಹಸ್ರನಾಮ ಪಠಣ, ಮಧ್ಯಾಹ್ನ ಸ್ಥಳೀಯ ಶಾಲೆಗಳಲ್ಲಿ ಶ್ರೀ ರಾಮಕೃಷ್ಣರ ಜನ್ಮ ಜಯಂತಿ ಆಚರಣೆ ನಡೆಯಿತು.