Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಂಡಾರ್ಕಾರ್ಸ್ ಕಾಲೇಜಿನಲ್ಲಿ ‘ನೆರೆಹೊರೆ – ಯುವಸಂಸತ್ತು’ ಕಾರ್ಯಾಗಾರ
    ಕ್ಯಾಂಪಸ್ ಕಾರ್ನರ್

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ‘ನೆರೆಹೊರೆ – ಯುವಸಂಸತ್ತು’ ಕಾರ್ಯಾಗಾರ

    Updated:20/03/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ರೆಡ್‌ಕ್ರಾಸ್ ಘಟಕ ಮತ್ತು ಭಾರತ ಸರಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಮತ್ತು ನೆಹರು ಯುವಕೇಂದ್ರ, ಉಡುಪಿ ಇವರ ಸಹಯೋಗದಲ್ಲಿ ‘ನೆರೆಹೊರೆ – ಯುವಸಂಪತ್ತು’ ಎಂಬ ಒಂದು ದಿನದ ಕಾರ್ಯಾಗಾರ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಡಾ.ಜಿ.ಎಂ.ಗೊಂಡ ಅವರು ಇಂದಿನ ದಿನಗಳಲ್ಲಿ ನೀರಿನ ಅಭಾವ ಮಿತಿಮೀರಿದೆ ಎಲ್ಲಿ ನೋಡಿದರೂ ಅಂತರ್ಜಲ ಮಟ್ಟ ಕುಸಿದು ನಗರ ಗ್ರಾಮ ಎಂಬ ಭೇದವೆನ್ನದೆ ನೀರಿನ ಕೊರತೆ ಅತಿದೊಡ್ಡ ಸಮಸ್ಯೆಯಾಗಿದೆ. ಇಂತಹ ಸಂದರ್ಭದಲ್ಲಿ ನೀರಿನ ಕೊರತೆ ನೀಗಿಸುವ ಪಾಯಗಳನ್ನು ಹುಡುಕುವ ನಿಟ್ಟಿನಲ್ಲಿ ನಡೆಯುತ್ತಿರುವ ಮಳೆಕೊಯ್ಲು ಕುರಿತ ವಿಷಯ ಇಂದಿನ ವಿದ್ಯಾರ್ಥಿಗಳಿಗೆ ತೀರಾ ಅಗತ್ಯವಾಗಿದೆ. ಇದು ಖಂಡಿತ ವಿದ್ಯಾರ್ಥಿಗಳಿಗೆ ತುಂಬಾ ಉಪಯುಕ್ತ ಕಾರ್ಯಕ್ರಮವಾಗಿದೆ. ವಿದ್ಯಾಥಿಜೀವನದಲ್ಲಿ ಕೇವಲ ಅಂಕಗಳಿಗೆ ಮೀಸಲಾಗಿರದೇ ಯಾವುದೇ ಕಾರ್ಯಕ್ರಮಗಳಲ್ಲಿ ಬಾಗವಹಿಸುವ ಅವಕಾಶಗಳನ್ನು ಉಪಯೋಗಿಸಿಕೊಂಡು ನಿಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ವ್ಯಕ್ತಿತ್ವ ವಿಕಸನ ಸಹ ತುಮಬಾ ಉಪಯುಕ್ತ ಮತ್ತು ವಿದ್ಯಾರ್ಥಿಗಳಿಗೆ ನೆರವಾಗುತ್ತದೆ. ಹಾಗೆಯೇ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಬದುಕು ಕಂಡುಕೊಳ್ಳುವ ದಾರಿಗಳನ್ನು ಹುಡುಕಿಕೊಳ್ಳಬೇಕು. ಆ ದಿಶೆಯಲ್ಲಿ ಉದ್ಯಮಶೀಲತೆ ಮತ್ತು ಸರಕಾರದಿಂದ ಸವಲತ್ತುಗಳ ಕುರಿತು ತಿಳಿದುಕೊಳ್ಳಬೇಕಾಗುತ್ತದೆ. ಹಾಗೆಯೇ ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಬಹಳವಿದೆ ಅದನ್ನು ಇಂದಿನ ಯುವಜನತೆ ತಿಳಿದುಕೊಳ್ಳಬೇಕು ಮತ್ತು ತಮ್ಮ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಬೇಕು ಎಂದು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ ಮಾತನಾಡಿ ಈ ವರ್ಷ ಭಾರತ ಸ್ವಾತಂತ್ರಯೋತ್ಸವದ 75ನೇ ದಿನಾಚರಣೆಯ ಅಮೃತಮಹೋತ್ಸವ ಆಚರಣೆಯನ್ನು ಆಜಾದಿ ಕಾ ಅಮೃತಮಹೋತ್ಸವ ಎಂಬ ಶೀರ್ಷಿಕೆ ಅಡಿಯಲ್ಲಿ ತುಂಬಾ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳು ನಡೆಯಲಿವೆ. ಅದರಲ್ಲಿ ಈ ಕಾರ್ಯಕ್ರಮವು ಸಹ ಒಂದಾಗಿದೆ ಎಂದು ಹೇಳಿದರು.

    ನಂತರ ನಡೆದ ವಿವಿಧ ಗೋಷ್ಠಿಗಳಲ್ಲಿ ಮಳೆನೀರಿನ ಕೊಯ್ಲು-ಜಲಸಂಪತ್ತಿನ ಅಭಿಯಾನವನ್ನು ರಾಜ್ಯಪ್ರಶಸ್ತಿ ಪುರಸ್ಕೃತ ಜೋಸೆಫ್ ಜಿ.ಎಮ್.ರೆಬೆಲ್ಲೊ ನಡೆಸಿಕೊಟ್ಟರು.

    ರುಡ್ ಸೆಟ್ ಇದರ ಉಪನ್ಯಾಸಕರಾದ ಕರುಣಾಕರ ಜೈನ್ ಅವರು ಉದ್ಯಮಶೀಲತೆ ಹಾಗೂ ಸರಕಾರದಿಂದ ಸಿಗುವ ಸವಲತ್ತುಗಳು ಕುರಿತು ಮಾಹಿತಿ ನೀಡಿದರು.

    Click here

    Click here

    Click here

    Click Here

    Call us

    Call us

    ಜೆಸಿಐ ರಾಜ್ಯ ನಿರ್ದೇಶಕರಾದ ರಾಘವೇಂದ್ರ ಕಾರವಾಲ್ ಅವರು ದೈನಂದಿನ ಜೀವನದಲ್ಲಿ ಯೋಗ ಮತ್ತು ಅದರ ಪ್ರಾಮುಖ್ಯತೆ ಕುರಿತು ಮಾತನಾಡಿದರು.

    ಮಹಾವಿಷ್ಣು ಯುವಕ ಮಂಡಲ(ರಿ), ಹರೆಗೋಡು,ಕಟ್‌ಬೆಳ್ತೂರು ಇದರ ಅಧ್ಯಕ್ಷರಾದ ನರಸಿಂಹ ಗಾಣಿಗ ದೇಶದ ಅಭಿವೃದ್ಧಿಯಲ್ಲಿ ಯುವಕ ಯುವತಿ ಮಂಡಳಿಗಳ ಪಾತ ಕುರಿತು ತಿಳಿಸಿದರು.

    ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಭಂಡಾರ್ಕಾರ‍್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿಗಳಾದ ಅರುಣ್ ಎಸ್.ಮತ್ತು ಕಾಲೇಜಿನ ರೆಡ್ ಕ್ರಾಸ್ ಘಟಕದ ಪ್ರೊ. ಸತ್ಯನಾರಾಯಣ ಹತ್ವಾರ್ ಉಪಸ್ಥಿತರಿದ್ದರು.

    ನೆಹರು ಯುವಕೇಂದ್ರ,ಉಡುಪಿ ಇದರ ಜಿಲ್ಲಾ ಯುವ ಸಮನ್ವಯ ಅಧಿಕಾರಿಗಳಾದ ವಿಲ್‌ಫ್ರೆಡ್ ಡಿಸೋಜ ಪ್ರಾಸ್ತಾವಿಕವಾಗಿ ಮಾತನಾಡಿದರು ಮತ್ತು ವಂದಿಸಿದರು. ಪ್ರಶಾಂತ್ ಕಾರ್ಯಕ್ರಮ ನಿರ್ವಹಿಸಿದರು. ವೈಷ್ಣವಿ ಪ್ರಾರ್ಥಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026
    Leave A Reply Cancel Reply

    thirteen − seven =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.