Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಮ್ಮಭೂಮಿಯಲ್ಲಿ ಸ್ವಉದ್ಯೋಗ ಮಾಹಿತಿ ಕಾರ್ಯಾಗಾರ
    ಊರ್ಮನೆ ಸಮಾಚಾರ

    ನಮ್ಮಭೂಮಿಯಲ್ಲಿ ಸ್ವಉದ್ಯೋಗ ಮಾಹಿತಿ ಕಾರ್ಯಾಗಾರ

    Updated:27/03/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಸೆಲ್ಕೋ ಎನರ್ಜಿ, ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ ಮಣಿಪಾಲ, ತೋಟಗಾರಿಕೆ ಇಲಾಖೆ ಕುಂದಾಪುರ, ಪಶು ವೈದ್ಯಾಧಿಕಾರಿಗಳು ಕುಂದಾಪುರ ಮತ್ತು ವರ್ಕಿಂಗ್ ಚಿಲ್ಡ್ರನ್(ಸಿಡಬ್ಲ್ಯೂಸಿ) ಸಂಸ್ಥೆಯ ಜಂಟಿ ಸಹಭಾಗಿತ್ವದಲ್ಲಿ ಸ್ಥಳೀಯ ಸಮುದಾಯಕ್ಕೆ ಸ್ವ ಉದ್ಯೋಗದ ಮಾಹಿತಿ ಕಾರ್ಯಾಗಾರ ನಮ್ಮಭೂಮಿಯಲ್ಲಿ ನಡೆಯಿತು.

    Click Here

    Call us

    Click Here

    ಸೆಲ್ಕೋ ಎನರ್ಜಿ ಸಂಸ್ಥೆಯ ಗುರುಪ್ರಕಾಶ ಶೆಟಿ, ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯ ಉಪನ್ಯಾಸಕಿ ನವ್ಯ, ಸಿಡಬ್ಲ್ಯೂಸಿ ಸಂಸ್ಥೆಯ ನಿರ್ದೇಶಕರಾದ ಶಿವಮೂರ್ತಿ ಭಂಡಾರ್ಕರ್ ಮತ್ತು ನಮ್ಮ ಭೂಮಿಯ ಮಕ್ಕಳ ಪಂಚಾಯತ್‌ನ ಅಧ್ಯಕ್ಷರಾದ ಪ್ರೀತಮ್ ಸೇರಿ ಗಿಡಕ್ಕೆ ಗೊಬ್ಬರ ಮತ್ತು ನೀರು ಹಾಕುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

    ಸೇಲ್ಕೋ ಎನರ್ಜಿಯ ಗುರುಪ್ರಕಾಶ ಶೆಟ್ಟಿ ಮಾತನಾಡಿ, ಹಳ್ಳಿಯಲ್ಲಿ ದಿನನಿತ್ಯದ ಬಳಕೆಯ ವಸ್ತುಗಳನ್ನು ಪಟ್ಟಿ ಮಾಡಿ ಅದರಲ್ಲಿ ಹೆಚ್ಚು ಹೆಚ್ಚು ವಸ್ತುಗಳು ಹಳ್ಳಿಯಲ್ಲಿಯೇ ಉತ್ಪಾದಿಸುವಂತಾದರೆ ಹಳ್ಳಿಯ ಜನ ವಲಸೆ ಹೊಗುವುದನ್ನು ತಪ್ಪಿಸಬಹುದು ಮತ್ತು ಹಳ್ಳಿಯಲ್ಲಿಯೇ ಸ್ವಾವಲಂಬಿ ಜೀವನ ನಡೆಸಬಹುದು ಎಂದರು.

    ಮಣಿಪಾಲ ಮಣಿಪಾಲ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯ ಉಪನ್ಯಾಸಕರಾದ ನವ್ಯ ಮಾತನಾಡಿ, ಸ್ವಉದ್ಯೋಗದ ಬಗ್ಗೆ ಇರುವ ಹಿಂಜರಿಕೆ ಮತ್ತು ಕೀಳರಿಮೆ ಭಾವನೆಗಳನ್ನು ತೆಗೆದು ಹಾಕಿ ಆತ್ಮವಿಶ್ವಾಸದಿಂದ ಸ್ವಉದ್ಯೋಗವನ್ನು ಪ್ರಾರಂಭಿಸಿ ಎಂದು ಹೇಳುತ್ತಾ ಇಂದಿನ ದಿನಗಳಲ್ಲಿ ಸ್ವ ಉದ್ಯೋಗ ಅನಿವಾರ್ಯವಾಗಿದೆ ಎಂದು ತಿಳಿಸಿ ಮನೆಯಲ್ಲಿಯೇ ಕುಳಿತು ಮಾಡುವ ಉದ್ಯೋಗಗಳ ಮಾಹಿತಿಯನ್ನು ನೀಡಿದರು.

    ಕುಂದಾಪುರ ಪಶು ವೈದ್ಯಾಧಿಕಾರಿ ಡಾ. ಸಂತೋಷ ಮಾತನಾಡಿ, ಹೈನುಗಾರಿಕೆ ಮತ್ತು ಕೋಳಿ ಸಾಕಾಣಿಕೆಯಲ್ಲಿ ಸ್ವಚ್ಛತೆ ಮತ್ತು ಪೌಷ್ಠಿಕ ಆಹಾರ ನೀಡುವುದು ಹಾಗೂ ಈ ಉದ್ಯೋಗದಿಂದ ಆಗುವ ಲಾಭದ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು.

    Click here

    Click here

    Click here

    Click Here

    Call us

    Call us

    ಕುಂದಾಪುರ ತೋಟಗಾರಿಕೆ ಇಲಾಖೆಯ ಕಿರಿಯ ಸಹಾಯಕ ನಿದೇರ್ಶಕರಾದ ಸಂಜೀವ ನಾಯ್ಕ್ ಮಾತನಾಡಿ, ಕೃಷಿ ಪೂರಕ ಉದ್ಯೋಗಗಳು ಹಾಗೂ ಸರಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ನೀವು ಮಾಡುವ ಕೆಲಸದಲ್ಲಿ ಸಂತೋಷವನ್ನು ಕಾಣಬೇಕು ಆಗ ಮನಸ್ಸಿಗೆ ತೃಪ್ತಿ ಸಿಗುತ್ತದೆ ಎಂದು ಸಲಹೆ ಇತ್ತರು.

    ಸಮುದಾಯದವರು ಸ್ವ ಉದ್ಯೋಗದಲ್ಲಿ ಶಿಕ್ಷಣದ ಅವಶ್ಯಕತೆ, ಸರಕಾರದ ಸವಲತ್ತುಗಳು ಹಾಗೂ ಹೈನುಗಾರಿಕೆಯಲ್ಲಿ ಮತ್ತು ಕೋಳಿ ಸಾಕಾಣಿಕೆಯಲ್ಲಿ ಆಹಾರ ಪದ್ದತಿ ಮತ್ತು ಲಾಭಾಂಶದ ಕುರಿತು ಪ್ರಶ್ನೋತ್ತರ ಚಟುವಟಿಕೆ ನಡೆಯಿತು.

    ಈ ಕಾರ್ಯಕ್ರಮದಲ್ಲಿ ಸ್ಥಳೀಯ ಸಮುದಾಯದ ಮಹಿಳೆಯರು, ಪುರುಷರು ಮತ್ತು, ನಮ್ಮಭೂಮಿಯ ತರಬೇತಿ ಮಕ್ಕಳು, ಸಂಸ್ಥೆಯ ಕಾರ್ಯಕರ್ತರು ಸೇರಿ ಒಟ್ಟೂ70ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    10 + eighteen =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.