Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅತ್ತಿಹಳ್ಳಿ ನುಡಿ ಪ್ರತಿಷ್ಠಾನ ಉದ್ಘಾಟನೆ
    ರಾಜ್ಯ

    ಅತ್ತಿಹಳ್ಳಿ ನುಡಿ ಪ್ರತಿಷ್ಠಾನ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಹಂಪಿ: ಮಲೆನಾಡಿನ ದಟ್ಟವಾದ ಕಾಡುಗಳ ಮಧ್ಯೆ ಇರುವ ಸಕಲೇಶಪುರ ತಾಲೂಕಿನ ಅತ್ತಿಹಳ್ಳಿ ಗ್ರಾಮದಲ್ಲಿರುವ ನುಡಿ ಪ್ರತಿಷ್ಠಾನವು ಕನ್ನಡೇತರರಿಗೆ ಆನ್‌ಲೈನ್ ಮೂಲಕ ಕನ್ನಡ ಕಲಿಸುವ ಮಹತ್ಕಾರ್ಯದ ಜೊತೆಗೆ ಪುಸ್ತಕ ಪ್ರಕಟಣೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಕನ್ನಡವನ್ನು ಸಾಗರದಾಚೆಗೂ ವಿಸ್ತರಿಸಲು ಹೊರಟಿರುವುದು ಶ್ಲಾಘನೀಯ ಎಂದು ವಿಜಯನಗರ ಜಿಲ್ಲೆಯ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸ. ಚಿ. ರಮೇಶ್ ಮೆಚ್ಚುಗೆ ವ್ಯಕ್ತಪಡಿಸಿದರು.

    Click Here

    Call us

    Click Here

    ಅವರು ಇತ್ತೀಚೆಗೆ ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭಾಂಗಣದಲ್ಲಿ ಆನ್‌ಲೈನ್ ಮೂಲಕ ಹಾಸನ ಜಿಲ್ಲೆಯ ಅತ್ತಿಹಳ್ಳಿ ಗ್ರಾಮದಲ್ಲಿರುವ ನುಡಿ ಪ್ರತಿಷ್ಠಾನವನ್ನು ಉದ್ಘಾಟಿಸಿ ಮಾತನಾಡಿದರು.

    ಅನ್ಯರಿಗೆ ನಮ್ಮ ಸಂಸ್ಕೃತಿಯನ್ನು, ಕನ್ನಡ ಪರ ಚಿಂತನೆಗಳನ್ನು ಪರಿಚಯಿಸುವ ಕಾರ್ಯ ಮುಖ್ಯವಾದುದು. ಕನ್ನಡವನ್ನು ಕಟ್ಟುವ ಕಾರ್ಯ ಇಂದು ವಿವಿಧ ನೆಲೆಗಳಲ್ಲಿ ಆಗಬೇಕಿದೆ. ಈ ಮೂಲಕ ಯುವ ಪೀಳಿಗೆಯನ್ನು ರಾಷ್ಟ್ರಕಟ್ಟುವ ಕಾರ್ಯದಲ್ಲಿ ಕೈಜೋಡಿಸಲು ಸನ್ನದ್ಧಗೊಳಿಸಬೇಕಾದ ತುರ್ತು ಇಂದು ನಮ್ಮ ಮುಂದಿದೆ. ಒಟ್ಟಿನಲ್ಲಿ ಶಿಕ್ಷಣದ ಮೂಲಕ ಪ್ರಜ್ಞಾವಂತ ನಾಗರೀಕರನ್ನು ತಯಾರು ಮಾಡಬೇಕು ಎಂದು ಅಭಿಪ್ರಾಯಪಟ್ಟರು.

    ನುಡಿ ಪ್ರತಿಷ್ಠಾನದ ಸಾಮಾಜಿಕ ಜಾಲತಾಣಗಳನ್ನು ಸಕ್ರಿಯಗೊಳಿಸಿದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಎ. ಸುಬ್ಬಣ್ಣ ರೈ ಮಾತನಾಡಿ, ಕನ್ನಡೇತರರಿಗೆ ಕನ್ನಡ ಕಲಿಸುವ ಕಾರ್ಯದಲ್ಲಿ ಈಗಾಗಲೇ ತನ್ನನ್ನು ತೊಡಗಿಸಿಕೊಂಡಿರುವ ನುಡಿ ಪ್ರತಿಷ್ಠಾನವು ಸಾಹಿತ್ಯಿಕ ಮತ್ತು ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಸಿಕೊಳ್ಳಲು ಮುಂದಡಿ ಇಟ್ಟಿರುವ ವಿಚಾರ ಅಬಿನಂದನಾರ್ಹ ಎಂದರು.

    ಭಾರತ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದಿಂದ ಪ್ರತಿಷ್ಠಾನವು ಪಡೆದ ನೋಂದಣಿ ಪ್ರಮಾಣಮತ್ರವನ್ನು ಅನಾವರಣಗೊಳಿಸಿ ಮಾತನಾಡಿದ ವಿಶ್ವವಿದ್ಯಾಲಯದ ಅಧ್ಯಯನಾಂಗದ ನಿರ್ದೇಶಕ ಪ್ರೊ. ಪಿ. ಮಹಾದೇವಯ್ಯ; ಪ್ರತಿಷ್ಠಾನವು ಆರಂಭದ ದಿನಗಳಿಂದಲೂ ಕನ್ನಡ ಕಲಿಸುವ ಜವಾಬ್ದಾರಿಯನ್ನು ನಿಭಾಯಿಸಿಕೊಂಡು ಬಂದಿರುವ ನುಡಿ ಪ್ರತಿಷ್ಠಾನವು ಪುಸ್ತಕ ಪ್ರಕಟಣೆಯ ಮೂಲಕವೂ ಕನ್ನಡ ಸಂಸ್ಕೃತಿಯ ಪಸರಣೆಯನ್ನು ಮಾಡುವ ಹೊಣೆಯನ್ನು ಹೊಂದಿದೆ ಎಂದು ಅಭಿಪ್ರಾಯಿಸಿದರು.

    Click here

    Click here

    Click here

    Call us

    Call us

    ನುಡಿ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರಜ್ವಲ್ ಎ. ಪಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಯಕ್ರಮದಲ್ಲಿ ವಿಶ್ವವಿದ್ಯಾಲಯದ ಆಡಳಿತ ವರ್ಗವನ್ನು ಪ್ರತಿಷ್ಠಾನದ ಪರವಾಗಿ ಗೌರವಿಸಲಾಯಿತು. ಸಂಶೋಧನಾರ್ಥಿಗಳಾದ ಸುವರ್ಣಮ್ಮ ಕೆ. ನಿರೂಪಿಸಿದ ಕಾರ್ಯಕ್ರಮವನ್ನು ಡಾ. ರಕ್ಷಿತ್ ಸ್ವಾಗತಿಸಿ, ಕು. ಯಲ್ಲವ್ವ ಹೆಬ್ಬಳ್ಳಿ ವಂದಿಸಿದರು. ಕಾರ್ಯಕ್ರಮದಲ್ಲಿ ವಿಜ್ಞಾನ ನಿಕಾಯದ ಡೀನರಾದ ಡಾ. ಮಾಧವ ಪೆರಾಜೆ, ವಿವಿಯ ಪ್ರಾಧ್ಯಾಪಕ ವರ್ಗ ಮತ್ತು ಬೋಧಕೇತರ ಸಿಬ್ಬಂದಿಗಳು ಮತ್ತು ನಾಡಿನ ವಿವಿಧೆಡೆಯಿಂದ ಹಲವು ಶಿಕ್ಷಣಾಸಕ್ತರು ಭಾಗವಹಿಸಿದ್ದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಆತಿಥ್ಯ ನೀಡುವುದರಲ್ಲಿ ಬಂಟ ಸಮುದಾಯ ಪ್ರಸಿದ್ಧಿ: ಬೆಳಗಾವಿ ಬಂಟರ ಭವನ ಉದ್ಘಾಟಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

    15/06/2025

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ

    08/04/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ
    • ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ
    • ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.