Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿನುತಾ ವಿಶ್ವನಾಥ್ ಅವರ ‘ಹುಣ್ಸ್‌ಮಕ್ಕಿ ಹುಳ’ ಪುಸ್ತಕ ಬಿಡುಗಡೆ
    ಊರ್ಮನೆ ಸಮಾಚಾರ

    ವಿನುತಾ ವಿಶ್ವನಾಥ್ ಅವರ ‘ಹುಣ್ಸ್‌ಮಕ್ಕಿ ಹುಳ’ ಪುಸ್ತಕ ಬಿಡುಗಡೆ

    Updated:29/03/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ರಂಗಭೂಮಿ ಕಲಾವಿದೆ, ಲೇಖಕಿ ವಿನುತಾ ವಿಶ್ವನಾಥ್ ಅವರ ‘ಹುಣ್ಸ್‌ಮಕ್ಕಿ ಹುಳ’ ಪುಸ್ತಕ ಬೆಂಗಳೂರಿನ ಫಿಡಿಲೆಟಸ್ ಗ್ಯಾಲರಿಯಲ್ಲಿ ಬಿಡುಗಡೆಗೊಂಡಿತು.

    Click Here

    Call us

    Click Here

    ಹೂವಿನಹೊಳೆ ಪ್ರತಿಷ್ಠಾನ ಬೆಂಗಳೂರು, ಫಿಡಿಲಿಟಸ್ ಗ್ಯಾಲರಿ, ಶಿಲ್ಪ ಫೌಂಡೇಶನ್, ಸುದಯ ಟ್ರಸ್ಟ್ ಬೆಂಗಳೂರು ಸಹಕಾರದೊಂದಿಗೆ ಭಾನುವಾರ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಈ ಪುಸ್ತಕ ಬಿಡುಗಡೆಗೊಂಡಿತು.

    ಲೇಖಕ, ಪತ್ರಕರ್ತ ಜೋಗಿ ಅವರು ಕಾರ್ಯಕ್ರಮದಲ್ಲಿ ಮಾತನಾಡಿ ಒಂದು ದಿನದಲ್ಲಿ ಎರಡು ಬಾರಿ ಓದಿದ್ದೇನೆ. ಮೊದಲ ಬಾರಿ ಓದಿದಾಗ ಕಣ್ಣಂಚಲಿ ನೀರು ತುಂಬಿಕೊಂಡಿತ್ತು. ಎರಡನೇ ಬಾರಿ ಓದಿದಾಗ ಸಮಾಜದಲ್ಲಿ ವೃತ್ತಿ, ನೆಚ್ಚಿದ ಪ್ರೀತಿ, ಹಳ್ಳಿಯಿಂದ ನಗರಕ್ಕೆ ಬಂದಾಗ ಎದುರಾದ ಸಮಸ್ಯೆ, ನೋವು ಅಪಮಾನ ಇದನ್ನೆಲ್ಲೆ ಹೆದರಿಸಿ ಗೆಲ್ಲುತ್ತಿರುವ ದಿಟ್ಟ ಮಹಿಳೆಯನ್ನು ನೋಡಿದಂತಾಯಿತು ಎಂದರು.

    ಚಿತ್ರನಟ, ನಿರ್ದೇಶಕ ಸುಚೇಂದ್ರ ಪ್ರಸಾದ್ ಮಾತನಾಡಿ ಲೇಖಕಿಯ ಮೊದಲ ಪುಸ್ತಕವಿದು.. ಮುಂದೆ ಹೆಚ್ಚು ಹೆಚ್ಚು ಬರೆದು ಕನ್ನಡಕ್ಕೆ ಇನ್ನಷ್ಟು ಸೇವೆ ಮಾಡಲಿ. ಸೋದರಿ ಸುಮನ್ ಕಿತ್ತೂರು ಅವರು ಬೆನ್ನುಡಿ ಬರೆದುಕೊಟ್ಟಿದ್ದಾರೆ ತುಂಬಾ ಅರ್ಥಪೂರ್ಣವಾಗಿದೆ. ಅದನ್ನ ಓದಿದರೆ ಯಾರೇ ಆಗಲಿ ಒಳಗಿನ ಪುಟಗಳನ್ನು ಓದದೆ ಇರಲಾರರು ಎಂದರು.

    Click here

    Click here

    Click here

    Click Here

    Call us

    Call us

    ಗಾಯಕಿ ಅರ್ಚನಾ ಉಡುಪ ಮಾತನಾಡಿ ತಮ್ಮ ವೃತ್ತಿ ಜೀವನದಲ್ಲಿ ಯಶಸ್ಸಿನಲ್ಲಿರುವಾಗ ನಿರಂತರವಾಗಿ ಹಾಡಿ ಹಾಡಿ ಒಂದು ವರ್ಷ ಧ್ವನಿ ನಿಂತೋಗಿತ್ತು ಆಗ ಸಮಾಜ ನನ್ನ ಪ್ರತಿಭೆ ಬಗ್ಗೆ ಏನೇನೊ ಗಾಸಿಪ್ ಗಳು ಮಾತನಾಡಿದರು ಆಗ ಮನಸ್ಸಿಗೆ ತುಂಬಾ ನೋವಾಗಿತ್ತು.. ಆ ಒಂದು ವರ್ಷ ಅನುಭವಿಸಿದ ನೋವನ್ನು ಈ ಹುಡುಗಿ ಎಷ್ಟೋ ವರ್ಷಗಳಿಂದ ಅನುಭವಿಸಿಕೊಂಡು ಬಂದಿದ್ದಾಳೆ. ಗಟ್ಚಿಗಿತ್ತಿ ದೇವರು ಈಕೆಗೆ ಸಾಧಿಸಲು ಇನ್ನಷ್ಟು ಧೈರ್ಸ ಕೊಡಲಿ ಎಂದರು.

    ಚಿತ್ರನಟಿ ಸಮನ್ ನಗರ್ಕರ್ ಮಾತನಾಡಿ ಬರವಣಿಗೆ ಅಷ್ಟು ಸುಲಭವಾಗಿ ಎಲ್ಲರಿಗೂ ಒಲಿಯಲ್ಲ.. ಮನಸ್ಸಿನ ಮಾತನ್ನ ದಾಖಲಿಸೋದು ತುಂಬಾ ಕಷ್ಟ. ಪುಸ್ತಕವನ್ನು ಕೈಯಲ್ಲಿ ಹಿಡಿದು ಓದುವುದು ಕೊಡುವಷ್ಚು ಖುಷಿ.. ಮೊಬೈಲ್ನಲ್ಲಿ ಓದುವುದು ಕೊಡಲ್ಲ.. ನಾವು ಹೆಚ್ಚೆಚ್ಚು ಓದಬೇಕು. ನಾವು ಮಾಡಿದ ಸಾಧನೆಯನ್ನು ಹೇಳಿಕೊಳ್ಳುವುದು ಸುಲಭ.. ಮನಸ್ಸಿನ ನೋವನ್ನ ಸಮಾಜದ ಎದುರು ಹೇಳಿಕೊಳ್ಳೋದು ಕಷ್ಟ ಅದನ್ನ ಲೇಖಕಿ ವಿನುತಾ ಅವರು ಪ್ರಾಮಾಣಿಕವಾಗಿ ಹೇಳಿಕೊಂಡಿದ್ದಾರೆ.

    ನಟ ಶೈನ್ ಶೆಟ್ಟಿ, ಹಿರಿಯ ಲೇಖಕಿ ಗೀತಾ  ಬಿ.ಯು,‌ ಫಿಡಿಲಿಟಸ್ ಕಾರ್ಪ್ ಎಂಡಿ  ಅಚ್ಚುತ್ ಗೌಡ, ‌ ಮೀಡಿಯಾ ಕನೆಕ್ಟ್ ದಿವ್ಯ ರಂಗೇನಹಳ್ಳಿ,‌ ರೇಡಿಯೋ ಸಿಟಿ ಆರ್ಜೆ‌ ಸೌಜನ್ಯ, ನಂದಿ‌ ಹೂವಿನಹೊಳೆ, ಚೇತನ್ ಮಂಜುನಾಥ್ ಮೊದಲಾದವರು ವೇದಿಕೆಯಲ್ಲಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    19 − 18 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.