ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಮಂಗಳೂರು ವಿ.ವಿ. ಅಂತರ್ ಕಾಲೇಜು ಪುರುಷ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಕೂಟದ ಸಮಾರೋಪ ಸಮಾರಂಭ ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆಯಿತು.
ಕುಂದಾಪುರ ಎಜುಕೇಶನ್ ಸೊಸೈಟಿ(ರಿ.) ಕುಂದಾಪುರ ಇದರ ಕಾರ್ಯದರ್ಶಿಗಳಾದ ಸೀತಾರಾಮ ನಕ್ಕತ್ತಾಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕುಂದಾಪುರದ ಪ್ರತಿಷ್ಠಿತ ಚಕ್ರವರ್ತಿ ಸ್ಫೋರ್ಟ್ಸ್ ಮನೋಜ್ ನಾಯರ್ ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುದೀಪ್ ಶೆಟ್ಟಿ ಆಜ್ರಿ ಆಗಮಿಸಿದ್ದರು.
ಮಂಗಳೂರು ವಿ.ವಿ. ವ್ಯಾಪ್ತಿಯ 18 ಕಾಲೇಜುಗಳ ಕ್ರಿಕೆಟ್ ತಂಡಗಳು ಪಂದ್ಯಾಕೂಟದಲ್ಲಿ ಭಾಗವಹಿಸಿದ್ದು ಎಸ್.ಡಿ.ಎಮ್ ಕಾಲೇಜು, ಉಜಿರೆ ಚಾಂಪಿಯನ್ನಾಗಿ ಹಾಗೂ ಬ್ರಹ್ಮಾವರದ ಎಸ್.ಎಮ್.ಎಸ್ ಕಾಲೇಜು ರನ್ನರ್ ಅಪ್ ಆಗಿ ಹೊರಹೊಮ್ಮಿತು.
ಮಂಗಳೂರು ವಿ.ವಿ ಕ್ಯಾಂಪಸ್ನ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕ.ಸಂದೀಪ್ ಸರಣಿ ಶ್ರೇಷ್ಠ ಆಟಗಾರರಾಗಿ, ಎಸ್.ಡಿ.ಎಮ್ ಕಾಲೇಜಿನ ನವೀನ್ ಜೈನ್ ಉತ್ತಮ ದಾಂಡಿಗ ಹಾಗೂ ಎಸ್ .ಎಮ್. ಎಸ್ ಕಾಲೇಜಿನ ಹರೀಶ್ ಉತ್ತಮ ಎಸೆತಗಾರ ಪ್ರಶಸ್ತಿ ಪಡೆದುಕೊಂಡರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೋ ಕೆ. ಉಮೇಶ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಂಜಿತ್ ಟಿ .ಎನ್. ವಂದಿಸಿದರು. ವಾಣಿಜ್ಯ ಉಪನ್ಯಾಸಕರಾದ ರಕ್ಷಿತ್ ರಾವ್ ನಿರೂಪಿಸಿದರು.















