ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ನೂತನ ತಹಶೀಲ್ದಾರರಾಗಿ ಅಶೋಕ್ ಎನ್. ಭಟ್ ಅವರನ್ನು ನಿಯುಕ್ತಿಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
ಕುಮಟಾ ತಹಶೀಲ್ದಾರರ ಕಛೇರಿಯಲ್ಲಿ ಶಿರಸ್ತೇದಾರರಾಗಿದ್ದ ಅವರಿಗೆ ತಹಶೀಲ್ದಾರ್ ಗ್ರೇಡ್-2 ಭಡ್ತಿ ನೀಡಿ ಬೈಂದೂರು ತಾಲೂಕು ಕಛೇರಿಗೆ ವರ್ಗಾವಣೆ ಮಾಡಲಾಗಿದೆ. ಎ.ಎನ್. ಭಟ್ ಅವರು ಕುಮಟಾ ಶಾಸಕ ದಿನಕರ ಶೆಟ್ಟಿ ಅವರ ಆಪ್ತ ಸಹಾಯಕರಾಗಿ ಕಳೆದ ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.
ಬೈಂದೂರು ತಹಶೀಲ್ದಾರ್ ಬಸಪ್ಪ ಪೂಜಾರಿ ಅವರು ವರ್ಗಾವಣೆಯ ಬಳಿಕ ಬ್ರಹ್ಮಾವರದ ತಹಶೀಲ್ದಾರ್ ಕಿರಣ ಗೌರಯ್ಯ ಅವರು ಬೈಂದೂರಿನ ಪ್ರಭಾರ ತಹಶೀಲ್ದಾರರರಾಗಿ ಸೇವೆ ಸಲ್ಲಿಸುತ್ತಿದ್ದರು/ಕುಂದಾಪ್ರ ಡಾಟ್ ಕಾಂ ಸುದ್ದಿ/