ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ವೈದ್ಯಕೀಯ ಸೇವೆಯನ್ನು ಒದಗಿಸಲು ಅಗತ್ಯವಿರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಆರು ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಏಪ್ರಿಲ್ 7 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನರ ಕೊಠಡಿಯಲ್ಲಿ ನೇರ ಸಂದರ್ಶನ ನಡೆಯಲಿದ್ದು, ವೈದ್ಯರು/ ತಜ್ಞರ-10 ಹುದ್ದೆಗೆ (ವೇತನ-75000) ವಿದ್ಯಾರ್ಹತೆ- ಎಂ.ಬಿ.ಬಿ.ಎಸ್/ ತಜ್ಞತೆ (ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದಪದವಿ ಆಗಿರಬೇಕು) ಮತ್ತು ಶುಶ್ರೂಷಕರ -20 ಹುದ್ದೆಗೆ (ವೇತನ -25000) ವಿದ್ಯಾರ್ಹತೆ- ಕರ್ನಾಟಕ ಸರ್ಕಾರದ ನೊಂದಾಯಿತ ಸಂಸ್ಥೆಯಿಂದ ಜಿ.ಎನ್.ಎಂ/ ಬಿ.ಎಸ್ಸಿ ನರ್ಸಿಂಗ್ ಪದವಿ ಪಡೆದಿರಬೇಕು.
ಮೇಲ್ಕಂಡ ಹುದ್ದೆಗಳ ವಿದ್ಯಾರ್ಹತೆಗೆ ಸಂಬಧಿಸಿದ ಎಲ್ಲಾ ಅಂಕಪಟ್ಟಿಗಳ ಮೂಲ ಪ್ರತಿಗಳನ್ನು ನೇರ ಸಂದರ್ಶನಕ್ಕೆ ಹಾಜರಾಗುವಾಗ ತರಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸರ್ಜನ್, ಮೊ.ನಂ: 9449843181 ಅಥವಾ 0820-2530333 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ ಚಿಕಿತ್ಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.