Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನಸೇವೆ ಮಾಡಲು ವೈದ್ಯಕೀಯ ವೃತ್ತಿ ಉತ್ತಮ ಮಾರ್ಗ: ಡಾ. ಎಂ. ಮೋಹನ್ ಆಳ್ವ
    alvas nudisiri

    ಜನಸೇವೆ ಮಾಡಲು ವೈದ್ಯಕೀಯ ವೃತ್ತಿ ಉತ್ತಮ ಮಾರ್ಗ: ಡಾ. ಎಂ. ಮೋಹನ್ ಆಳ್ವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ: ವೈದ್ಯಕೀಯ ವೃತ್ತಿ ಒಂದು ವೃತ್ತಿ ಮಾತ್ರವಲ್ಲದೆ, ಜನರ ನಿಸ್ವಾರ್ಥ ಸೇವೆ ಮಾಡಲು ಇರುವ ಮಾರ್ಗ. ವೈದ್ಯಕೀಯ ಶಿಕ್ಷಣದಲ್ಲಿ ಪ್ರಮಾಣಪತ್ರ ಪಡೆದುಕೊಂಡು ಹೆಸರಿಗೆ ವೈದ್ಯರಾಗದೇ ಜನಸೇವೆ ಮಾಡಿ ಜನರಿಂದ ಮೆಚ್ಚುಗೆ ಪಡೆಯಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು.

    Click Here

    Call us

    Click Here

    ಮೂಡುಬಿದಿರೆಯ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಆಳ್ವಾಸ್ ಆಯುರ್ವೇದ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ನಡೆದ “ಸಂಪನ್ನಮ್” ಬೀಳ್ಕೊಡುಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಒಬ್ಬ ಜವಾಬ್ದಾರಿಯುತ ವೈದ್ಯನಾಗಿ ಕೆಲಸ ಮಾಡಿದಾಗ ಮಾತ್ರ, ಜನರಿಗೆ ವಿಶ್ವಾಸ ಮೂಡಲು ಸಾಧ್ಯ. ಲಾಭಕ್ಕಾಗಿ ಕೆಲಸ ಮಾಡದೇ ಜನರ ನಂಬಿಕೆ ಉಳಿಸಿಕೊಳ್ಳುವ ವೈದ್ಯರಾಗಬೇಕು ಎಂದು ಕಿವಿಮಾತು ಹೇಳಿದರು.

    ಮನುಷ್ಯ ಮಾಡುವ ತಪ್ಪಿನಿಂದ ಕೊರೋನಾದಂತಹ ಸಾಂಕ್ರಾಮಿಕ ರೋಗಗಳು ಬರುವುದು ಸಹಜ. ಹಾಗೆಂದು ಭಯಪಟ್ಟು ಪಲಾಯನ ಮಾಡುವುದರ ಬದಲು, ಅದನ್ನು ಎದುರಿಸಬೇಕು. ಓಡಿ ಹೋಗುವವರಾದರೆ, ವೈದ್ಯಕೀಯ ಪದವಿ ಪಡೆಯುವುದೇ ವ್ಯರ್ಥ” ಎಂದು ಹೇಳಿದ ಡಾ. ಆಳ್ವ, ಕೊರೊನಾ ಕುರಿತು ಜನಸಾಮಾನ್ಯರಿಗೆ ಹೆಚ್ಚಿನ ವೈದ್ಯಕೀಯ ಸಲಹೆಗಳನ್ನು ನೀಡುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿದರು.

    ಭಾರತದಲ್ಲಿ ಆಯುರ್ವೇದದ ಇತಿಹಾಸ ಅಗಾಧವಾಗಿದ್ದರೂ, ಸಮಾಜದಲ್ಲಿ ಅದಕ್ಕೆ ಸರಿಯಾದ ಪ್ರಾಮುಖ್ಯತೆ ಸಿಗಲಿಲ್ಲ. ಶತಮಾನಗಳ ಕಾಲ ಕೆಲವರ ಜ್ಞಾನಕ್ಕೆ ಸೀಮಿತವಾಗಿದ್ದ ಆಯುರ್ವೇದ ಇದೀಗ ಸಮಾಜದ ಮುಖ್ಯವಾಹಿನಿಗೆ ಬರುತ್ತಿದೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶೀ ಔಷಧಗಳಿಗೆ ಪ್ರಾಮುಖ್ಯತೆಯನ್ನು ನೀಡುತ್ತಿದೆ’ ಎಂದು ಅಭಿಪ್ರಾಯಪಟ್ಟರು.

    ಈ ಬೀಳ್ಕೊಡುಗೆ ಸಮಾರಂಭದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಡಾ.ಆಳ್ವ ಫಲಕ ಪ್ರದಾನ ಮಾಡಿದರು. ಬಳಿಕ, ವಿದ್ಯಾರ್ಥಿಗಳಾದ ಸುಮಯ್ಯ, ಅನುಷಾ ಮತ್ತು ಇಂದ್ರನೀಲ್, ಕಳೆದ ೫ ವರ್ಷದ ವಿದ್ಯಾರ್ಥಿ ಜೀವನದ ಅನುಭವವನ್ನು ಹಂಚಿಕೊಂಡರು.

    Click here

    Click here

    Click here

    Call us

    Call us

    ವಿದ್ಯಾರ್ಥಿ ವರ್ಗದ ಮಾರ್ಗದರ್ಶಕ ಡಾ.ವಿಕ್ರಂ, ಡಾ.ಮಂಜುನಾಥ್ ಭಟ್ ಕಾರ‍್ಯಕ್ರಮದಲ್ಲಿ ಉಪಸ್ಥಿತರಿದ್ದರು. ಆಳ್ವಾಸ್ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಸಚಿತ್ ಎಂ ಸ್ವಾಗತಿಸಿ, ಡಾ.ಕೆ.ಎನ್.ರಾಜಶೇಖರ್ ವಂದಿಸಿದರು. ಡಾ.ಗೀತಾ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    19/12/2025

    ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ

    18/12/2025

    ಖೋ-ಖೋ ಟೂರ್ನಮೆಂಟ್: ಆಳ್ವಾಸ್ ಅವಳಿ ವಿಭಾಗಗಳಲ್ಲಿ ಸಮಗ್ರ ಚಾಂಪಿಯನ್ಸ್

    13/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.